ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕಳೆದ ಕೆಲವು ದಿನಗಳ ಹಿಂದೆ ಕಿಚ್ಚ ಸುದೀಪ್ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಬೆದರಿಕೆ ಪತ್ರವನ್ನು ಪೋಸ್ಟ್ ಮಾಡಿ, ನಿನ್ನ ಅಸಲಿ ಮುಖ ತೋರಿಸುತ್ತೇನೆ ಎಂದು ಬರೆದಿದ್ದರು. ಜೊತೆಗೆ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆಯನ್ನು ಹಾಕಿದ್ದರು. ಈ ಸಂಬಂಧ ನಿರ್ಮಾಪಕ ಜ್ಯಾಕ್ ಮಂಜು ದೂರನ್ನು ನೀಡಿದ್ದರು. ಇದೀಗ ಆ ಪತ್ರ ಕೊಟ್ಟ ವ್ಯಕ್ತಿಯ ಬಂಧನವಾಗಿದೆ. ಆ ರಮೇಶ್ ಕಿಟ್ಟಿ.
ಪೊಲೀಸರು ಈ ಕೇಸನ್ನು ಸಿಸಿಬಿಗೆ ವಹಿಸಿದ್ದರು. ಕಳೆದ ಎರಡು ತಿಂಗಳಿನಿಂದ ಬೆದರಿಕೆ ಪತ್ರ ಕೊಟ್ಟವರ ಹುಡುಕಾಟ ನಡೆಯುತ್ತಲೇ ಇತ್ತು. ಈಗ ರಮೇಶ್ ಕಿಟ್ಟಿಯ ಬಂಧನವಾಗಿದೆ. ರಮೇಶ್ ಕಿಟ್ಟಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಅದರ ಜೊತೆಗೆ ಕಿಚ್ಚನಿಗೆ ಆತ್ಮೀಯರು ಆಗಿದ್ದವರು. ಕೆಲ ಕಾಲ ಕಿಚ್ಚ ಚಾರಿಟಬಲ್ ಟ್ರಸ್ಟ್ ಅನ್ನು ಇವರೇ ನೋಡಿಕೊಳ್ಳುತ್ತಿದ್ದರು. ಜೊತೆಗೆ ಎರಡು ಕೋಟಿ ಹಣವನ್ನು ಹೂಡಿಕೆ ಮಾಡಿದ್ದರಂತೆ.
ಹೂಡಿಕೆ ಮಾಡಿದ್ದ ಹಣ ಕೇಳಿದಾಗ ಸುದೀಪ್ ಹಿಂತಿರಿಗಿಸಲಿಲ್ಲ. ಹೀಗಾಗಿ ಸುದೀಪ್ ಅವರಿಗೆ ಬೆದರಿಕೆ ಪತ್ರ ಬರೆದಿದ್ದಾರೆ ಎನ್ನಲಾಗುತ್ತಿದೆ. ಇನ್ನು ಹಲವರ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದು, ಇಮ್ನು ಸತ್ಯ ಹೊರ ಬರಬೇಕಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್