Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಮಾರಸ್ವಾಮಿ & ಸಿದ್ದರಾಮಯ್ಯ ಹೇಳಿಕೆಗೆ ಮಂತ್ರಾಲಯ ಸುಬುದೇಂದ್ರ ಶ್ರೀಗಳು ಗರಂ..!

Facebook
Twitter
Telegram
WhatsApp

ಬಾಗಲಕೋಟೆ: 2023ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಪ್ರಚಾರ ಕಾರ್ಯದ ನಡುವೆ ಈ ಜಾತಿ ರಾಜಕಾರಣ ಜೋರಾಗಿದೆ. ಕುಮಾರಸ್ವಾಮಿ ಅವರು ಬ್ರಾಹ್ಮಣ ಸಮುದಾಯದ ಸಿಎಂ ಬಗ್ಗೆ ಮಾತನಾಡಿದ್ದು, ಸಿದ್ದರಾಮಯ್ಯ ಹಿಂದುತ್ವದ ಬಗ್ಗೆ ಮಾತನಾಡಿದ್ದಾರೆ. ಈ ಎರಡು ವಿಚಾರ ಈಗ ಬಹಳ ಚರ್ಚೆಗೆ ಗ್ರಾಸವಾಗಿದೆ.

ಈ ಬಗ್ಗೆ ಮಂತ್ರಾಲಯ ಮಠದ ಸ್ವಾಮೀಜಿ ಸುಬುದೇಂದ್ರ ಸ್ವಾಮೀಜಿ ಮಾತನಾಡಿದ್ದು, ನಾನು ಹಿಂದೂ ವಿರೋಧವಲ್ಲ, ಹಿಂದುತ್ವದ ವಿರೋಧಿ ಎಂದು ಸಿದ್ದರಾಮಯ್ಯ ಅವರು ಹೇಳಿದ ಮಾತಿಗೆ ಕಿಡಿಕಾರಿದ್ದಾರೆ. ಯಾರು ಹಿಂದುಗಳು ಆಗಿದ್ದಾರೆ ಅವರು ಹಿಂದುತ್ವ ಗೌರವಿಸಬೇಕು. ಹಿಂದು ಗೌರವಿಸುತ್ತೀನಿ, ಹಿಂದುತ್ವವನ್ನು ಒಪ್ಪಲ್ಲ ಎಂಬ ಸಮಂಜಸವನ್ನು ಒಪ್ಪುವುದಿಲ್ಲ ಎಂದು ಮಂತ್ರಾಲಯ ಮಠದ ಸುಬಿದೇಂದ್ರ ಶ್ರೀಗಳು ಹೇಳಿದ್ದಾರೆ.

ಇದೇ ವೇಳೆ ಕುಮಾರಸ್ವಾಮಿ ಅವರ ಬ್ರಾಹ್ಮಣ ಸಿಎಂ ಹೇಳಿಕೆಗೆ, ಧರ್ಮದಲ್ಲಿ ರಾಜಕೀಯ ಬರಬಾರದು. ಹಿಂದುಳಿದವರು ಸಿಎಂ ಆಗಬೇಕು ಎಂದು ಸಂವಿಧಾನದಲ್ಲಿಯೇ ಇದೆ. ಬ್ರಾಹ್ಮಣರು ಸಿಎಂ ಆದರೆ ತಪ್ಪೇನು ಇಲ್ಲ. ಮುಖ್ಯವಾಗಿ ಈ ಜಾತಿ ರಾಜಕಾರಣ ಎಂಬುದು ತೊಲಗಬೇಕು. ಸಂವಿಧಾನದಲ್ಲಿ ಇಂಥ ಜಾತಿಯವರೇ ಅಧಿಕಾರ ನಡೆಸಬೇಕು ಎಂಬುದಿಲ್ಲ. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಎಲ್ಲಾ ಜನಾಂಗದವರಿಗೂ ಸಮಾನವಾಗಿ ಕಾಣುವಂತೆ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

error: Content is protected !!