ಶಾಂತರಾಮ ತೀರ್ಥಾಶ್ರಮದಲ್ಲಿ ಸಡಗರ ಸಂಭ್ರಮದಿಂದ ನಡೆದ ರಥೋತ್ಸವ

suddionenews
0 Min Read

ಚಿತ್ರದುರ್ಗ: ಮೆದೆಹಳ್ಳಿ ರಸ್ತೆಯಲ್ಲಿರುವ ಅವಧೂತರ ಮಠ ಶಾಂತರಾಮ ತೀರ್ಥಾಶ್ರಮದಲ್ಲಿ ರಾಜಯೋಗಿಸ್ವಾಮಿ ರಾಮತೀರ್ಥರ ಹಾಗೂ ಚೂಡಾಮಣಿ ಮಾತಾಜಿಯವರ ಪುಣ್ಯಾರಾಧನೆ ಮತ್ತು ರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.

ಬಗೆ ಬಗೆಯ ಹೂವು ಹಾಗೂ ಬೃಹಧಾಕಾರವಾದ ಹಾರಗಳಿಂದ ಅಲಂಕರಿಸಲಾಗಿದ್ದ ರಥೋತ್ಸವದಲ್ಲಿ ನೂರಾರು ಭಕ್ತರು ಪಾಲ್ಗೊಂಡು ತಮ್ಮ ಭಕ್ತಿ ಸಮರ್ಪಿಸಿದರು. ನೆರೆಯ ತಮಿಳುನಾಡು ಹಾಗೂ ಆಂಧ್ರದಿಂದಲೂ ಭಕ್ತರು ರಥೋತ್ಸವಕ್ಕೆ ಆಗಮಿಸಿದ್ದರು. ನಂದಿಕೋಲು, ಭಾಜ, ಭಜಂತ್ರಿ, ಛತ್ರಿ, ಚಾಮರ, ಡೊಳ್ಳು, ತಮಟೆ ಸಹಿತ ನಡೆದ ರಥೋತ್ಸವದಲ್ಲಿ ಭಕ್ತರು ಕುಣಿದು ಸಂಭ್ರಮಿಸಿದರು.

ಧರ್ಮದರ್ಶಿ ಸತ್ಯನಾರಾಯಣರಾವ್, ಪ್ರಹ್ಲಾದ್ ಸ್ವಾಮೀಜಿ, ಟ್ರಸ್ಟ್ ಕಮಿಟಿಯ ಸದಸ್ಯರುಗಳು ಹಾಗೂ ಅಪಾರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

Share This Article
Leave a Comment

Leave a Reply

Your email address will not be published. Required fields are marked *