Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರಿನಲ್ಲಿ ವಿರಾಟ್ ಕೊಹ್ಲಿ ಪೋಸ್ಟರ್ ಮುಂದೆ ಪ್ರಾಣಿ ಬಲಿ..!

---Advertisement---

ಸುದ್ದಿಒನ್, ಮೊಳಕಾಲ್ಮೂರು, ಮೇ. 06 : ರಾಜ್ಯದಲ್ಲಿ RCB ಅಭಿಮಾನಿಗಳು ಕಡಿಮೆ ಏನಿಲ್ಲ. ಕ್ರೇಜ್ ಸಿಕ್ಕಾಪಟ್ಟೆ ಇದೆ. ಕಪ್ ಗೆಲ್ಲದೆ ಇದ್ದರು ಭರವಸೆಯನ್ನಂತು ಕಳೆದುಕೊಂಡಿಲ್ಲ. ಈ ಸಲ ಕಪ್ ನಮ್ಮದೇ ಅಂತ ಮತ್ತೆ ಮತ್ತೆ ನಂಬಿಕೆ ಇಟ್ಟು ಕಾಯುತ್ತಾ ಇರುತ್ತಾರೆ. ಅದರಲ್ಲೂ ಪ್ರತಿಯೊಂದು ಮ್ಯಾಚ್ ಅನ್ನು RCB ಗೆದ್ದಾಗಲೂ ಅಭಿಮಾನಿಗಳು ಎಂಜಾಯ್ ಮಾಡುವ ರೀತಿ ನೋಡಿದರೆ ಕ್ರಿಕೆಟ್ ಅಭಿಮಾನಿಗಳು ಅಲ್ಲದೆ ಹೋದರು ಅವರ ಕ್ರೇಜ್ ನೋಡಿ ಅಭಿಮಾನಿಗಳಾಗಿ ಬಿಡ್ತಾರೆ.

ಇದೀಗ ಅಂಥದ್ದೇ ಜೋಶ್ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ ಕ್ರಿಕೆಟ್ ಅಭಿಮಾನಿಗಳು ತೋರಿಸಿದ್ದಾರೆ. ಆರ್ಸಿಬಿ ಗೆದ್ದ ಖುಷಿಯಲ್ಲಿ ಸಾರ್ವಜನಿಕವಾಗಿ ಮೇಕೆ ಬಲಿ ಕೊಟ್ಟಿದ್ದಾರೆ. ಈ ಸಂಬಂಧ ಮೊಳಕಾಲ್ಮೂರು ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಪ್ರಾಣಿ ಹಿಂಸೆಯಡಿ ಕೇಸ್ ದಾಖಲಿಸಿಕೊಂಡಿದ್ದಾರೆ. ಕಳೆದ ಮೇ 5ರಂದು RCB ವರ್ಸಸ್ CSK ನಡುವೆ ಪಂದ್ಯ ನಡೆದಿತ್ತು. ಈ ಪಂದ್ಯದಲ್ಲಿ ಜೀವ ಕೈಗೆ ಬರಿಸಿದ್ದ ಆರ್ಸಿಬಿ ಕೊನೆಗೆ ಗೆದ್ದಿತ್ತು. ಇಡೀ ಆರ್ಸಿಬಿ ಫ್ಯಾನ್ಸ್ ಇನ್ನೇನು ಮುಗಿದೇ ಹೋಯ್ತು ಅಂತ ಅಂದುಕೊಳ್ಳುತ್ತಿದ್ದರು. ಆದರೆ ಕಡೆಗೂ ಆರ್ಸಿಬಿ ವಿನ್ ಆಯ್ತು. ಆ ಟೆನ್ಶನ್ ನಿಂದ ಖುಷಿಯ ಕ್ಷಣವನ್ನ ಆಚರಿಸಿದ್ದು ಕಡಿಮೆ ಏನಲ್ಲ.

ಇಂಥದ್ದೇ ಖುಷಿಯಲ್ಲಿ ಮೊಳಕಾಲ್ಮೂರು ತಾಲೂಕಿನ ಮಾರಮ್ಮನಹಳ್ಳಿಯ ಯುವಕರು ಪ್ರಾಣಿ ಬಲಿ ಕೊಟ್ಟು ಸೆಲೆಬ್ರೇಟ್ ಮಾಡಿದ್ದಾರೆ. ವಿರಾಟ್ ಕೊಹ್ಲಿ ಅವರ ಪೋಸ್ಟರ್ ಮುಂದೆ ಮೇಕೆಯನ್ನ ಬಲಿ ಕೊಟ್ಟಿದ್ದಾರೆ. ಕೊಹ್ಲಿ ಫೋಟೋಗೆ ರಕ್ತಾಭಿಷೇಕ ಮಾಡಿದ್ದಾರೆ. ವಿಚಾರ ವೈರಲ್ ಆಗುತ್ತಿದ್ದಂತೆ ಸೋಮವಾರ ಸ್ಥಳಕ್ಕೆ ಬಂದ ಪಿಎಸ್ಐ ಜಿ ಪಾಂಡುರಂಗ ಅವರು ಸಿಬ್ಬಂದಿ ಕರೆದುಕೊಂಡು ಬಂದು ಸ್ಥಳ ಪರಿಶೀಲನೆ ನಡೆಸಿ, ಸಣ್ಣ ಪಾಲಯ್ಯ, ಜಯಣ್ಣ, ತಿಪ್ಪೇಸ್ವಾಮಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment