Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗೌರಿ ಲಂಕೇಶ್, ಕಲಬುರಗಿಯಂತೆ ಪ್ರಾಣ ಬಿಡಲು ರೆಡಿಯಾಗಿ : ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆದಿದ್ದ ದಾವಣಗೆರೆ ವ್ಯಕ್ತಿ ಅರೆಸ್ಟ್

Facebook
Twitter
Telegram
WhatsApp

 

ಬೆಂಗಳೂರು: ಕನ್ನಡದ ಸಾಹಿತಿಗಳಾದ ಎಂ ಎಂ ಕಲಬುರಗಿ, ಗೌರಿ ಲಂಕೇಶ್ ಹತ್ಯೆ ಬಳಿಕ ಸಾಹಿತಿಗಳಿಗೆ ಬೆದರಿಕೆಗಳು ಹೆಚ್ಚಾಗಿವೆ. ಇದೀಗ ಕುಂ. ವೀರಭದ್ರಪ್ಪ, ಲಲಿತಾ ನಾಯಕ್, ಬಂಜಗೆರೆ ಜಯಪ್ರಕಾಶ್ ಗೆ ಬೆದರಿಕೆ ಪತ್ರಗಳು ಬಂದಿವೆ. ಗೌರಿ ಲಂಕೇಶ್, ಕಲಬುರಗಿಯಂತೆ ಪ್ರಾಣ ಬಿಡಲು ರೆಡಿಯಾಗಿ ಎಂದು ಪತ್ರದಲ್ಲಿ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಇದೀಗ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.

 

ಸಾಹಿತಿಗಳಿಗೆ ನಿರಂತರವಾಗಿ ಪತ್ರ ಬರೆಯುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ದಾವಣಗೆರೆಯಲ್ಲಿ ಶಿವಾಜಿ ರಾವ್ ಜಾದವ್ ಎಂಬಾತನನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 15ಕ್ಕೂ ಹೆಚ್ಚು ಸಾಹಿತಿಗಳಿಗೆ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ. ಸಿಸಿಬಿ ಪೊಲೀಸರು ಬಂಧಿಸಿರುವ ಆರೋಪಿ, ಸಾಹಿತಿಗಳಿಗೆ ಅಂಚೆ ಮೂಲಕ ಬೆದರಿಕೆ ಪತ್ರಗಳನ್ನು ಕಳುಹಿಸಿದ್ದ. ಆ ಪತ್ರಗಳನ್ನೆಲ್ಲಾ ಸಿಸಿಬಿ ಎಫ್ಎಸ್ಎಲ್ ಗೆ ಕಳುಹಿಸಲಾಗಿತ್ತು. ಎಲ್ಲಾ ಪತ್ರದಲ್ಲೂ ಒಂದೇ ಕೈಬರಹ ಇರುವುದು ಗೊತ್ತಾಗಿದೆ. ಆದರೆ ಬೇರೆ ಬೇರೆ ಪೋಸ್ಟ್ ಆಫೀಸಲ್ಲಿ ಪತ್ರಗಳನ್ನು ರವಾನಿಸಿದ್ದಾನೆ.

ಬೆದರಿಕೆ ಪತ್ರಗಳ ಕೇಸನ್ನು ಸಿಸಿಬಿ ಪೊಲೀಸರಿಗೆ ವಹಿಸಲಾಗಿತ್ತು. ಕಳೆದ ಒಂದು ತಿಂಗಳಿನಿಂದ ಕಾರ್ಯಾಚರಣೆಗೆ ಇಳಿದಿರುವ ಸಿಸಿಬಿ ಪೊಲೀಸರು, ಉತ್ತರ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ಕೂಡ ಮಾಡಿದ್ದಾರೆ. ಮೊದಲಿಗೆ ಪತ್ರಗಳು ಬಂದ ಪೋಸ್ಟ್ ಆಫೀಸ್​ಗಳ ಪತ್ತೆ ಹಚ್ಚಲಾಗಿತ್ತು. ನಂತರ ಎಲ್ಲಾ ಪೋಸ್ಟ್​ ಆಫೀಸ್​ಗಳ ಕವರ್ ಡಂಪ್ ಮಾಡಿದ್ದರು. ಅಲ್ಲಿನ ಎಲ್ಲಾ ನಂಬರ್​ಗಳ ಸಿಡಿಆರ್ ಪರಿಶೀಲನೆ ಮಾಡಲಾಗಿತ್ತು. ಎಲ್ಲಾ ಪೋಸ್ಟ್​ ಆಫೀಸ್​ಗಳ ಬಳಿ ಌಕ್ಟಿವ್ ಆಗಿದ್ದ ಒಂದು ನಂಬರ್ ಅನ್ನು ಪತ್ತೆ ಹಚ್ಚಲಾಗಿದೆ. ಆ ಒಂದು ನಂಬರ್​ನ ಆಧಾರದಲ್ಲಿ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!