Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೋಪಿ ಬಿಟ್ಟು ಹೋದ ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟವ : ಟೋಪಿ ವಶಕ್ಕೆ ಪಡೆದ ಪೊಲೀಸರು..!

Facebook
Twitter
Telegram
WhatsApp

ಬೆಂಗಳೂರು: ಆರೋಪಿ ಎಷ್ಟೇ ಬುದ್ದಿವಂತನಾದರೂ ಸಣ್ಣ ಸಾಕ್ಷಿಯನ್ನಾದರೂ ಬಿಟ್ಟು ಹೋಗಿರಲೇಬೇಕು ಎಂಬ ಮಾತಿದೆ. ಅದರಂತೆ ಇದೀಗ ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟ ಆರೋಪಿ ತನ್ನ ಸುಳಿವನ್ನು ಬಿಟ್ಟು ಹೋಗುದ್ದಾನೆ. ಕಳೆದ ಆರು ದಿನಗಳಿಂದ ಆತನನ್ನು ಪೊಲೀಸರು ಹುಡುಕುತ್ತಲೇ ಇದ್ದಾರೆ. ಆದರೆ ಆತ ಎಲ್ಲಿಗೆ ಹೋಗಿದ್ದಾನೆ ಎಂಬ ಸುಳಿವು ಸಿಗುತ್ತಿಲ್ಲ. ಬಹಳ ಬುದ್ದಿವಂತಿಕೆಯಿಂದ ತನ್ನ ಕೆಲಸ ಮಾಡಿ ಮುಗಿಸಿದ್ದಾನೆ. ತುಮಕೂರು, ಬಳ್ಳಾರಿಯಲ್ಲೆಲ್ಲಾ ಎನ್ಐಎ ಹುಡುಕಾಟ ನಡೆಸುತ್ತಿದೆ. ಆದರೂ ಆತನ ಪತ್ತೆಯಾಗಿಲ್ಲ. ಇದರ ನಡುವೆ ಆತನ ಟೋಪಿಯೊಂದು ಸಿಕ್ಕಿದೆ.

 

ಆರೋಪಿ ಬಾಂಬ್ ಇಡುವುದಕ್ಕೆ ಬಂದಾಗ ಎಲ್ಲಿಯೂ ಟೋಪಿ ತೆಗೆದಿಲ್ಲ, ಮಾಸ್ಕ್ ತೆಗೆದಿಲ್ಲ. ತನ್ನ ಗುರುತು ಸಿಗಬಾರದೆಂದು ಆ ಎರಡನ್ನು ಹಾಗೇ ಬ್ಯಾಲೆನ್ಸ್ ಮಾಡಿದ್ದಾನೆ. ಆದರೆ ಬಸ್ ಒಂದರಲ್ಲಿ ಯಾಮಾರಿ ಮಾಸ್ಕ್ ತೆಗೆದಿದ್ದಾನೆ. ಇನ್ನೊಂದು ಕಡೆ ಬಟ್ಟೆ ಬದಲಿಸುವಾಗ ಟೋಪಿಯನ್ನು ಬಿಟ್ಟು ಹೋಗಿದ್ದಾನೆ. ಬಸ್ ನಲ್ಲಿ ಮಾಸ್ಕ್ ತೆಗೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಯ ಮುಖ ಸ್ಪಷ್ಟವಾಗಿ ಕಾಣದೆ ಹೋದರೂ, ಆತನ ಚಿತ್ರವನ್ನು ಬಿಡಿಸಲಾಗಿದೆ. ಸ್ಕೆಚ್ ಬಿಡಿಸಿ, ಪೊಲೀಸರು ರಿಲೀಸ್ ಮಾಡಿದ್ದಾರೆ.

ಈ ಬಾಂಬರ್ ತುಮಕೂರು ತಲುಪಿ ಅಲ್ಲಿಂದ ಬಳ್ಳಾರಿ ತಲುಪಿದ್ದಾನೆ. ಅಲ್ಲಿಂದ ಬೀದರ್ ಗೆ ತಲುಪಿರುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಆತನನ್ನು ಹುಡುಕಿ ಕೊಟ್ಟವರಿಗೆ 10 ಲಕ್ಷ ಬಹುಮಾನವನ್ನು ನೀಡುವುದಾಗಿಯೂ ಘೋಷಣೆ ಮಾಡಲಾಗಿದೆ. ಸದ್ಯ ಆತನ ಚಿತ್ರದ ಸ್ಕೆಚ್ ಕೂಡ ರಿಲೀಸ್ ಆಗಿದ್ದು, ಸಿಸಿಬಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಾಧ್ಯವಾದಷ್ಟು ಬೇಗ ಆರೋಪಿ ಸಿಗುವ ನಿರೀಕ್ಷೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!