Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೀಪಿಕಾ ಪಡುಕೋಣೆ ಪರ ನಿಂರ ಮೋಹಕತಾರೆ ರಮ್ಯಾ..!

Facebook
Twitter
Telegram
WhatsApp

 

 

ಬಾಲಿವುಡ್ ನಲ್ಲಿ ಬಾಯ್ಕಾಟ್ ಸಂಸ್ಕೃತಿ ಶುರುವಾಗಿ ಬಹಳ ಕಾಲವೇ ಆಯ್ತು. ಬಾಯ್ಕಾಟ್ ನಿಂದಾಗಿ ಸಿನಿಮಾಗಳು ಸಾಲು ಸಾಲು ಸೋಲಾಗಿದೆ. ಶಾರುಖ್ ಖಾನ್ ಕೂಡ ಜೀರೋ ಸಿನಿಮಾದ ಸೋಲಿನಿಂದ ಸಂಕಟ ಅನುಭವಿಸಿದರು. ಸದ್ಯ ಪಠಾಣ್ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ ಬಾಯ್ಕಾಟ್ ನಿಂದಾಗಿ ಸಿನಿಮಾ ಸೋಲುವ ಆತಂಕ ಕಾಡುತ್ತಿದೆ.

ಪಠಾಣ್ ಸಿನಿಮಾದಿಂದ ಇತ್ತಿಚೆಗೆ ಬೇಷರಂ ರಂಗ್ ಹಾಡನ್ನು ರಿಲೀಸ್ ಮಾಡಲಾಗಿತ್ತು. ಆ ಹಾಡಿನಲ್ಲಿ ದೀಪಿಕಾ ಪಡುಕೋಣೆ ಸಿಕ್ಕಾಪಟ್ಟೆ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಕೊನೆಯಲ್ಲಿ ಕೇಸರಿ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದರು. ಇದೇ ವಿಚಾರಕ್ಕೆ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದರು. ಹಿಂದೂ ಸಂಘಟನೆಗಳು, ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಸಿನಿಮಾವನ್ನು ಬಾಯ್ಕಾಟ್ ಮಾಡೋಣಾ ಎಂದು ಅಭಿಯಾನ ಶುರು ಮಾಡಿದ್ದಾರೆ.

ಇದೀಗ ಸ್ಯಾಂಡಲ್ ವುಡ್ ಮೋಹಕತಾರೆ ರಮ್ಯಾ, ದೀಪಿಕಾ ಪರ ಬ್ಯಾಟ್ ಬೀಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಹಾಕಿದ್ದು, ಸಮಂತಾ ಡಿವೋರ್ಸ್ ತೆಗೆದುಕೊಂಡಾಗ ಅವರನ್ನೇ ಟ್ರೋಲ್ ಮಾಡಲಾಯ್ತು. ಯಾವುದೋ ವಿಚಾರದ ಬಗ್ಗೆ ಮಾತನಾಡಿದ್ದಕ್ಕೆ ಸಾಯಿ ಪಲ್ಲವಿ ಅವರನ್ನು ಟೀಕೆ ಮಾಡಿದ್ದಾಯ್ತು. ಈಗ ದೀಪಿಕಾ ಪಡುಕೋಣೆ ಸರದಿ. ದೀಪಿಕಾ ಅವರನ್ನು ತಾವೂ ಹಾಕಿಕೊಂಡ ಬಟ್ಟೆಯ ವಿಚಾರವಾಗಿ ಟ್ರೋಲ್ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ನಮ್ಮ ಹಕ್ಕು, ಹೆಣ್ಣು ಮಕ್ಕಳು ದುರ್ಗಾದೇವಿಯ ಮತ್ತೊಂದು ಅವತಾರ. ಸ್ತ್ರೀ ದ್ವೇಷಿ ಅಸುರನಿದ್ದಂತೆ. ಹೀಗಾಗಿ ನಾವೂ ಹೋರಾಡಬೇಕಾಗಿದೆ ಎಂದು ಬರೆದುಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

ಹೆಚ್ಚುತ್ತಿರುವ ಬಿಸಿಲ ಝಳ : ಸಾರ್ವಜನಿಕರು ಅನುಸರಿಸಬೇಕಾದ ಸರಳ ಉಪಾಯಗಳ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ಎಸ್.ನಾಗಸಮುದ್ರ

ಚಿತ್ರದುರ್ಗ. ಮೇ.02: ರಾಜ್ಯಾದ್ಯಂತ ಬಿಸಿಲಬೇಗೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಉಷ್ಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಝಳವು ಮನುಷ್ಯನ ಆರೋಗ್ಯದ ಮೇಲೆ ತೀವ್ರತರವಾದ

ಕಾರ್ಮಿಕರು ಕೆಲಸದ ಜೊತೆ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು : ನ್ಯಾಯಾಧೀಶೆ ಬಿ.ಗೀತ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 02 : ಅನೇಕ ಸೌಲಭ್ಯಗಳಿಂದ ವಂಚಿತರಾಗಿರುವ ಅಸಂಘಟಿತ ಕಾರ್ಮಿಕರಿಗೆ ಹಕ್ಕುಗಳ ಕುರಿತು ಕಾನೂನು ಜಾಗೃತಿ

error: Content is protected !!