Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಂಧನದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ: ಅಭಿಮಾನಿಗಳಿಗೆ ದರ್ಶನ್ ಹೇಳಿದ್ದೇನು..?

Facebook
Twitter
Telegram
WhatsApp

 

 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಸುಲಭವಾಗಿ ಟ್ರ್ಯಾಕ್ ಆಗಿದೆ. ಕಳೆದ 12 ದಿನದಿಂದ ಪೊಲೀಸ್ ಕಸ್ಟಡಿಯಲ್ಲಿದ್ದರು. ಹೈಪ್ರೊಫೈಲ್ ಕೇಸ್ ಆಗಿದ್ದರಿಂದ ಸರ್ಕಾರ ಕೂಡ ಯಾವುದೇ ವಿಚಾರಗಳಿಗೂ ಗಮನ ಕೊಡದೆ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿತ್ತು. ಹೀಗಾಗಿ ಪೊಲೀಸರು ಕೂಡ ದರ್ಶನ್ ಅಂಡ್ ಗ್ಯಾಂಗ್ ಅನ್ನು ಎರಡು ಬಾರಿ ಕಸ್ಟಡಿಗೆ ತೆಗೆದುಕೊಂಡು ಎಲ್ಲಾ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದೆ. ಇಂದು ಕಸ್ಟಡಿ ಮುಗಿದ ಹಿನ್ನೆಲೆ ದರ್ಶನ್ ಸೇರಿದಂತೆ ನಾಲ್ವರನ್ನು ಕೋರ್ಟ್ ಮುಂದೆ ಹಾಜರುಪಡಿಸಿತ್ತು. ಕೋರ್ಟ್ ಹದಿಮೂರು ದಿನಗಳ ಕಾಲ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ. ಅವರ ಮೂರು ಜನ ಸ್ನೇಹಿತರು ಕೂಡ ಜೈಲು ಪಾಲಾಗಿದ್ದಾರೆ.

ಇನ್ನು ದರ್ಶನ್ ಅರೆಸ್ಟ್ ಆದಾಗಿನಿಂದ ಒಂದು ದಿನವೂ ಮಾತನಾಡಿರಲಿಲ್ಲ. ಆದರೆ ಇಂದು ಅಭಿಮಾನಿಗಳಿಗೆ ಧೈರ್ಯ ತುಂಬಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ಹೋಗುವ ಮುನ್ನ ಕೈಬೀಸಿದ್ದು, ಪ್ಲೈನ್ ಕಿಸ್ ನೀಡಿದ್ದಾರೆ. ಬಳಿಕ ನನಗೇನು ಆಗುವುದಿಲ್ಲ ಎಂದಿದ್ದಾರೆ.

ಪೊಲೀಸ್ ಗಾಡಿಯಲ್ಲಿ ಕೂತು, ಅಭಿಮಾನಿಗಳತ್ತ ಕೈ ಬೀಸಿದ್ದಾರೆ. ಈ ವೇಳೆ ಮಾತನಾಡಿದ್ದು, ನನಗೆ ಏನು ಆಗುವುದಿಲ್ಲ ಹೆದರಬೇಡಿ ಎಂದು ಹೇಳಿದ್ದಾರೆ. ಈ ವಿಡಿಯೋ ಸದ್ಯ ಸೋಷಿಯಲ್ ಮಿಡೀಯಾದಲ್ಲಿ ವೈರಲ್ ಆಗಿದೆ. ಅಭಿಮಾನಿಗಳಿಗೂ ಕೊಂಚ ರಿಲ್ಯಾಕ್ಸ್ ಆಗಿದೆ.

