Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಕಾಳಸಂತೆಯಲ್ಲಿ ಪಡಿತರ ಅಕ್ಕಿ : ಹೆಚ್ಚಿನ ದರಕ್ಕೆ ಮಾರಾಟ ಆರೋಪ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಳ್ಳಕೆರೆ, ಜನವರಿ. 19 :ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಡಿಮೆ ಬೆಲೆಗೆ ಕೊಂಡು ಹೆಚ್ಚಿನ ದರಕ್ಕೆ ಮಾರಾಟ ಮಾಡುವ ಜಾಲವೊಂದು ಚಳ್ಳಕೆರೆಯಲ್ಲಿ ಪತ್ತೆಯಾಗಿದೆ.

ನಗರದ ಪಾವಗಡ ರಸ್ತೆಯ 3 ಕ್ರಾಸ್ ಬಳಿ ಇರುವ ಶೆಡ್ ನಲ್ಲಿ ಎಗ್ಗಿಲ್ಲದೆ ಅಕ್ರಮ ಪಡಿತರ ಅಕ್ಕಿ ವ್ಯಾಪಾರ ನಡೆಯುತ್ತಿದೆ. ಸರ್ಕಾರ ಬಡವರಿಗೆ ಉಚಿತವಾಗಿ ವಿತರಿಸುವ ಪಡಿತರ ಅಕ್ಕಿಯನ್ನು ಕೆಲವರು ಕಾಳ ಸಂತ್ಯೆಯಲ್ಲಿ ಖರೀದಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ವಿಡಿಯೋ ಕೂಡಾ ವೈರಲ್ ಆಗಿದೆ.

ಸರ್ಕಾರದ ಉಚಿತ ಅಕ್ಕಿಯನ್ನು ಸಾರ್ವಜನಿಕರಿಂದ ಪ್ರತಿ ಕೆಜಿ ಅಕ್ಕಿಗೆ 16 ರೂ. ದರದಂತೆ ಹಣ ನೀಡಿ ಪಡಿತರ ಅಕ್ಕಿ ಖರೀದಿ ಮಾಡಲಾಗುತ್ತಿದ್ದು, ಅಕ್ಕಿ ಪಾಲಿಶ್ ಮಾಡಿ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಾರೆ ಎನ್ನುವ ಆರೋಪ ಕೇಳಿ ಬಂದಿದೆ. ಅಕ್ರಮ ವ್ಯವಹಾರವನ್ನು ತಡೆಗಟ್ಟಲು ಆಹಾರ ಇಲಾಖೆ & ಪೊಲೀಸ್ ಇಲಾಖೆ ಏನು ಮಾಡುತ್ತಿವೆ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಈ ಪ್ರಕರಣವನ್ನು ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಕಾಳ ಸಂತೆಯಲ್ಲಿ ಅಕ್ಕಿ ಕೊಂಡುಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಘಟನಾ ಸ್ಥಳಕ್ಕೆ ತಹಶೀಲ್ದಾರ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...