Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ವಿರೋಧಿಗಳಿಬ್ಬರ ಕಾರು ಎದುರು ಬದುರಾದಾಗ : ಜಾಗ ಬಿಟ್ಟಿದ್ದು ರಮೇಶ್ ಜಾರಕಿಹೊಳಿನಾ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರನಾ..?

---Advertisement---

ಬೆಳಗಾವಿ: ಕಳೆದ ಕೆಲವು ವರ್ಷಗಳಿಂದ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಬದ್ಧ ವೈರಿಗಳಾಗಿದ್ದಾರೆ. ಒಬ್ಬರನ್ನು ಕಂಡರೆ ಒಬ್ಬರಿಗೆ ಆಗುತ್ತಿಲ್ಲ. ಹೇಗಾದರೂ ಮಾಡಿ ವಿರೋಧಿಯನ್ನು ಸೋಲಿಸಿ ನಾವೇ ಗೆಲ್ಲಬೇಕೆಂದು ಇಬ್ಬರು ಪಣ ತೊಟ್ಟಿದ್ದಾರೆ. ಅದಕ್ಕೆಂದೆ ಹೋರಾಟ ನಡೆಸುತ್ತಿದ್ದಾರೆ. ಇದೀಗ ಅಷ್ಟು ಬದ್ಧ ವೈರಿಗಳ ಕಾರು ಮುಖಾಮುಖಿಯಾದರೆ ಏನಾಗುತ್ತೆ..? ಅಂತದ್ದೊಂದು ಘಟನೆ ಇಂದು ರಾಜಹಂಸಘಡ ಕೋಟೆ ಬಳಿ ನಡೆದಿದೆ.

ರಮೇಶ್ ಜಾರಕಿಹೊಳಿ ಇದ್ದ ಕಾರು ಹಾಗೂ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿಯಿದ್ದಂತ ಕಾರು ಮುಖಾಮುಖಿಯಾಗಿದ್ದಾರೆ. ಅದರಲ್ಲೂ ರಾಜಹಂಸಗಡದಲ್ಲಿಯೇ ಮುಖಾಮುಖಿಯಾಗಿದ್ದು ಎಲ್ಲರು ಸಿನಿಮಾದ ರೀತಿಯಲ್ಲಿ ನೋಡುತ್ತಾ ನಿಂತಿದ್ದರು. ಯಾಕಂದ್ರೆ ರಾಜಹಂಸಗಡದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಕ್ರೆಡಿಟ್ ಪಾಲಿಟಿಕ್ಸ್ ಶುರುವಾಗಿದೆ.

ಕಾಂಗ್ರೆಸ್ ನಾಯಕರಿಂದ ರಾಜಹಂಸಗಡ ಕೋಟೆಯಲ್ಲಿ ಶಿವಾಜಿ ಪ್ರತಿಮೆ ಉದ್ಘಾಟನೆ ಮಾಡಿಸಲು ಲಕ್ಷ್ಮೀ ಹೆಬ್ಬಾಳ್ಕರ್ ಪ್ಲ್ಯಾನ್ ನಡೆಸಿದ್ದಾರೆ. ಮಾರ್ಚ್ 5ರಂದು ಡೇಟ್ ಕೂಡ ಫಿಕ್ಸ್ ಆಹಿದೆಯ. ಆದರೆ ಇದು ಆಗದಂತೆ ಯಡೆಯುವುದಕ್ಕೆ ರಮೇಶ್ ಜಾರಕಿಹೊಳಿ ಸಜ್ಜಾಗಿದ್ದಾರೆ. ಇಷ್ಟೆಲ್ಲಾ ಪಾಲಿಟಿಕ್ಸ್ ಇರುವಾಗಲೇ ರಾಜಹಂಸಗಡದಲ್ಲಿಯೇ ಇಬ್ಬರು ಮುಖಾಮುಖಿಯಾಗಿದ್ದರು.

ಇಬ್ಬರ ಕಾರು ಒಂದೇ ಲಡೆ ನಿಂತಿದ್ದರಿಂದ ಎರಡು ಪಕ್ಷದ ಕಾರ್ಯಕರ್ತರು ಕಿರುಚುವುದಕ್ಕೆ ಶುರು ಮಾಡಿದರು. ಸ್ವಲ್ಪ ಸಮಯ ಗೊಂದಲದ ವಾತಾವರಣವೇ ನಿರ್ಮಾಣವಾಗಿತ್ತು. ಬಳಿಕ ರಮೇಶ್ ಜಾರಕಿಹೊಳಿ ಕಾರು ನಿಲ್ಲಿಸಿ, ಕೋಟೆ ಒಳಗೆ ನಡೆದೆ ಹೋದರು. ಚನ್ನರಾಜ್ ಕಾರು ಸ್ವಲ್ಪ ದೂರಕ್ಕೆ ತೆಗೆದುಕೊಂಡು ಹೋಗಲಾಯಿತು. ಬಳಿಕ ಪರಿಸ್ಥಿತಿ ತಿಳಿಯಾಗಿತ್ತು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...