Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಜನವರಿ 25 ರಂದು ರಂಗಸೌರಭ ರಂಗೋತ್ಸವ

Facebook
Twitter
Telegram
WhatsApp

ಚಿತ್ರದುರ್ಗ, (ಜ.23): ರಂಗಸೌರಭ ಕಲಾ ಸಂಘ ಮತ್ತು ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ ಬೆಂಗಳೂರು ಸಂಯುಕ್ತ ಆಶ್ರಯದಲ್ಲಿ ಶ್ರೀ ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜನವರಿ ಇಪ್ಪತ್ತೈದರಂದು ಬೆಳಿಗ್ಗೆ ಹನ್ನೊಂದು ಗಂಟೆಗೆ ರಂಗಸೌರಭ ರಂಗೋತ್ಸವ ಅಂಗವಾಗಿ ರಂಗ ಉಪನ್ಯಾಸ, ಗೀತಗಾಯನ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ ಮಲ್ಲಿಕಾರ್ಜುನ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಪ್ರಾಚಾರ್ಯ ಡಾ.ಎ.ಜಿ.ಬಸವರಾಜಪ್ಪ ಅಧ್ಯಕ್ಷತೆ ವಹಿಸುವರು. ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತಿನ ಜಿಲ್ಲಾಧ್ಯಕ್ಷ ಮಾಲತೇಶ್ ಅರಸ್ ಹರ್ತಿಕೋಟೆ ಇವರು ಶಿಕ್ಷಣದಲ್ಲಿ ಸಾಂಸ್ಕøತಿಕ ವಿಷಯವಾಗಿ ಉಪನ್ಯಾಸ ನೀಡಲಿದ್ದಾರೆ. ಚಲನಚಿತ್ರ ಹಾಸ್ಯನಟ ಮತ್ತು ನಾಟಕಕಾರ ಮೈಸೂರು ರಮಾನಂದ, ರಂಗನಿರ್ದೇಶಕ ಕೆಪಿಎಂ.ಗಣೇಶಯ್ಯ, ಉಪನ್ಯಾಸಕರಾದ ಬಿ.ಎಸ್.ನಟರಾಜ, ಡಾ.ಮೋಹನ್ ಕುಮಾರ್, ಮಹಾಂತೇಶ್.ಹೆಚ್, ಹೇಮಲತ.ಬಿ, ಸ್ವಾತಿ ಮುಂತಾದವರು ಮುಖ್ಯಅತಿಥಿಗಳಾಗಿ ಉಪಸ್ಥಿತರಿರುವರು.

ಬೆಂಗಳೂರಿನ ಗೆಜ್ಜೆಹೆಜ್ಜೆ ರಂಗತಂಡದವರಿಂದ ಕಂಡಕ್ಟರ್ ಗಂಗರಾಜು ವಿರಚಿತ ರಂಗಯ್ಯನ ರಾದ್ಧಾಂತ ನಾಟಕ ಪ್ರದರ್ಶನ, ರಂಗಸೌರಭ ಕಲಾವಿದರಿಂದ ಗೀತಗಾಯನ, ಮಧ್ಯಾಹ್ನ 2-30 ಗಂಟೆಗೆ ಇಂಗಳದಾಳ್ ತಳವಾರ ಸಂಚಾಲಪ್ಪ ಪ್ರೌಢಶಾಲೆ ಆವರಣದಲ್ಲಿ ಮೈಸೂರುರಮಾನಂದ ನಿರ್ದೇಶನದಲ್ಲಿ ನಿಂತ್ಕೋಳಿ ಅಲ್ಲಲ್ಲ ಕುಂತ್ಕೋಳಿ ಎಂಬ ಹಾಸ್ಯನಾಟಕ ಪ್ರದರ್ಶನಗೊಳ್ಳಲಿದೆ ಎಂದು ರಂಗಸೌರಭ ಕಲಾ ಸಂಘದ ನಿರ್ದೇಶಕ ಎಂ.ವಿ.ನಟರಾಜ ಪತ್ರಿಕಾ ಪ್ರಕಟಣೆ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!