ದರ್ಶನ್ ಪೊಲೀಸರ ಕಸ್ಟಡಿಗೆ ಹೋದಾಗಿನಿಂದ ಅಭಿಮಾನಿಗಳು ಆತಂಕದಲ್ಲಿದ್ದರು. ಪೊಲೀಸ್ ಠಾಣೆಯಲ್ಲಿ ಬೇರೆ ಏನು ಕಾಣದ ರೀತಿ ಶಾಮಿಯಾನ ಹಾಕಿದ್ದರು. ಕಸ್ಟಡಿಗೆ ತೆಗೆದುಕೊಳ್ಳುತ್ತಿದ್ದ ಕಾರಣ ಏನಾಗುತ್ತಿದೆ ಎಂಬುದನ್ನು ತಿಳಿಯಲಾಗದೆ ಅಭಿಮಾನಿಗಳು ಸಂಕಟ ಪಡುತ್ತಿದ್ದರು. ಇಂದು ಖುದ್ದು ದರ್ಶನ್, ನನಗೇನು ಆಗಲ್ಲ ಎಂದು ಹೇಳಿರುವುದು ಅಭಿಮಾನಿಗಳಿಗೆ ಸಮಾಧಾನ ತಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಮಧ್ಯಸ್ಥಿಕೆ ಜನರಿಂದ ದಂಪತಿಗಳಿಗೆ ದಾರಿ ತಪ್ಪಿಸಲಿದ್ದಾರೆ, ಈ ರಾಶಿಯವರಿಗೆ ಶತ್ರುಪೀಡೆ ಅಧಿಕ

ಈ ರಾಶಿಯವರಿಗೆ ಮಧ್ಯಸ್ಥಿಕೆ ಜನರಿಂದ ದಂಪತಿಗಳಿಗೆ ದಾರಿ ತಪ್ಪಿಸಲಿದ್ದಾರೆ, ಈ ರಾಶಿಯವರಿಗೆ ಶತ್ರುಪೀಡೆ ಅಧಿಕ, ಶುಕ್ರವಾರ ರಾಶಿ ಭವಿಷ್ಯ -ಜೂನ್-28,2024 ಸೂರ್ಯೋದಯ: 05:48, ಸೂರ್ಯಾಸ್ತ : 06:50 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ

ಬಹುನಿರೀಕ್ಷಿತ ಪ್ರಭಾಸ್ ನಟನೆಯ ‘ಕಲ್ಕಿ 2898AD’ ಸಿನಿಮಾ ಫುಲ್ ಮಾರ್ಕ್ಸ್ ಕೊಟ್ಟ ಪ್ರೇಕ್ಷಕ : ಹೇಗಿದೆ ಸಿನಿಮಾ..?

ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898AD ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆಯನ್ನು ಹುಟ್ಟು ಹಾಕಿತ್ತು. ಪ್ರಭಾಸ್ ನಟನೆಯ ಈ ಸಿನಿಮಾ ಬಗ್ಗೆ ಕುತೂಹಲವೂ ಹೆಚ್ಚಿತ್ತು. ಇಂದು ದೇಶದಾದ್ಯಂತ ಸಿನಿಮಾ ರಿಲೀಸ್ ಆಗಿದೆ‌. ಅಭಿಮಾನಿಗಳು ಕೂಡ ಅದ್ದೂರಿಯಾಗಿ

ಕಳೆದ ವರ್ಷವೇ ಪ್ರಾಯೋಗಿಕ ಸಂಚಾರವಾಗಿದ್ದರು ಬೆಳಗಾವಿಗ್ಯಾಕೆ ವಂದೇ ಭಾರತ್ ಬಿಟ್ಟಿಲ್ಲ..?

ಬೆಳಗಾವಿ: ಕಳೆದ ವರ್ಷ ಅಂದ್ರೆ 2023ರಲ್ಲಿಯೇ ಬೆಳಗಾವಿಯಲ್ಲಿ ಪ್ರಾಯೋಗಿಕ ಸಂಚಾರ ಯಶಸ್ವಿಯಾಗಿತ್ತು. ಆದರೆ ಆಮೇಲೆ ಅದರ ಸುಳಿವು ಇಲ್ಲ. ಇಲ್ಲಿವರೆಗೂ ಬೆಂಗಳೂರು-ಧಾರವಾಡ-ಹುಬ್ಬಳ್ಳಿ ಮಾರ್ಗದ ವಂದೇಭಾರತ್ ರೈಲು ಸಂಚಾರ ಆರಂಭವಾಗಿಲ್ಲ. ಬೆಳಗಾವಿಗೆ ವಂದೇ ಭಾರತ್ ರೈಲು

error: Content is protected !!