Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಂಧನದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ: ಅಭಿಮಾನಿಗಳಿಗೆ ದರ್ಶನ್ ಹೇಳಿದ್ದೇನು..?

---Advertisement---

 

 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಸುಲಭವಾಗಿ ಟ್ರ್ಯಾಕ್ ಆಗಿದೆ. ಕಳೆದ 12 ದಿನದಿಂದ ಪೊಲೀಸ್ ಕಸ್ಟಡಿಯಲ್ಲಿದ್ದರು. ಹೈಪ್ರೊಫೈಲ್ ಕೇಸ್ ಆಗಿದ್ದರಿಂದ ಸರ್ಕಾರ ಕೂಡ ಯಾವುದೇ ವಿಚಾರಗಳಿಗೂ ಗಮನ ಕೊಡದೆ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿತ್ತು. ಹೀಗಾಗಿ ಪೊಲೀಸರು ಕೂಡ ದರ್ಶನ್ ಅಂಡ್ ಗ್ಯಾಂಗ್ ಅನ್ನು ಎರಡು ಬಾರಿ ಕಸ್ಟಡಿಗೆ ತೆಗೆದುಕೊಂಡು ಎಲ್ಲಾ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದೆ. ಇಂದು ಕಸ್ಟಡಿ ಮುಗಿದ ಹಿನ್ನೆಲೆ ದರ್ಶನ್ ಸೇರಿದಂತೆ ನಾಲ್ವರನ್ನು ಕೋರ್ಟ್ ಮುಂದೆ ಹಾಜರುಪಡಿಸಿತ್ತು. ಕೋರ್ಟ್ ಹದಿಮೂರು ದಿನಗಳ ಕಾಲ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ. ಅವರ ಮೂರು ಜನ ಸ್ನೇಹಿತರು ಕೂಡ ಜೈಲು ಪಾಲಾಗಿದ್ದಾರೆ.

ಇನ್ನು ದರ್ಶನ್ ಅರೆಸ್ಟ್ ಆದಾಗಿನಿಂದ ಒಂದು ದಿನವೂ ಮಾತನಾಡಿರಲಿಲ್ಲ. ಆದರೆ ಇಂದು ಅಭಿಮಾನಿಗಳಿಗೆ ಧೈರ್ಯ ತುಂಬಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಗೆ ಹೋಗುವ ಮುನ್ನ ಕೈಬೀಸಿದ್ದು, ಪ್ಲೈನ್ ಕಿಸ್ ನೀಡಿದ್ದಾರೆ. ಬಳಿಕ ನನಗೇನು ಆಗುವುದಿಲ್ಲ ಎಂದಿದ್ದಾರೆ.

ಪೊಲೀಸ್ ಗಾಡಿಯಲ್ಲಿ ಕೂತು, ಅಭಿಮಾನಿಗಳತ್ತ ಕೈ ಬೀಸಿದ್ದಾರೆ. ಈ ವೇಳೆ ಮಾತನಾಡಿದ್ದು, ನನಗೆ ಏನು ಆಗುವುದಿಲ್ಲ ಹೆದರಬೇಡಿ ಎಂದು ಹೇಳಿದ್ದಾರೆ. ಈ ವಿಡಿಯೋ ಸದ್ಯ ಸೋಷಿಯಲ್ ಮಿಡೀಯಾದಲ್ಲಿ ವೈರಲ್ ಆಗಿದೆ. ಅಭಿಮಾನಿಗಳಿಗೂ ಕೊಂಚ ರಿಲ್ಯಾಕ್ಸ್ ಆಗಿದೆ.

ದರ್ಶನ್ ಪೊಲೀಸರ ಕಸ್ಟಡಿಗೆ ಹೋದಾಗಿನಿಂದ ಅಭಿಮಾನಿಗಳು ಆತಂಕದಲ್ಲಿದ್ದರು. ಪೊಲೀಸ್ ಠಾಣೆಯಲ್ಲಿ ಬೇರೆ ಏನು ಕಾಣದ ರೀತಿ ಶಾಮಿಯಾನ ಹಾಕಿದ್ದರು. ಕಸ್ಟಡಿಗೆ ತೆಗೆದುಕೊಳ್ಳುತ್ತಿದ್ದ ಕಾರಣ ಏನಾಗುತ್ತಿದೆ ಎಂಬುದನ್ನು ತಿಳಿಯಲಾಗದೆ ಅಭಿಮಾನಿಗಳು ಸಂಕಟ ಪಡುತ್ತಿದ್ದರು. ಇಂದು ಖುದ್ದು ದರ್ಶನ್, ನನಗೇನು ಆಗಲ್ಲ ಎಂದು ಹೇಳಿರುವುದು ಅಭಿಮಾನಿಗಳಿಗೆ ಸಮಾಧಾನ ತಂದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment