ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕನ್ನಡದ ಸಾಹಿತಿಗಳಾದ ಎಂ ಎಂ ಕಲಬುರಗಿ, ಗೌರಿ ಲಂಕೇಶ್ ಹತ್ಯೆ ಬಳಿಕ ಸಾಹಿತಿಗಳಿಗೆ ಬೆದರಿಕೆಗಳು ಹೆಚ್ಚಾಗಿವೆ. ಇದೀಗ ಕುಂ. ವೀರಭದ್ರಪ್ಪ, ಲಲಿತಾ ನಾಯಕ್, ಬಂಜಗೆರೆ ಜಯಪ್ರಕಾಶ್ ಗೆ ಬೆದರಿಕೆ ಪತ್ರಗಳು ಬಂದಿವೆ. ಗೌರಿ ಲಂಕೇಶ್, ಕಲಬುರಗಿಯಂತೆ ಪ್ರಾಣ ಬಿಡಲು ರೆಡಿಯಾಗಿ ಎಂದು ಪತ್ರದಲ್ಲಿ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಇದೀಗ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.
ಸಾಹಿತಿಗಳಿಗೆ ನಿರಂತರವಾಗಿ ಪತ್ರ ಬರೆಯುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ದಾವಣಗೆರೆಯಲ್ಲಿ ಶಿವಾಜಿ ರಾವ್ ಜಾದವ್ ಎಂಬಾತನನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 15ಕ್ಕೂ ಹೆಚ್ಚು ಸಾಹಿತಿಗಳಿಗೆ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ. ಸಿಸಿಬಿ ಪೊಲೀಸರು ಬಂಧಿಸಿರುವ ಆರೋಪಿ, ಸಾಹಿತಿಗಳಿಗೆ ಅಂಚೆ ಮೂಲಕ ಬೆದರಿಕೆ ಪತ್ರಗಳನ್ನು ಕಳುಹಿಸಿದ್ದ. ಆ ಪತ್ರಗಳನ್ನೆಲ್ಲಾ ಸಿಸಿಬಿ ಎಫ್ಎಸ್ಎಲ್ ಗೆ ಕಳುಹಿಸಲಾಗಿತ್ತು. ಎಲ್ಲಾ ಪತ್ರದಲ್ಲೂ ಒಂದೇ ಕೈಬರಹ ಇರುವುದು ಗೊತ್ತಾಗಿದೆ. ಆದರೆ ಬೇರೆ ಬೇರೆ ಪೋಸ್ಟ್ ಆಫೀಸಲ್ಲಿ ಪತ್ರಗಳನ್ನು ರವಾನಿಸಿದ್ದಾನೆ.
ಬೆದರಿಕೆ ಪತ್ರಗಳ ಕೇಸನ್ನು ಸಿಸಿಬಿ ಪೊಲೀಸರಿಗೆ ವಹಿಸಲಾಗಿತ್ತು. ಕಳೆದ ಒಂದು ತಿಂಗಳಿನಿಂದ ಕಾರ್ಯಾಚರಣೆಗೆ ಇಳಿದಿರುವ ಸಿಸಿಬಿ ಪೊಲೀಸರು, ಉತ್ತರ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ಕೂಡ ಮಾಡಿದ್ದಾರೆ. ಮೊದಲಿಗೆ ಪತ್ರಗಳು ಬಂದ ಪೋಸ್ಟ್ ಆಫೀಸ್ಗಳ ಪತ್ತೆ ಹಚ್ಚಲಾಗಿತ್ತು. ನಂತರ ಎಲ್ಲಾ ಪೋಸ್ಟ್ ಆಫೀಸ್ಗಳ ಕವರ್ ಡಂಪ್ ಮಾಡಿದ್ದರು. ಅಲ್ಲಿನ ಎಲ್ಲಾ ನಂಬರ್ಗಳ ಸಿಡಿಆರ್ ಪರಿಶೀಲನೆ ಮಾಡಲಾಗಿತ್ತು. ಎಲ್ಲಾ ಪೋಸ್ಟ್ ಆಫೀಸ್ಗಳ ಬಳಿ ಌಕ್ಟಿವ್ ಆಗಿದ್ದ ಒಂದು ನಂಬರ್ ಅನ್ನು ಪತ್ತೆ ಹಚ್ಚಲಾಗಿದೆ. ಆ ಒಂದು ನಂಬರ್ನ ಆಧಾರದಲ್ಲಿ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್