Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

RCB ಫ್ಯಾನ್ಸ್ ಗೆ ನಿರಾಸೆ : ಟ್ರೋಫಿ ರ‌್ಯಾಲಿ ರದ್ದು.. ವಿಧಾನಸೌಧದಲ್ಲಿ ಸನ್ಮಾನ

---Advertisement---

ಬೆಂಗಳೂರು; 18 ವರ್ಷದ ಕನಸು ನನಸಾಗಿದೆ. ಇಡೀ ಆರ್ಸಿಬಿ ಅಭಿಮಾನಿಗಳು ರಾತ್ರಿಯೇ ನಿದ್ದೆಗೆಟ್ಟು ಸೆಲೆಬ್ರೇಷನ್ ಮಾಡ್ತಿದ್ದಾರೆ. ಇಂದು ಐಪಿಎಲ್ ಟ್ರೋಫಿ ಬೆಂಗಳೂರಿಗೆ ಬರ್ತಾ ಇದೆ. ಇಡೀ ಬೆಂಗಳೂರಿನಾದ್ಯಂತ ಟ್ರೋಫಿ ಮೆರವಣಿಗೆ ಮಾಡಲಿದ್ದಾರೆ ಎಂದೇ ಭಾವಿಸಲಾಗಿತ್ತು. ಟ್ರೋಫಿ ನೋಡಲು ಜನ ಕಾತುರದಿಂದ ಕಾಯ್ತಾ ಇದ್ದರು. ಆದರೆ ಎಲ್ಲಾ ಆರ್ಸಿಬಿ ಅಭಿಮಾನಿಗಳಿಗೆ ನಿರಾಸೆ ಉಂಟಾಗಿದೆ. ಟ್ರೋಫಿಯ ಮೆರವಣಿಗೆಯನ್ನು ಬೆಂಗಳೂರಲ್ಲಿ ರದ್ದು ಮಾಡಲಾಗಿದೆ. ವಿಧಾನಸೌಧದಲ್ಲಿ ಆರ್ಸಿಬಿ ತಂಡಕ್ಕೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾವಿದೆ.

ಈಗಾಗಲೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳು ಕ್ಯೂ ನಿಂತಿದ್ದಾರೆ. ಟ್ರೋಫಿ ನೋಡುವುದಕ್ಕೆ ಜನಸಾಗರವೇ ನೆರೆದಿದೆ. ಆರ್ಸಿಬಿ ಜೆಸ್ರಿ ಹಾಕಿ, ಬಾವುಟ ಹಾರಿಸುತ್ತಾ ಎಂಜಾಯ್ ಮಾಡ್ತಾ ಇದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪೊಲೀಸ್ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ. ಅಭಿಮಾನಿಗಳ ಜೊತೆಗೆ ಆರ್ಸಿಬಿ ತಂಡ ಕೂಡ ಎಂಜಾಯ್ ಮಾಡಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ಸಿಬಿಗೆ ಜೈಕಾರದ ಘೋಷಣೆ ಕೂಗು ಕೇಳಿ ಬರ್ತಾ ಇದೆ.

ಈಗಾಗಲೇ ಬೆಂಗಳೂರು ತಲುಪಿರುವ ಆರ್ಸಿಬಿ ತಂಡ ಖಾಸಗಿ ಹೊಟೇಲ್ ನಲ್ಲಿ ವಿಶ್ರಾಂತಿ ಪಡೆದು, ಬಳಿಕ ವಿಧಾನಸೌಧ ತಲುಪಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಆರ್ಸಿಬಿ ತಂಡದ ಆಟಗಾರರಿಗೆ ಸನ್ಮಾನ ಮಾಡಲಿದ್ದಾರೆ. ಬಳಿಕ ಸಂಜೆ ವೇಳೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಕೂಡ ನಡೆಯಲಿದೆ. ಇದು ಹದಿನೆಂಟು ವರ್ಷಗಳ ಕನಸು. ಈ ಬಾರಿಯ ಐಪಿಎಲ್ ನಲ್ಲಿ ನನಸಾಗಿದೆ. ರಾತ್ರಿಯಂತು ಭಾವನಾತ್ಮಕ ಸನ್ನಿವೇಶ ಎಲ್ಲರಲ್ಲೂ ಕಾಡಿತ್ತು. ಆರ್ಸಿಬಿ ಗೆದ್ದ ಕೂಡಲೇ ಎಲ್ಲರ ಕಣ್ಣಲ್ಲೂ ನೀರು ಹೊರ ಬಂತು. ಹದಿನೆಂಟು ವರ್ಷಗಳಿಂದ ಕಾದಿದ್ದ ಗೆಲುವು ಭಾವನಾತ್ಮಕ ಸನ್ನಿವೇಶವನ್ನೆರ ಸೃಷ್ಟಿ ಮಾಡಿತ್ತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...