Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಂಪುರ ಪೊಲೀಸರಿಂದ ಮನೆಗಳ್ಳನ ಬಂಧನ, ನಗದು ಮತ್ತು ಬೆಳ್ಳಿ ಆಭರಣಗಳ ವಶ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.13 :  ಜಿಲ್ಲೆಯ ರಾಂಪುರ ಪೊಲೀಸರು ಓರ್ವ ಮನೆಗಳ್ಳನನ್ನು ಬಂಧಿಸಿದ್ದಾರೆ. ಬಂಧಿತನಿಂದ ನಗದು ಮತ್ತು ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಬಳ್ಳಾರಿ ನಗರದ ಗುಗ್ಗರಹಟ್ಟಿಯ ಲಾರಿ ಡ್ರೈವರ್,
ಲೋಕೇಶ್ (28ವರ್ಷ) ಬಂಧಿತ ಆರೋಪಿ.

ರಾಂಪುರ ಗ್ರಾಮದ ಶಾಹೀದ್ ಖಾನ್‍ರವರು ತಮ್ಮ ಮನೆಯಲ್ಲಿದ್ದ 08 ಗ್ರಾಂ ತೂಕದ ಕೊರಳ ಚೈನ್, ಬೆಳ್ಳಿ
ಬ್ರಾಸ್‍ಲೆಟ್ ಮತ್ತು 32000/- ರೂ.ಗಳ ನಗದು ಹಣ ಕಳ್ಳತನವಾಗಿರುತ್ತದೆ. ಮತ್ತು ಶಾಹೀದ್ ಖಾನ್ ರವರ ಸಂಬಂಧಿಯಾದ ನಾಸೀರ್ ಹುಸೇನ್
ರವರ ಮನೆಯಲ್ಲಿಯೂ ಸಹಾ ಕಳ್ಳತನವಾಗಿದ್ದು ಅವರ ಮನೆಯಲ್ಲಿದ್ದ 05 ಬೆಳ್ಳಿ 02 ಬಂಗಾರದ ಉಂಗುರಗಳನ್ನು
ಹಾಗೂ 24000/- ರೂ.ಗಳ ನಗದು ಹಣ ಕಳುವಾಗಿದೆ ಎಂದು
ರಾಂಪುರ ಪೊಲೀಸರಿಗೆ ದೂರು ನೀಡಿದ್ದರು.

ಆರೋಪಿ ಪತ್ತೆಗಾಗಿ ಚಳ್ಳಕೆರೆ ಪೊಲೀಸ್ ಉಪಾಧೀಕ್ಷಕರಾದ
ಟಿ.ಬಿ. ರಾಜಣ್ಣ ಹಾಗೂ ಮೊಳಕಾಲ್ಮೂರು ವೃತ್ತ ನಿರೀಕ್ಷಕರಾದ ವಸಂತ ವಿ ಅಸೋದೆ ಅವರ ಮಾರ್ಗದರ್ಶನದ ಮೇರೆಗೆ ರಾಂಪುರ ಠಾಣೆಯ ಪಿ.ಎಸ್.ಐ ಮಹೇಶ್ ಲಕ್ಷ್ಮಣ ಹೊಸಪೇಟೆ ರವರು ಮತ್ತು ಸಿಬ್ಬಂದಿಗಳ ತಂಡವು ಫೆಬ್ರವರಿ 11 ರಂದು ಪ್ರಕರಣದ ಆರೋಪಿಯಾದ ಲೋಕೇಶ್ ನನ್ನು ಬಂಧಿಸಿ ನಗದು ಮತ್ತು ಬೆಳ್ಳಿ ಆಭರಣಗಳ ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣದ ಆರೋಪಿಯು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು, ಇದೇ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಇಬ್ಬರು ಆರೋಪಿಗಳು ಬೇರೆ ಠಾಣೆಯ ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಮಹೇಶ್ ಲಕ್ಷ್ಮಣ ಹೊಸಪೇಟೆ, ಪಿ.ಎಸ್.ಐ ಮತ್ತು
ಸಿಬ್ಬಂದಿಗಳಾದ ಇಮಾಮ್ ಹುಸೇನ್, ಗೋಣೆಪ್ಪ, ಬಸವರಾಜ, ಪ್ರೇಮ್‍ಕುಮಾರ್, ಗೋವಿಂದ ರವರುಗಳ
ಕಾರ್ಯವನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿರುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!