Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಂಜಾನ್  ತ್ಯಾಗ, ಪ್ರೀತಿ, ಶಾಂತಿಯ ಸಂಕೇತ :  ಬಿ.ಎನ್.ಚಂದ್ರಪ್ಪ

---Advertisement---

ಚಿತ್ರದುರ್ಗ  : ಏ.11 :  ಚಿತ್ರದುರ್ಗದ ಜಾಮಿಯಾ ಈದ್ಗಾ, ಕೊಹಿನೂರ್ ಈದ್ಗಾ, ತಬ್ಲೀಗಿ ಜಮಾದ್ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಸೇರಿದ್ದ ಅಪಾರ ಸಂಖ್ಯೆಯ ಮುಸ್ಲಿಂ ಬಾಂಧವರ ಜೊತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ  ಬಿ.ಎನ್.ಚಂದ್ರಪ್ಪ ಭಾಗವಹಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ನಂತರ ಮಾತನಾಡಿದ  ಬಿ.ಎನ್.ಚಂದ್ರಪ್ಪ, ಎಲ್ಲ ಧರ್ಮಗಳ ಆಶಯವೂ ಶಾಂತಿ, ಸೌಹಾರ್ದದಿಂದ ಇರಬೇಕು ಎನ್ನುವುದನ್ನು ತಿಳಿಸುವುದೇ ಆಗಿದೆ. ಅದನ್ನು ಎಲ್ಲರೂ ಪಾಲಿಸಬೇಕು. ಯಾವುದೇ ಧರ್ಮವೂ ಇನ್ನೊಂದು ಧರ್ಮಕ್ಕೆ ಕೇಡು ಬಯಸುವುದಿಲ್ಲ. ಎಲ್ಲ ಧರ್ಮಗಳು ಸಹೋದರತ್ವವನ್ನೇ ಸಾರಿವೆ ಮತ್ತು ಉತ್ತಮ ವಿಚಾರಗಳನ್ನು ಹೇಳಿವೆ. ಈ ಸೌಹಾರ್ದ ಪರಂಪರೆಯನ್ನು ಎಲ್ಲರೂ ಮುಂದುವರಿಸಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರಲ್ಲದೆ ಸಮಾಜದಲ್ಲಿ ಪ್ರತಿಯೊಬ್ಬರೂ ಸಹಬಾಳ್ವೆಯಿಂದ ಬದುಕಬೇಕು ಎಂದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಶಾಸಕರಾದ ವೀರೇಂದ್ರ ಪಪ್ಪಿ,ಡಿಸಿಸಿ ಅಧ್ಯಕ್ಷರಾದ ತಾಜ್ ಪೀರ್  ವಕ್ಫ್ ಬೋರ್ಡ್ ಅಧ್ಯಕ್ಷರಾದ  ಅನ್ವರ್, ಎ ಸಿ ಓ ಬಾಬು,ತಾಜ್ ಪೀರ್,ಮುಹೀಬ್ ಉಲ್ಲಾ, ಅಲ್ಲಾ ಬಕ್ಷಿ, ಖಾಸಿಂ ಅಲಿ, ಅನೀಸ್,ಖುದ್ದೂಸ್ ಹಾಗು ಅನೇಕ ಮುಸ್ಲಿಂ ಮುಖಂಡರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment