Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅತ್ಯಾಚಾರ ಆರೋಪಿ ಮಡೆನೂರು ಮನುಗೆ ಜಾಮೀನು ಮಂಜೂರು..!

---Advertisement---

ಬೆಂಗಳೂರು; ಕಾಮಿಡಿ ಕಿಲಾಡಿಗಳು ಶೋ ಮೂಲಕ ಫೇಮಸ್ ಆಗಿದ್ದಂತ ಮಡೆನೂರು ಮನುಗೆ ಜಾಮೀನು ಮಂಜೂರಾಗಿದೆ. ಅತ್ಯಾಚಾರದ ಆರೋಪದ ಮೇಲೆ ಇಷ್ಟು ದಿನ ಸೆರೆವಾಸದಲ್ಲಿದ್ದ ಮಡೆನೂರು ಮನು ರಿಲೀಸ್ ಆಗಿದ್ದಾರೆ. ಕಾಮಿಡಿ ಕಿಲಾಡಿಗಳು ಶೋನಲ್ಲಿ ಸಹಸ್ಪರ್ಧಿಯಾಗಿದ್ದ ನಟಿಯೇ ಅತ್ಯಾಚಾರದ ದೂರನ್ನು ದಾಖಲಿಸಿದ್ದರು. ಇಂದು ಜಾಮೀನು ಸಿಕ್ಕಿದ್ದು, ಪರಪ್ಪನ ಅಗ್ರಹಾರ ಜೈಲಿನಿಂದ ನಾಳೆ ರಿಲೀಸ್ ಆಗಲಿದ್ದಾರೆ.

ಕಾಮಿಡಿ ಕಿಲಾಡಿಗಳು ಶೋ ವಿನ್ನರ್ ಆಗಿದ್ದ ಮಡೆನೂರು ಮನು ಆಗೊಂದು ಈಗೊಂದು ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಇತ್ತೀಚೆಗೆ ರಿಲೀಸ್ ಆದ ಕುಲದಲ್ಲಿ ಕೀಳ್ಯಾವುದೋ ಸಿನಿಮಾದಲ್ಲಿ ಬಹು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಸಿನಿಮಾ ರಿಲೀಸ್ ಆಗೋದಕ್ಕೂ ಮುನ್ನವೇ ಪೊಲೀಸರ ಅತಿಥಿಯಾಗಿದ್ದರು. ಬಳಿಕ ಮಡೆನೂರು ಮನು ಅವರ ಬಣ್ಣಗಳು ಒಂದೊಂದೆ ಬಯಲಾಗುತ್ತಾ ಹೋದವು. ಇದೀಗ ಜಾಮೀನು ಪಡೆದು ಹೊರಗೆ ಬರ್ತಿದ್ದಾರೆ. ನಾಳೆ ಪರಪ್ಪನ ಅಗ್ರಹಾರದಿಂದ ರಿಲೀಸ್ ಆಗಲಿದ್ದಾರೆ.

ಮಡೆನೂರು ಮನುಗೆ ಸಿನಿಮಾ ಎಂಬುದು ದೊಡ್ಡ ಕನಸಾಗಿತ್ತು. ಆ ಕನಸಿಗೆ ವಿಕಟಕವಿ, ಎಲ್ಲರ ನೆಚ್ಚಿನ ನಿರ್ದೇಶಕರಾದ ಯೋಗರಾಜ್ ಭಟ್ ಅವರು ಬೆಂಬಲ ನೀಡಿದ್ದರು. ಆದರೆ ಮಡೆನೂರು ಮನು ಅರೆಸ್ಟ್ ಆದಮೇಲೆ ಬಂದಂತ ಆಡಿಯೋಗಳಿಂದ ಎಲ್ಲರೂ ಆತನ ವಿರುದ್ಧವೇ ಇದ್ದಾರೆ. ಇನ್ಯಾವತ್ತು, ಯಾರು ಆತನಿಗೆ ಅವಕಾಶ ನೀಡಬಾರದು ಅಂತ ಈಗಾಗಲೇ ಫಿಲ್ಮ್ ಚೇಂಬರ್ ಕೂಡ ನಿರ್ಧಾರ ಮಾಡಿದೆ. ಅದರಲ್ಲೂ ಶಿವಣ್ಣನ ಬಗ್ಗೆ ಮಾತನಾಡಿದ್ದನ್ನ ಇಡೀ ಇಂಡಸ್ಟ್ರಿ ಸಹಿಸಿಲ್ಲ. ಅವರ ಸಾವನ್ನ ಬಯಸಿದ ಮಡೆನೂರು ಮನುಗೆ ಎಲ್ಲರೂ ಧಿಕ್ಕಾರವನ್ನೇ ಕೂಗಿದ್ದಾರೆ. ಸದ್ಯ ಜಾಮೀನು ಪಡೆದು ಹೊರಗೆ ಬಂದಿದ್ರು, ನಟನೆಯ ಭವಿಷ್ಯದ ಹಾದಿ ಮುಚ್ಚಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment