Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

---Advertisement---

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌ ಗುರಿಯನ್ನು ರೀಚ್ ಮಾಡಲು ಸಿಎಸ್ಕೆ ತಿಣುಕಾಡಿತು ನೋಡಿ, ಆರ್ಸಿಬಿ ಫ್ಯಾನ್ಸ್ ಹರ್ಷೋದ್ಘಾರ ನಿಲ್ಲಲೇ ಇಲ್ಲ. ಫೈನಲಿ ಆರ್ಸಿಬಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದೆ.

 

ಟಾಸ್​ ಸೋತರೂ ಫಸ್ಟ್​ ಬ್ಯಾಟಿಂಗ್​ ಮಾಡಿದ ಆರ್​​ಸಿಬಿ ಪರ ಮಾಜಿ ಕ್ಯಾಪ್ಟನ್​ ವಿರಾಟ್​ ಕೊಹ್ಲಿ ಭರ್ಜರಿ ಬ್ಯಾಟಿಂಗ್​ ಮಾಡಿದ್ರು. ತಾನು ಆಡಿದ 29 ಬಾಲ್​ನಲ್ಲಿ ಬರೋಬ್ಬರಿ 4 ಸಿಕ್ಸರ್​ ಜತೆಗೆ 3 ಫೋರ್​ ಸಿಡಿಸಿದ್ರು. ಬರೋಬ್ಬರಿ 47 ರನ್​ ಸಿಡಿಸಿದರು. ಫಾಫ್​ ಡುಪ್ಲೆಸಿಸ್​​​ 39 ಬಾಲ್​ನಲ್ಲಿ 3 ಸಿಕ್ಸರ್​​, 3 ಫೋರ್​ ಸಮೇತ 54 ರನ್​​ ಚಚ್ಚಿದ್ರು. ಆದ್ರೆ, ರಜತ್​ ಪಾಟಿದಾರ್​ ಹೊಡೆತಕ್ಕೆ ಬೈ ಮಿಸ್​ ಆಗಿ ರನ್​ ಔಟ್​ ಆಗಿದ್ದಾರೆ. ಈ ಮೂಲಕ ಚೆನ್ನೈಗೆ 219 ರನ್ ಗಳ ಟಾರ್ಗೆಟ್ ನೀಡಲಾಗಿತ್ತು.

ಚೆನ್ನೈ ಅದರ ಬೆನ್ನತ್ತಿ ಆಟವಾಡಲು ಶುರು ಮಾಡಿತ್ತು. ಚೆನ್ನೈ ಸೂಪರ್​ ಕಿಂಗ್ಸ್​ ಪರ ಓಪನರ್​ ಆಗಿ ಬಂದ ರುತುರಾಜ್​ ಗಾಯಕ್ವಾಡ್​​ ಡಕೌಟ್​ ಆದ್ರು. ರಾಚಿನ್​ ರವೀಂದ್ರ ತಾನು ಆಡಿದ 37 ಬಾಲ್​ನಲ್ಲಿ 3 ಭರ್ಜರಿ ಸಿಕ್ಸರ್​​, 5 ಫೋರ್​ ಸಮೇತ 61 ರನ್​​ ಸಿಡಿಸಿ ವಿಕೆಟ್​ ಒಪ್ಪಿಸಿದ. ರಹಾನೆ 33, ಜಡೇಜಾ 42, ಎಂ.ಎಸ್​​ ಧೋನಿ 25 ರನ್​ ಹೊಡೆದ್ರು. ಚೆನ್ನೈ 20 ಓವರ್​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 191 ರನ್​​ ಗಳಿಸಿದೆ. ಆರ್​​ಸಿಬಿ ಚೆನ್ನೈ ವಿರುದ್ಧ 27 ರನ್​ನಿಂದ ಗೆದ್ದು ಪ್ಲೇ ಆಫ್​ಗೆ ಕ್ವಾಲಿಫೈ ಆಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment