ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 10 : ಕೆಳಗೋಟೆ ಸಿ.ಕೆ.ಪುರದಲ್ಲಿರುವ ಶ್ರೀ ಚನ್ನಕೇಶವ ಸ್ವಾಮಿಯ ರಥೋತ್ಸವ ಹಾಗೂ ಕಲ್ಯಾಣೋತ್ಸವ ಫೆಬ್ರವರಿ 11 ಮತ್ತು 12 ರಂದು ನಡೆಯಲಿದೆ.
ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಅಂಕುರಾರ್ಪಣ, ಧ್ವಜಾರೋಹಣ, ಕಲಶ ಸ್ಥಾಪನೆ, ನವಗ್ರಹ ಪೂಜೆ, ಹೋಮ, ವಾಸ್ತು ಶಾಂತಿ ಹೋಮ, ರಾಕ್ಷೋಘ್ನ ಹೋಮ, ಮಧ್ಯಾಹ್ನ 3-30 ರಿಂದ 5-30 ರವರೆಗೆ ಕೆಳಗೋಟೆ ಸಿ.ಕೆ.ಪುರ ಬಡಾವಣೆಯ ಪ್ರಮುಖ ಬೀದಿಗಳಲ್ಲಿ ಶ್ರೀದೇವಿ ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ಅಡ್ಡಪಲ್ಲಕ್ಕಿ ಮೆರವಣಿಗೆ. ಸಂಜೆ 6 ರಿಂದ 8-30 ರತನಕ ಸ್ವಾಮಿಯ ಕಲ್ಯಾಣೋತ್ಸವ ನೆರವೇರಲಿದೆ.
ರಾತ್ರಿ 8-30 ರಿಂದ 9 ಗಂಟೆಯವರೆಗೆ ಚನ್ನಕೇಶವಸ್ವಾಮಿಯ ಅಷ್ಟಾವಧಾನ ಪೂರ್ವಕವಾಗಿ ಉಯ್ಯಾಲೋತ್ಸವ ನಂತರ ಪ್ರಸಾದ ವಿನಿಯೋಗವಿರುತ್ತದೆ.
ಬುಧವಾರ ಮಧ್ಯಾಹ್ನ 11-50 ರಿಂದ 12-20 ರವರೆಗೆ ಶ್ರೀದೇವಿ ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ನಡೆಯಲಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಚನ್ನಕೇಶವಸ್ವಾಮಿ ದೇವಸ್ಥಾನದ ಸಂಚಾಲಕರು ಹಾಗೂ ಹಿರಿಯ ನ್ಯಾಯವಾದಿ ಫಾತ್ಯರಾಜನ್ ವಿನಂತಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್