ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 10 : ಕೆಳಗೋಟೆ ಸಿ.ಕೆ.ಪುರದಲ್ಲಿರುವ ಶ್ರೀ ಚನ್ನಕೇಶವ ಸ್ವಾಮಿಯ ರಥೋತ್ಸವ ಹಾಗೂ ಕಲ್ಯಾಣೋತ್ಸವ ಫೆಬ್ರವರಿ 11 ಮತ್ತು 12 ರಂದು ನಡೆಯಲಿದೆ.

ಮಂಗಳವಾರ ಬೆಳಿಗ್ಗೆ 9 ಗಂಟೆಯಿಂದ ಅಂಕುರಾರ್ಪಣ, ಧ್ವಜಾರೋಹಣ, ಕಲಶ ಸ್ಥಾಪನೆ, ನವಗ್ರಹ ಪೂಜೆ, ಹೋಮ, ವಾಸ್ತು ಶಾಂತಿ ಹೋಮ, ರಾಕ್ಷೋಘ್ನ ಹೋಮ, ಮಧ್ಯಾಹ್ನ 3-30 ರಿಂದ 5-30 ರವರೆಗೆ ಕೆಳಗೋಟೆ ಸಿ.ಕೆ.ಪುರ ಬಡಾವಣೆಯ ಪ್ರಮುಖ ಬೀದಿಗಳಲ್ಲಿ ಶ್ರೀದೇವಿ ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ಅಡ್ಡಪಲ್ಲಕ್ಕಿ ಮೆರವಣಿಗೆ. ಸಂಜೆ 6 ರಿಂದ 8-30 ರತನಕ ಸ್ವಾಮಿಯ ಕಲ್ಯಾಣೋತ್ಸವ ನೆರವೇರಲಿದೆ.
ರಾತ್ರಿ 8-30 ರಿಂದ 9 ಗಂಟೆಯವರೆಗೆ ಚನ್ನಕೇಶವಸ್ವಾಮಿಯ ಅಷ್ಟಾವಧಾನ ಪೂರ್ವಕವಾಗಿ ಉಯ್ಯಾಲೋತ್ಸವ ನಂತರ ಪ್ರಸಾದ ವಿನಿಯೋಗವಿರುತ್ತದೆ.
ಬುಧವಾರ ಮಧ್ಯಾಹ್ನ 11-50 ರಿಂದ 12-20 ರವರೆಗೆ ಶ್ರೀದೇವಿ ಭೂದೇವಿ ಸಹಿತ ಚನ್ನಕೇಶವಸ್ವಾಮಿಯ ರಥೋತ್ಸವ ವಿಜೃಂಭಣೆಯಿಂದ ನಡೆಯಲಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಚನ್ನಕೇಶವಸ್ವಾಮಿ ದೇವಸ್ಥಾನದ ಸಂಚಾಲಕರು ಹಾಗೂ ಹಿರಿಯ ನ್ಯಾಯವಾದಿ ಫಾತ್ಯರಾಜನ್ ವಿನಂತಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















