ತೋಟದ ಮನೆಯಲ್ಲಿ ರಮೇಶ್ ಜಾರಕಿಹೊಳಿ & ಯತ್ನಾಳ್ ರಹಸ್ಯ ಭೇಟಿ..!

suddionenews
1 Min Read

ವಿಜಯಪುರ: ಶಾಸಕ ಬಸನಗೌಡ ಯತ್ನಾಳ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆತ್ಮೀಯರಾಗಿ ಬಿಟ್ಟಿದ್ದಾರೆ. ಆಗಾಗ ಇಬ್ಬರು ಭೇಟಿ ಮಾಡಿ, ಚರ್ಚೆಯನ್ನು ನಡೆಸ್ತಾ ಇರ್ತಾರೆ. ಇದೀಗ ಯತ್ನಾಳ್ ತೋಟದ ಮನೆಯಲ್ಲಿ ಇಬ್ಬರ ಭೇಟಿ, ಚರ್ಚೆಗೆ ಗ್ರಾಸವಾಗಿದೆ.

ಸಿಎಂ ಸ್ಥಾನದಿಂದ ಬಸವರಾಜ್ ಬೊಮ್ಮಾಯಿ ಅವರನ್ನು ಬದಲಿಸುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಇವರಿಬ್ಬರ ರಹಸ್ಯ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೇಲೆ ಮತ್ತೆ ಸಚಿವರಾಗುವತ್ತ ಫ್ಲ್ಯಾ‌ನ್ ಮಾಡ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಚಿವ ಸ್ಥಾನದ ಬಗ್ಗೆ, ಜೊತೆಗೆ ಪರಿಷತ್ ಚುನಾವಣೆ ಬರುತ್ತಿರುವ ಬಗ್ಗೆ ಸೇರಿದಂತೆ ಹಲವು ವಿಚಾರಗಳನ್ನ ಇಬ್ಬರು ಚರ್ಚಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *