Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಾಮೇಶ್ವರಂ ಕೆಫೆ ಬ್ಲಾಸ್ಟ್ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

---Advertisement---

 

ಬೆಂಗಳೂರು: ಇಂದು ಸಿಲಿಕಾನ್ ಸಿಟಿಯ ಮಂದಿಯನ್ನೇ ಬೆಚ್ಚಿಬೀಳಿಸಿದೆ ರಾಮೇಶ್ವರಂ ಕೆಫೆ ಸ್ಪೋಟ. ಯಾಕಂದ್ರೆ ರಾಮೇಶ್ವರಂ ಕೆಫೆ ಸಿಕ್ಕಾಪಟ್ಟೆ ಫೇಮಸ್ ಆಗಿದೆ. ಪ್ರತಿ ದಿನ ಏನಿಲ್ಲ ಅಂದ್ರು ಐದರಿಂದ ಆರು ಸಾವಿರ ಮಂದಿ ಭೇಟಿ ನೀಡುತ್ತಾರೆ. ಇಂಥ ಜಾಗದಲ್ಲಿ ಬ್ಲಾಸ್ಟ್ ಆಗಿರುವುದು ಆತಂಕಕ್ಕೆ ಕಾರಣವಾಗಿದೆ. ಕುಂದಲಹಳ್ಳಿಯಲ್ಲಿರುವ ಕೆಫೆ ಬ್ಲಾಸ್ಟ್ ಆಗಿದ್ದು, ಹಲವರು ಗಾಯಗೊಂಡಿದ್ದಾರೆ.

 

ಮೈಸೂರು ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಈ ಸ್ಪೋಟದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸ್ಪೋಟದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. ಟೆರರಿಸ್ಟ್ ಮಾಡಿರುವ ಸಂಗತಿ ಎಂಬುದು ನಮಗೆ ತಿಳಿದಿಲ್ಲ. ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ. ಸಿಸಿಟಿವಿಯ‌ನ್ನು ಪರಿಶೀಲನೆ ಮಾಡಲಾಗುತ್ತಿದೆ. ಯಾರೋ ಒಬ್ಬ ಬ್ಯಾಗ್ ಇಟ್ಟಿದ್ದ ಎಂಬ ಮಾಹಿತಿ ತಿಳಿದು ಬಂದಿದೆ. ಪೊಲೀಸರು ಅದರ ತನಿಖೆ ನಡೆಸುತ್ತಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಪೊಲೀಸರು ಸ್ಥಳಕ್ಕೆ ಹೋಗಿದ್ದಾರೆ. ಸ್ಪೋಟಕ ಬಾರೀ ಪ್ರಮಾಣದಲ್ಲಿ ನಡೆದಿಲ್ಲ. ಸಣ್ಣ ಪ್ರಮಾಣದ ಸ್ಪೋಟ ಅದು. ಆದರೂ ಪರಿಣಾಮಕಾರಿಯಾಗಿದೆ. ಇತ್ತಿಚೆಗೆ ಇಂತಹ ಘಟನೆಗಳು ನಡೆದಿರಲಿಲ್ಲ. ಮಂಗಳೂರಿನಲ್ಲಿ ಹಿಂದಿನ ಸರ್ಕಾರದ ಸಮಯದಲ್ಲಿ ನಡೆದಿತ್ತು. ನಮ್ಮ ಸರ್ಕಾರದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಪತ್ತೆ ಹಚ್ಚಿ ಶಿಕ್ಷೆ ನೀಡಲಾಗುತ್ತದೆ.

ಬ್ಲಾಸ್ಟ್ ಮಾಡಿರುವುದು ಸತ್ಯ. ಬ್ಲಾಸ್ಟ್ ಮಾಡಿರುವವರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಶಸ್ತಿನ, ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಕಾತಣ ಮಾಡಬಾರದು. ಪೊಲೀಸರು ಸೂಕ್ತ ತನಿಖೆ ನಡೆಸುತ್ತಿದ್ದಾರೆ. ಆತ ಕ್ಯಾಶಿಯರ್ ಬಳಿ ಹೋಗಿ ಟೋಕನ್ ತೆಗೆದುಕೊಂಡಿದ್ದಾನೆ.ಅವರ ಬಳಿ ಬ್ಯಾಗ್ ಇರಿಸಿದ್ದಾನೆ. ಈ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...