Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಣ್ಣಾವ್ರ ಹುಟ್ಟುಹಬ್ಬಕ್ಕೆ RCB ಸ್ಪೆಷಲ್ ಪೋಸ್ಟ್

Facebook
Twitter
Telegram
WhatsApp

 

ಇಂದು ಡಾ.ರಾಜ್‍ಕುಮಾರ್ ಅವರ ಹುಟ್ಟುಹಬ್ಬ. ಅಭಿಮಾನಿಗಳ ಹೃದಯದಲ್ಲಿ ಈಗಲೂ ಜೀವಂತವಾಗಿರುವ ಅಣ್ಣಾವ್ರನ್ನ ಪೂಜಿಸುತ್ತಲೆ ಬಂದಿದ್ದಾರೆ. ಅಭಿಮಾನಿಗಳ ಆರಾಧ್ಯ ದೈವ. ಇಂದು ಅಭಿಮಾನಿಗಳು ಅಣ್ಣಾವ್ರ ಹೆಸರಿನಲ್ಲಿ ನಾನಾ ಸಮಾಜಸೇವೆಯ ಕೆಲಸಗಳನ್ನು ಮಾಡುತ್ತಾ, ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುತ್ತಾರೆ. ಅಷ್ಟೇ ಅಲ್ಲ ಇವತ್ತು ಆರ್ಸಿಬಿ ಕೂಡ ಅಣ್ಣಾವ್ರ ನೆನಪನ್ನು ಮೆಲುಕು ಹಾಕಿದೆ.

ಆರ್ಸಿಬಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಅಣ್ಣಾವ್ರಿಗೆ ವಿಶೇಷ ವಾಗಿ ಶುಭಕೋರಿದ್ದಾರೆ. “ನಾವಾಡುವ ನುಡಿಯೇ ಕನ್ನಡ ನುಡಿ.” ನಟ ಸಾರ್ವಭೌಮ, ಕನ್ನಡಿಗರ ಪ್ರೀತಿಯ ಅಣ್ಣಾವ್ರು, ಡಾ|| ರಾಜ್ ಕುಮಾರ್ ಅವರ 93ನೆ ಜನ್ಮಮಹೋತ್ಸವದ ನೆನಪಿನಲ್ಲಿ ಎಂದು ಟ್ವೀಟ್ ಮಾಡಿದೆ.

ಈ ಟ್ವೀಟ್ ನೋಡಿ ಅಣ್ಣಾವ್ರ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ. ಅಣ್ಣಾವ್ರ ಹಾಡಿನ ಮೂಲಕವೇ ಅಣ್ಣಾವ್ರಿಗೆ ವಿಶ್ ಮಾಡಿರುವುದು ಸಂತಸ ತಂದಿದೆ. ಇದೇ ನಿಟ್ಟಿನಲ್ಲಿ ಇಂದು ಅಣ್ಣಾವ್ರ ಸ್ಮಾರಕದ ಬಳಿ ಜನ ಸಾಗರವೇ ಸೇರಿತ್ತು. ಸಮಾಧಿಗೆ ನಮಸ್ಕರಿಸಿದರು. ಸಮಾಧಿ ಬಳಿಯೇ ಹುಟ್ಟುಹಬ್ಬ ಆಚರಣೆ ಮಾಡಿದ್ದಾರೆ. ಕುಟುಂಬಸ್ಥರು ಕೂಡ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಅಣ್ಣಾವ್ರ ಇಂದಿಗೂ ಸಾಕಷ್ಟು ಜನರ ಜೀವನಕ್ಕೆ ಮಾದರಿಯಾಗಿಯೇ ಇದ್ದಾರೆ. ಅವರ ಸಿನಿಮಾಗಳಿಂದ ಅದೆಷ್ಟೋ ಜನ ಈಗಲೂ ಬದಲಾವಣೆಯತ್ತ ಸಾಗುತ್ತಲೆ ಇದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

error: Content is protected !!