Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಮೇಶ್ವರಂ ಕೆಫೆ : ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು : ಇಂದಿರಾನಗರದಲ್ಲಿರುವ ರಾಮೇಶ್ವರಂ ಕೆಫೆ ಸ್ಪೋಟ ಸಿಲಿಕಾನ್ ಸಿಟಿ ಮಂದಿಯಲ್ಲಿ ಕೊಂಚ ಭಯದ ವಾತಾವರಣವನ್ನು ಉಂಟು ಮಾಡಿದೆ. ಸೇಫ್ ಬೆಂಗಳೂರು ಬಗ್ಗೆ ಅನೇಕ ಕಾರ್ಯಕ್ರಮಗಳನ್ನು ಮಾಡಲಾಗಿದೆ. ಆದರೂ ಈ ರೀತಿಯ ಬಾಂಬ್ ಬ್ಲಾಸ್ಟ್ ಘಟನೆಗಳ ಕೆಲವೊಂದು ಆತಂಕ ಸೃಷ್ಟಿ‌ ಮಾಡುತ್ತವೆ. ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಗ್ಗೆ ನಿನ್ನೆಯಿಂದಾನೂ ತನಿಖೆ ನಡೆಯುತ್ತಿದೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಮಾತನಾಡಿದ್ದಾರೆ.

‘ಘಟನೆ ಸಂಬಂಧ ಬಹಳ ಸೀರಿಯಸ್ ಆಗಿ, ಆಳವಾಗಿ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಹಳಷ್ಟು ಕುರುಹುಗಳು ಸಿಕ್ಕಿವೆ. ಸಿಸಿಟಿವಿಯಲ್ಲೂ ಸಾಕ್ಷ್ಯಗಳು ಸಿಕ್ಕಿವೆ. ಆತ ಸುಮಾರು 28 ಬಸ್ ಗಳು ಓಡಾಡಿವೆ. ಆತ ಬಸ್ ನಲ್ಲಿ ಬಂದಿದ್ದಾನೆ ಎಂಬ ಮಾಹಿತಿ ನಮಗೆ ಸಿಕ್ಕಿದೆ. ಬಸ್ ಗಳಲ್ಲೂ ಸಿಸಿ ಕ್ಯಾಮೆರಾಗಳಿವೆ. ಯಾವುದೇ ಕಾರಣಕ್ಕೂ ಅಪರಾಧಿಯನ್ನು ತಪ್ಪಿಸಿಕೊಳ್ಳುವುದಕ್ಕೆ ಬಿಡುವುದಿಲ್ಲ.

ಈ ಕೃತ್ಯ ಒಬ್ಬನಿಂದ ಮಾತ್ರ ನಡೆದಿದೆಯೋ ಅಥವಾ ಅವನ ಹಿಂದೆ ಬೇರೆ ಯಾರಾದರೂ ಇದ್ದಾರ ಎಂಬೆಲ್ಲಾ ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ. ಹೊಟೇಲ್ ನವರು ಮೂರ್ನಾಲ್ಕು ಕಡೆ ಸಕ್ಸಸ್ ಆಗಿದ್ದಾರೆ ಎಂಬ ಕಾರಣಕ್ಕೂ ಹೀಗೆ ಮಾಡಿರಬಹುದು. ಸ್ಥಳಕ್ಕೆ ಹೋದಾಗ ಅಲ್ಲಿ ಕೆಲವರು ಈ ವಿಚಾರವಾಗಿ ಮಾತನಾಡಿದ್ದಾರೆ. ಹೀಗಾಗಿ ಎಲ್ಲಾ ಆಯಾಮದಿಂದಾನೂ ತನಿಖೆ ನಡೆಯುತ್ತಿದೆ. 2022ರಲ್ಲಿ ಕುಕ್ಕರ್ ಬ್ಲಾಸ್ಟ್ ಆದಾಗ ಅವರು ರಾಜೀನಾಮೆ ನೀಡಿದ್ರಾ..? ಅವರು ಎಲ್ಲದಕ್ಕೂ ರಾಜೀನಾಮೆ ಕೇಳ್ತಾರೆ. ಈ ಸಮಯದಲ್ಲಿ ಸಹಕಾರ ಕೋರಿದ್ದೇವೆ. ಇದು ರಾಜ್ಯದ ಮತ್ತು ಬೆಂಗಳೂರು ಸೇಫ್ಟಿಯ ಪ್ರಶ್ನೆ. ಹೀಗಾಗಿ ತನಿಖೆ ನಡೆಯುತ್ತಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

ಹೊಸದುರ್ಗ | ಕೃಷಿ‌ ಮಾರುಕಟ್ಟೆಯಲ್ಲಿ ಡಿ. ಗ್ರೂಪ್ ನೌಕರ ಆತ್ಮಹತ್ಯೆ..!

ಸುದ್ದಿಒನ್, ಹೊಸದುರ್ಗ, ಮೇ. 20 : ಕೃಷಿ ಮಾರುಕಟ್ಟೆಯಲ್ಲಿಯೇ ಡಿ ಗ್ರೂಪ್ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇದನ್ನು ಕಂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಸಿಬ್ಬಂದಿ ಶಾಕ್ ಆಗಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಮಳೆ ವರದಿ : ಸೂಗೂರುನಲ್ಲಿ ಹೆಚ್ಚು ಮಳೆ

  ಚಿತ್ರದುರ್ಗ,ಮೇ.20 : ಭಾನುವಾರ ಸುರಿದ ಮಳೆ ವಿವರದನ್ವಯ ಹಿರಿಯೂರು ತಾಲ್ಲೂಕಿನ ಸೂಗೂರುನಲ್ಲಿ 52.4ಮಿ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 11.4 ಮಿ.ಮೀ, ಇಕ್ಕನೂರು 26 ಮಿ.ಮೀ,

error: Content is protected !!