Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಿರಿಯೂರು | ವಿಜೃಂಭಣೆಯಿಂದ ನೆರವೇರಿದ ಕೂಡ್ಲಹಳ್ಳಿ ಸಂಗಮೇಶ್ವರನ ರಥೋತ್ಸವ

Facebook
Twitter
Telegram
WhatsApp

ಹಿರಿಯೂರು: ತಾಲೂಕಿನ ಐತಿಹಾಸಿಕ ಪುಣ್ಯಕ್ಷೇತ್ರ ಕೂಡ್ಲಹಳ್ಳಿ ಗ್ರಾಮದ ಶ್ರೀಸಂಗಮೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ರಥೋತ್ಸವ ಸೋಮವಾರ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆ ಯಿಂದ ಜರುಗಿತು.

ವೇದಾವತಿ ಹಾಗೂ ಸುವರ್ಣಮುಖಿ ನದಿಯ ಸಂಗಮ ಕ್ಷೇತ್ರವಾಗಿರುವ ಕೂಡ್ಲಹಳ್ಳಿ ಸಂಗಮೇಶ್ವರ ದೇವಾಲಯದಲ್ಲಿ ಪ್ರತಿ ವರ್ಷವು ಶ್ರಾವಣ ಮಾಸದ ಕೊನೆಯ ಸೋಮವಾರ ಜಾತ್ರಾ ಮಹೋತ್ಸವ ವಿಶೇಷವಾಗಿ ನಡೆಯುತ್ತದೆ. ಅದರಂತೆ ಈ ವರ್ಷವು ಸೋಮವಾರ ವಿವಿಧ ಹೂವುಗಳಿಂದ ಅಲಂಕರಿಸಿದ ರಥಕ್ಕೆ ಸಂಗಮೇಶ್ವರ ದೇವರನ್ನು ಕರೆತಂದು ರಥದಲ್ಲಿ ಕೂರಿಸಿ ವಿಶೇಷ ಪೂಜೆ ಸಲ್ಲಿಸಿ, ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ಬಳಿಕ ರಥೋತ್ಸವ ಸಂಗಮೇಶ್ವರನ ಪಾದದ ಕಲ್ಲುಗಳ ಬಳಿ ಎಳೆದು ಕರೆತರಲಾಯಿತು. ಅನಂತರ ಗ್ರಾಮದ ಶ್ರೀಪಾರ್ಥಲಿಂಗೇಶ್ವರ ದೇವರ ಗಂಟೆ, ಸಂಗಮೇಶ್ವರ ಕಲ್ಲುಗಳಿಗೆ ಪೂಜೆ ಸಲ್ಲಿಸಲಾಯಿತು. ಹಾಗೂ ಮಹಿಳೆಯರ ಸಂಗಮೇಶ್ವರ ದೇವರಿಗೆ ತಂಬಿಟ್ಟಿನ ಆರತಿ ಬೆಳಗಿ ಭಕ್ತಿ ಸಮರ್ಪಿಸಿದರು. ನಂತರ ರಥೋತ್ಸವ ಸಂಗಮೇಶ್ವರ ಸನ್ನಿಗೆ ಹಿಂತಿರುಗಿತು. ನೆರೆದಿದ್ದ ಸಾವಿರಾರು ಭಕ್ತರು ಸಂಗಮೇಶ್ವರ ರಥೋತ್ಸವಕ್ಕೆ ಬಾಳೆ ಹಣ್ಣು, ಮಂಡಕ್ಕಿಯನ್ನು ಸೂರುಬಿಡುವ ಮೂಲಕ ಭಕ್ತಿಯನ್ನು ನೆರವೇರಿಸುವರು.

ಈ ಸಂದರ್ಭದಲ್ಲಿ ಸಮಾಜ ಸೇವಕ ಕೆ. ಅಭಿನಂದನ್, ಚಿದಂಬರಂ ಗೌಡ, ಜಿಟಿ. ಮೋಹನ್ ಕೃಷ್ಣ, ಡಿಸಿ. ಪಾತಲಿಂಗಪ್ಪ, ಡಾ.ಈರಗಾರ್ ಪಾತಲಿಂಗಪ್ಪ, ಕೆ.ತಿಪ್ಪೇಸ್ವಾಮಿ, ದಿನೇಶ್, ಚಿದಾನಂದ ಸ್ವಾಮಿ, ಶ್ರೀನಿವಾಸ್, ಸೇರಿದಂತೆ ಮತ್ತಿತರರು ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!