Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಗನಿಗೆ ಟಿಕೆಟ್ ಸಿಗದೆ ಮುನಿಸಿಕೊಂಡಿದ್ದ ಶಾಸಕ ಚಂದ್ರಪ್ಪನ ಮನವೊಲಿಸುವಲ್ಲಿ ರವಿಕುಮಾರ್ ವಿಫಲ..!

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 31 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಗನಿಗೆ ಸಿಗುತ್ತೆ ಎಂದು ಕಾಯುತ್ತಿದ್ದ ಎಂ. ಚಂದ್ರಪ್ಪನಿಗೆ ನಿರಾಸೆಯಾಗಿದೆ. ಇದರಿಂದ ಶಾಸಕ ಚಂದ್ರಪ್ಪ ಬಂಡಾಯವೆದ್ದಿದ್ದಾರೆ. ಈ ಬಂಡಾಯ ಶಮನ ಮಾಡಲು ಬಿಜೆಪಿ ನಾಯಕರು ಪ್ರಯತ್ನ ಪಡುತ್ತಿದ್ದಾರೆ. ಅದರ ಭಾಗವಾಗಿಯೇ ಎಂ ಚಂದ್ರಪ್ಪ ಅವರ ಮನೆಗೆ ಶನಿವಾರ ರಾತ್ರಿ ಎಂಎಲ್ಸಿ ರವಿಕುಮಾರ್ ಭೇಟಿ ನೀಡಿ ಸಂಧಾನ ಸಭೆ ನಡೆಸಿದ್ದರು. ಆದರೆ ಈ ಸಂಧಾನ ಸಭೆ ವಿಫಲವಾಗಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರವಿಕುಮಾರ್, ಶಾಸಕ ಎಂ. ಚಂದ್ರಪ್ಪ ಅವರು ಪಕ್ಷದ ಹಿರಿಯ ಶಾಸಕರಾಗಿದ್ದಾರೆ. ಅವರು ಪುತ್ರನಿಗೆ ಚಿತ್ರದುರ್ಗ ಲೋಕಸಭಾ ಟಿಕೆಟ್ ಕೇಳಿದ್ದರು. ಆದರೆ ಈಗಾಗಲೇ ನಿರ್ಧಾರ ಆಗಿರುವುದರಿಂದ ಅವರ ಕುಟುಂಬದವರೊಂದಿಗೆ ಮಾತನಾಡಿದೆ. ಟಿಕೆಟ್ ಸಿಗಲಿಲ್ಲವೆಂದು ಇಮೀಡಿಯಟ್ ನಿರ್ಧಾರ ತಗೋಬೇಡಿ, ಪಾರ್ಟಿಯಲ್ಲಿ ಸಾಕಷ್ಟು ಅವಕಾಶ ಇವೆ. ಮುಂದೆ ಇನ್ನೂ ಬಹಳ ಒಳ್ಳೆ ದಿನಗಳು ಬರುತ್ತವೆ. ಹಾಗಾಗಿ ಆತುರದ ನಿರ್ಧಾರ ತೆಗೆದುಕೊಳ್ಳದಂತೆ ಹೇಳೀದೀವಿ
ಇನ್ನು ಚಂದ್ರಪ್ಪ ರವರ ಜೊತೆ ಮಾತುಕತೆ ಮುಂದುವರೆಸುತ್ತೇವೆ ಎಂದು ಹೇಳಿದರು.

ಅವರು ಹೊರಗಡೆಯಿಂದ ಬಂದವರಿಗೆ ಟಿಕೆಟ್ ಕೊಡಬೇಡಿ ಲೋಕಲ್ ನವರಿಗೆ ಟಿಕೆಟ್ ಕೊಡಿ ಅಂದಿದ್ದಾರೆ. ಈಗಾಗಲೇ ಟಿಕೆಟ್ ನಿರ್ಧಾರವಾಗಿದ್ದು, ಮಾತುಕತೆ ಮುಂದುವರೆದಿದೆ, ಇವರು ಏಪ್ರಿಲ್ 3ನೇ ತಾರೀಕು ನಾಮಿನೇಶನ್ ಮಾಡ್ತೀನಿ ಅಂದಿದ್ದಾರೆ, ನಾನು ಮಾತಾಡ್ತೀನಿ, ಈ ಕುರಿತು ಪಕ್ಷದ ವರಿಷ್ಠರೂ ಕೂಡ ಮಾತಾಡ್ತಾರೆ.ಪಾರ್ಟಿ ದೊಡ್ಡದು, ಚಂದ್ರಪ್ಪ ಹಿರಿಯ ಶಾಸಕರು, ಪಾರ್ಟಿ ನಿರ್ಧಾರಕ್ಕೆ ಬದ್ಧ ಅಂತಾ ಜೊತೆಗಿದ್ದಾರೆ ಎಂದು ನುಡಿದರು.

ಇದೆ ವೇಳೆ ಮಾತನಾಡಿದ ರಘು ಚಂದನ್, ರವಿಕುಮಾರ್ ಮುಂದೆ ನಮ್ಮ ನೋವು, ಕಷ್ಟ ಹೇಳಿದೀವಿ, ಅವರಿಗೂ ನಾವು ಹೇಳಿರೊದಲ್ಲಿ ಸತ್ಯ ಇದೆ ಅಂತಾ ಅನಿಸಿದೆ. ಏಪ್ರಿಲ್ 3ರಂದು ನಾಮಪತ್ರ ಸಲ್ಲಿಸುವುದರಿಂದ ನಮ್ಮ‌ತಂದೆ ಚಳ್ಳಕೆರೆಗೆ ಹೋಗಿದ್ದಾರೆ.  3 ನೇ ತಾರೀಖು ನಾಮಪತ್ರ ಸಲ್ಲಿಸಲಾಗುತ್ತದೆ. ರವಿಕುಮಾರ್ ರವರು ಪಾರ್ಟಿ ಸಿಸ್ಟಮ್ ನಲ್ಲಿ ಈ ಕುರಿತು ಹೇಳಿದ್ದಾರೆ. ಸ್ಥಳೀಯರನ್ನು ಬಿಟ್ಟು 500 ಕಿಮಿ ದೂರದಿಂದ ಅಭ್ಯರ್ಥಿ ಕರೆತರುವ ಅವಶ್ಯಕತೆ ಇರಲಿಲ್ಲ, ಕಾರಜೋಳರನ್ನು ಕರೆತಂದ ವಿಷಯ ಹೇಳಿದ್ರು, ಆದ್ರೆ ನಾವು ಮಾಡಿದ ತೀರ್ಮಾನದ ಬಗ್ಗೆ ಹೇಳೀದಿವಿ ಯಡೆಯೂರಪ್ಪ ಮನೆಗೆ ಬಂದ್ರೆ ಬರ್ಲಿ, ಅವ್ರು ನಮ್ಮ‌ ತಂದೆ ಸಮಾನರು ಎಂದು ರಘು ಚಂದನ್ ತಿಳಿಸಿದರು. ಅವರು ಕಾಲಲ್ಲಿ ತೋರಿಸಿದ್ದನ್ನು ತಲೆ‌ ಮೇಲೆ‌ ಹೊತ್ತುಕೊಂಡು ಮಾಡೀದೀವಿ, ಯಡೆಯೂರಪ್ಪನವರ ಬಗ್ಗೆ ನಮಗಿರುವ ವಿಶ್ವಾಸ ಅಚಲ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಪ್ರಬಲ  ಆಕಾಂಕ್ಷಿಯಾಗಿದ್ದ ಎಂ.ಸಿ. ರಘುಚಂದನ್ ಹೇಳಿದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...