ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಆರೋಪಿ ಎಷ್ಟೇ ಬುದ್ದಿವಂತನಾದರೂ ಸಣ್ಣ ಸಾಕ್ಷಿಯನ್ನಾದರೂ ಬಿಟ್ಟು ಹೋಗಿರಲೇಬೇಕು ಎಂಬ ಮಾತಿದೆ. ಅದರಂತೆ ಇದೀಗ ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟ ಆರೋಪಿ ತನ್ನ ಸುಳಿವನ್ನು ಬಿಟ್ಟು ಹೋಗುದ್ದಾನೆ. ಕಳೆದ ಆರು ದಿನಗಳಿಂದ ಆತನನ್ನು ಪೊಲೀಸರು ಹುಡುಕುತ್ತಲೇ ಇದ್ದಾರೆ. ಆದರೆ ಆತ ಎಲ್ಲಿಗೆ ಹೋಗಿದ್ದಾನೆ ಎಂಬ ಸುಳಿವು ಸಿಗುತ್ತಿಲ್ಲ. ಬಹಳ ಬುದ್ದಿವಂತಿಕೆಯಿಂದ ತನ್ನ ಕೆಲಸ ಮಾಡಿ ಮುಗಿಸಿದ್ದಾನೆ. ತುಮಕೂರು, ಬಳ್ಳಾರಿಯಲ್ಲೆಲ್ಲಾ ಎನ್ಐಎ ಹುಡುಕಾಟ ನಡೆಸುತ್ತಿದೆ. ಆದರೂ ಆತನ ಪತ್ತೆಯಾಗಿಲ್ಲ. ಇದರ ನಡುವೆ ಆತನ ಟೋಪಿಯೊಂದು ಸಿಕ್ಕಿದೆ.
ಆರೋಪಿ ಬಾಂಬ್ ಇಡುವುದಕ್ಕೆ ಬಂದಾಗ ಎಲ್ಲಿಯೂ ಟೋಪಿ ತೆಗೆದಿಲ್ಲ, ಮಾಸ್ಕ್ ತೆಗೆದಿಲ್ಲ. ತನ್ನ ಗುರುತು ಸಿಗಬಾರದೆಂದು ಆ ಎರಡನ್ನು ಹಾಗೇ ಬ್ಯಾಲೆನ್ಸ್ ಮಾಡಿದ್ದಾನೆ. ಆದರೆ ಬಸ್ ಒಂದರಲ್ಲಿ ಯಾಮಾರಿ ಮಾಸ್ಕ್ ತೆಗೆದಿದ್ದಾನೆ. ಇನ್ನೊಂದು ಕಡೆ ಬಟ್ಟೆ ಬದಲಿಸುವಾಗ ಟೋಪಿಯನ್ನು ಬಿಟ್ಟು ಹೋಗಿದ್ದಾನೆ. ಬಸ್ ನಲ್ಲಿ ಮಾಸ್ಕ್ ತೆಗೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಯ ಮುಖ ಸ್ಪಷ್ಟವಾಗಿ ಕಾಣದೆ ಹೋದರೂ, ಆತನ ಚಿತ್ರವನ್ನು ಬಿಡಿಸಲಾಗಿದೆ. ಸ್ಕೆಚ್ ಬಿಡಿಸಿ, ಪೊಲೀಸರು ರಿಲೀಸ್ ಮಾಡಿದ್ದಾರೆ.
ಈ ಬಾಂಬರ್ ತುಮಕೂರು ತಲುಪಿ ಅಲ್ಲಿಂದ ಬಳ್ಳಾರಿ ತಲುಪಿದ್ದಾನೆ. ಅಲ್ಲಿಂದ ಬೀದರ್ ಗೆ ತಲುಪಿರುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಆತನನ್ನು ಹುಡುಕಿ ಕೊಟ್ಟವರಿಗೆ 10 ಲಕ್ಷ ಬಹುಮಾನವನ್ನು ನೀಡುವುದಾಗಿಯೂ ಘೋಷಣೆ ಮಾಡಲಾಗಿದೆ. ಸದ್ಯ ಆತನ ಚಿತ್ರದ ಸ್ಕೆಚ್ ಕೂಡ ರಿಲೀಸ್ ಆಗಿದ್ದು, ಸಿಸಿಬಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಾಧ್ಯವಾದಷ್ಟು ಬೇಗ ಆರೋಪಿ ಸಿಗುವ ನಿರೀಕ್ಷೆ ಇದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್