Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆಗೆ ದಿನಾಂಕ ಫಿಕ್ಸ್

---Advertisement---

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮದುವೆ ವಿಚಾರವಂತು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸದಾ ಸುದ್ದಿಯಾಗೋದು ರಶ್ಮಿಕಾ ಮಂದಣ್ಣ ಮದುವೆ ವಿಚಾರವೆ. ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ನಡುವೆ ಸಂಥಿಂಗ್ ಸ್ಪೆಷಲ್ ಇದೆ ಅಂತಾನೇ ಸುದ್ದಿ. ಅಧಿಕೃತವಾಗಿ ಇಬ್ಬರು ಹೇಳದೆ ಹೋದರು ಅವರಿಬ್ಬರ ಅಭಿಮಾನಿಗಳು ದಾಖಲೆ ಸಮೇತ ಇಬ್ಬರ ನಡುವೆ ಏನೋ ಇದೆ ಎಂಬುದನ್ನ ಹೇಳ್ತಾ ಇರ್ತಾರೆ. ಇದೀಗ ಇಬ್ಬರ ಮದುವೆಯ ದಿನಾಂಕವೂ ನಿಗದಿಯಾಗಿದೆ.

2026ರ ಫೆಬ್ರವರಿ 26 ರಂದು ಇಬ್ಬರ ಮದುವೆ ನಡೆಯಲಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ನಿಶ್ಚಿತಾರ್ಥ ಕೂಡ ಸದ್ದಿಲ್ಲದೆ, ಸುದ್ದಿಯಿಲ್ಲದೆ ನಡೆದಿತ್ತು. ಇದೀಗ ಮದುವೆಯೂ ಕೇವಲ ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ನಡೆಯಲಿದೆ ಎನ್ನಲಾಗಿದೆ. ರಾಜಸ್ಥಾನದ ಉದಯಪುರ ಪ್ಯಾಲೇಸ್ ನಲ್ಲಿ ಮದುವೆಗೆ ಎಲ್ಲಾ ತಯಾರಿಗಳನ್ನ ಮಾಡಿಕೊಳ್ಳಲಾಗಿದೆ. ಮದುವೆಯ ಬಳಿಕ ಹೈದ್ರಾಬಾದ್ ನಲ್ಲಿ ವಿಜಯ್ ದೇವರಕೊಂಡ ಅವರು ಆರತಕ್ಷತೆಯನ್ನ ಆಯೋಜನೆ ಮಾಡಿದ್ದಾರೆ ಎನ್ನುತ್ತಿವೆ ಮೂಲಗಳು.

ಇನ್ನು ಕಳೆದ ಅಕ್ಟೋಬರ್ ತಿಂಗಳಿನಲ್ಲಿಯೇ ರಶ್ಮಿಕಾ ಹಾಗೂ ವಿಜಯ್ ದೇವರಕೊಂಡ ನಿಶ್ಚಿತಾರ್ಥವಾಗಿದೆ. ಆದರೂ ಇಲ್ಲಿಯವರೆಗೂ ಅಧಿಕೃತವಾಗಿ ಎಲ್ಲಿಯೂ ಈ ವಿಚಾರವನ್ನ ಹೇಳಿಕೊಂಡಿಲ್ಲ. ಹೀಗೆ ಇತ್ತೀಚೆಗೆ ಸಂದರ್ಶನವೊಂದರಲ್ಲಿ ರಶ್ಮಿಕಾ ಮಂದಣ್ಣಗೆ ತಮ್ಮ ಮದುವೆ ವಿಚಾರದ ಬಗ್ಗೆಯೇ ಪ್ರಶ್ನೆಗಳು ಎದುರಾದವು. ಆಗಲು ನೇರವಾಗಿ ಹೇಳದ ರಶ್ಮಿಕಾ, ಮದುವೆ ವಿಚಾರವನ್ನ ಮುಚ್ಚಿಡುವಂತದ್ದು ಏನು ಇಲ್ಲ. ಆದರೆ ಆ ವಿಷಯವನ್ನ ಯಾವಾಗ ಹೇಳಬೇಕೋ ಆಗ ಹೇಳುತ್ತೇವೆ ಎಂಬುದನ್ನ ತಿಳಿಸಿದ್ದಾರೆ. ಫೆಬ್ರವರಿ 26 ತುಂಬಾ ದೂರ ಏನು ಇಲ್ಲ. ನೋಡೋಣಾ ಈ ಊಹಾಪೋಹಗಳು ಎಷ್ಟರಮಟ್ಟಿಗೆ ಸತ್ಯವಾಗುತ್ತವೆ ಎಂಬುದನ್ನ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now