Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರತನ್ ಟಾಟಾ ಅವರ ಕೊನೆಯ ಪೋಸ್ಟರ್ ವೈರಲ್ : ಸೋಷಿಯಲ್ ಮೀಡಿಯಾದಲ್ಲಿ ಅವರಾಕಿದ್ದು ಏನು ಗೊತ್ತಾ..?

Facebook
Twitter
Telegram
WhatsApp

ಹಿರಿಯ ಉದ್ಯಮಿ, ಕೈಗಾರಿಕೋದ್ಯಮದ ಸಾಮ್ರಾಜ್ಯ ಕಟ್ಟಿದ ಧೀಮಂತ ಇಂದು ನಮ್ಮೊಡನೆ ಇಲ್ಲ. ವಯೋ ಸಹಜ ಕಾಯಿಲೆಯಿಂದ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ರತನ್ ಟಾಟಾ ಅವರ ಆರೋಗ್ಯದ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿದ್ದವು. ಗಂಭೀರ ಪರಿಸ್ಥಿತಿಯಲ್ಲಿದ್ದಾರೆ ಎನ್ನಲಾಗಿತ್ತು. ಆ ವದಂತಿಗಳನ್ನು ತಳ್ಳಿ ಹಾಕುವ ಪ್ರಯತ್ನವನ್ನು ರತನ್ ಟಾಟಾ ಅವರು ಮಾಡಿದ್ದರು. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ವದಂತಿಗಳಿಗೆ ತೆತೆ ಎಳೆದಿದ್ದರು. ಆ ಕೊನೆಯ ಪೋಸ್ಟ್ ಈಗ ವೈರಲ್ ಆಗುತ್ತಿದೆ.

ಆ ಪೋಸ್ಟ್ ನಲ್ಲಿ ‘ನನ್ನ ಬಗ್ಗೆ ಯೋಚಿಸಿದ್ದಕ್ಕಾಗಿ ಧನ್ಯವಾದಗಳು’ ಎಂದು ಬರೆದಿದ್ದರು. ‘ನನ್ನ ಆರೋಗ್ಯದ ಬಗ್ಗೆ ಹರಡುತ್ತಿರುವ ಇತ್ತೀಚಿನ ವದಂತಿಗಳ ಬಗ್ಗೆ ನನಗೆ ತಿಳಿದಿದೆ ಮತ್ತು ಈ ಹಕ್ಕುಗಳು ಆಧಾರರಹಿತವಾಗಿವೆ ಎಂದು ಎಲ್ಲರಿಗೂ ಭರವಸೆ ನೀಡಲು ನಾನು ಬಯಸುತ್ತೇನೆ. ನನ್ನ ವಯಸ್ಸು ಮತ್ತು ಸಂಬಂಧಿತ ವೈದ್ಯಕೀಯ ಪರಿಸ್ಥಿತಿಗಳಿಂದಾಗಿ ನಾನು ಪ್ರಸ್ತುತ ವೈದ್ಯಕೀಯ ತಪಾಸಣೆಗೆ ಒಳಗಾಗುತ್ತಿದ್ದೇನೆ. ನಾನು ಉತ್ತಮ ಉತ್ಸಾಹದಲ್ಲಿ ಇದ್ದೇನೆ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು.

ಆ ಪೋಸ್ಟ್ ನೋಡಿದ ಸಾಕಷ್ಟು ಜನ ಅವರಿಗೆ ಹರಸಿ, ಹಾರೈಸಿದ್ದರು. ಆದಷ್ಟು ಬೇಗ ಗುಣಮುಖರಾಗಿ ಬನ್ನಿ ಎಂದು ಕೇಳಿದ್ದರು. ದೇವರಲ್ಲಿಯೂ ಪ್ರಾರ್ಥನೆ ಸಲ್ಲಿಸಿದ್ದರು. ಆದರೆ ಇಂದು ಅವರಿಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲಾಗದೆ ದುಃಖಿತರಾಗಿದ್ದಾರೆ. ಎರಡು ದಿನದ ಹಿಂದೆ ಪೋಸ್ಟ್ ಹಾಕಿದ್ದ ವ್ಯಕ್ತಿ ಜಗತ್ತನ್ನೇ ತೊರೆದು ಹೋಗಿದ್ದಾರೆ. ಇಂದು ಮಧ್ಯಾಹ್ನದವರೆಗೆ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಟ್ಟು ಸಂಜೆ ವೇಳೆಗೆ ಅಂತ್ಯ ಸಂಸ್ಕಾರ ಮಾಡಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!