Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವೈಯಕ್ತಿಕ ಲೈಫ್ ನಲ್ಲಿ ಪ್ರಾಬ್ಲಮ್ ಆದ್ರೂ ವಿನ್ ಆಯ್ತು ಆರ್ಸಿಬಿ : ಸ್ಮೃತಿ ಬಗ್ಗೆ ಶ್ರೇಯಾಂಕ ಹೇಳಿದ್ದೇನು..?

---Advertisement---

ಇತ್ತೀಚೆಗೆ ಸ್ಮೃತಿ ಮಂದಾ‌ನ ಮದುವೆ ಫಿಕ್ಸ್ ಆಗಿತ್ತು. ಆದರೆ ಕಡೆ ಗಳಿಗೆಯಲ್ಲಿ ಮದುವೆ ಮುರಿದು ಬಿದ್ದಿತ್ತು. ಇದರಿಂದ ಸ್ಮೃತಿ ಮಂದಾನ ತಂದೆಗೂ ಅನಾರೋಗ್ಯ ಉಂಟಾಗಿತ್ತು. ಇದೆಲ್ಲದರ ನಡುವೆಯೇ ಆರ್ಸಿಬಿ ಮ್ಯಾಚ್ ಕೂಡ ಶುರುವಾಗಿತ್ತು. ಇದೀಗ ಏನೇ ಸಮಸ್ಯೆಗಳು ಇದ್ದರು ಆರ್ಸಿಬಿ ಮ್ಯಾಚ್ ವಿನ್ ಆಗುವಂತೆ ಮಾಡಿದ್ದಾರೆ. ಇದಕ್ಕೆ ಇಡೀ ಟೀಂ ಇಂಡಿಯಾ ಸ್ಮೃತಿ ಮಂದಾನ ಅವರನ್ನ ಹಾಡಿ‌ಕೊಂಡಾಡಿದೆ.

ಫೈನಲ್ ಪಂದ್ಯದಲ್ಲಿ ಆರ್ಸಿಬಿ ಆಟಗಾರ್ತಿಯರು ಅಬ್ಬರಿಸಿ ಬೊಬ್ಬಿರಿದಿದ್ದಾರೆ. ಆರ್ಸಿಬಿ ಪರ ನಾಯಕಿ ಸ್ಮೃತಿ ಮಂದಾನ 87 ರನ್ ಬಾರಿಸಿದರೆ, ಜಾರ್ಜಿಯಾ ವೋಲ್ 79 ರನ್ ಸಿಡಿಸಿ ತಂಡಕ್ಕೆ ಜಯ ತಂದಿತ್ತರು. ಆರ್ಸಿಬಿಯನ್ನು ಅತ್ಯಂತ ಸ್ಥಿರ ತಂಡವನ್ನಾಗಿ ರೂಪಿಸುವಲ್ಲಿ ಸ್ಮೃತಿ ಪಾತ್ರ ದೊಡ್ಡದು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮೈದಾನದಲ್ಲಿ ಕಪ್ ಎತ್ತಿ ಹಿಡಿದು ನಗುತ್ತಿರುವ ಸ್ಮೃತಿ ಮಂದಾನ, ಕಳೆದ‌ಕೆಲವು ತಿಂಗಳುಗಳಿಂದ ವೈಯಕ್ತಿಕವಾಗಿ ಸಾಕಷ್ಟು ನೋವು ಅನುಭವಿಸಿದ್ದರು. ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ಜೊತೆಗಿನ ಅವರ ಮದುವೆ ರದ್ದಾಗಿದ್ದು ಅವರ ಜೀವನದಲ್ಲಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿತ್ತು.

ನಾಯಕಿ ಸ್ಮೃತಿ ಮಂದಾನ ಇತ್ತೀಚೆಗೆ ತಮ್ಮ ವೈಯಕ್ತಿಕ ಜೀವನದಲ್ಲಿ ಕಠಿಣ ಸಮಯವನ್ನು ಎದುರಿಸಿದ್ದರು. ಅದೆಲ್ಲವನ್ನೂ ಬದಿಗಿಟ್ಟು, ತಂಡವನ್ನು ಮುನ್ನಡೆಸಿದ ರೀತಿ ಮತ್ತು ಅವರು ತೋರಿದ ಸ್ಥೈರ್ಯ ಅದ್ಭುತ. ಈ ಗೆಲುವನ್ನು ನಾವು ಅವರಿಗೆ ಸಮರ್ಪಿಸುತ್ತೇವೆ ಎಂದು ಭಾವುಕವಾಗಿ ನುಡಿದಿದ್ದಾರೆ. ನವೆಂಬರ್ 23, 2025 ರಂದು ಸಾಂಗ್ಲಿಯಲ್ಲಿ ನಡೆಯಬೇಕಿದ್ದ ಮದುವೆ, ಅಂದೇ ಸ್ಮೃತಿ ಅವರ ತಂದೆಗೆ ಆದ ಹಠಾತ್ ಆರೋಗ್ಯ ಸಮಸ್ಯೆಯಿಂದ ಮುಂದೂಡಲ್ಪಟ್ಟಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now