Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೆಳಗಾವಿ ಅಧಿವೇಶನದಲ್ಲಿ ಕಾಂತರಾಜ್ ಆಯೋಗದ ವರದಿ ಸ್ವೀಕರಿಸಿ : ಅಬ್ದುಲ್ ಮಜೀದ್

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.06 : ನ್ಯಾಯಯುತ ಸಂವಿಧಾನಬದ್ದ ಹಕ್ಕುಗಳನ್ನು ಸರ್ಕಾರ ಕೂಡಲೆ ಪರಿಗಣಿಸಿ ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ವಿಧಾನಸೌಧದಿಂದ ಬೆಳಗಾವಿಯ ಸುವರ್ಣಸೌಧಕ್ಕೆ ಹೊರಟಿರುವ ಜಾಥ ಗುರುವಾರ ಚಿತ್ರದುರ್ಗಕ್ಕೆ ಆಗಮಿಸಿತು.

ಒನಕೆ ಓಬವ್ವ ವೃತ್ತದಲ್ಲಿ ಜಾಥವನ್ನು ಉದ್ಘಾಟಿಸಿ ಮಾತನಾಡಿದ ಎಸ್.ಡಿ.ಪಿ.ಐ. ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕಾಂತರಾಜ್ ಆಯೋಗದ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಿ ಅನೇಕ ವರ್ಷಗಳೇ ಕಳೆದಿದ್ದರೂ ಇನ್ನು ಜಾರಿಗೆ ತರುವಲ್ಲಿ ಆಳುವ ಸರ್ಕಾರಗಳು ಮೀನಾಮೇಷ ಎಣಿಸುತ್ತಿವೆ. ಹಾಗಾಗಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂತರಾಜ್ ಆಯೋಗದ ವರದಿಯನ್ನು ಕೂಡಲೆ ಸ್ವೀಕರಿಸಬೇಕು ಎಂದು ಒತ್ತಾಯಿಸಿದರು.

ಪರಿಶಿಷ್ಟರ ಒಳಮೀಸಲಾತಿ ಹಂಚಿಕೆಯಲ್ಲಿ ಅಸ್ಪøಶ್ಯರು ಎನ್ನುವ ಕಾರಣಕ್ಕಾಗಿ ಸಮುದಾಯಕ್ಕೆ ಅನ್ಯಾಯವಾಗುತ್ತಲೆ ಬರುತ್ತಿದೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ 30 ವರ್ಷಗಳಿಂದಲೂ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. ಶೀಘ್ರವೇ ವರದಿಯನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಆಗ್ರಹಿಸಿದರು.

ರಾಜ್ಯದಲ್ಲಿ ಮುಸಲ್ಮಾನರಿಗಿದ್ದ 2 ಬಿ.ಯಡಿ ನಾಲ್ಕು ಪರ್ಸೆಂಟ್ ಮೀಸಲಾತಿಯನ್ನು ಹಿಂದಿನ ಬಸವರಾಜ್ ಬೊಮ್ಮಾಯಿ ಸರ್ಕಾರ ರದ್ದುಪಡಿಸಿತ್ತು. ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರ 2 ಬಿ. ಮೀಸಲಾತಿಯನ್ನು ಪುನರ್ ಘೋಷಿಸಿ ಶೇ.ನಾಲ್ಕರಿಂದ ಎಂಟು ಪರ್ಸೆಂಟ್‍ಗೆ ಹೆಚ್ಚಿಸುವಂತೆ ಮನವಿ ಮಾಡಿದರು.

ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್ ಜಾಥ ಉದ್ದೇಶಿಸಿ ಮಾತನಾಡಿ ದಲಿತರು, ಮುಸಲ್ಮಾನರು, ಹಿಂದುಳಿದಿರುವ ಮತಗಳನ್ನು ಪಡೆದು ಗೆದ್ದಿರುವ ಚಿತ್ರದುರ್ಗ ಶಾಸಕ ಬೆಳಗಾವಿಯ ಸುರ್ವಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಾಣುತ್ತಿಲ್ಲ. ನಿಜವಾಗಿಯೂ ಮತದಾರರ ಋಣ ನಿಮ್ಮ ಮೇಲಿದ್ದರೆ ದಲಿತರು, ಮುಸಲ್ಮಾನರ ಪರ ಧ್ವನಿಎತ್ತಿ. ಎಲ್ಲಿಯವರೆಗೂ ಸುಳ್ಳು ಇರುತ್ತದೋ ಅಲ್ಲಿಯತನಕ ಎಸ್.ಡಿ.ಪಿ.ಐ. ಜೀವಂತವಾಗಿದ್ದು, ಹೋರಾಟ ನಡೆಸುತ್ತದೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಮ್ಮ ಶಕ್ತಿಯನ್ನು ತೋರಿಸುತ್ತವೆಂದು ಗುಡುಗಿದರು.

ಎಸ್.ಡಿ.ಪಿ.ಐ. ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೂಡ್ಲಿಪೇಟೆ, ಭೀಮಯಾತ್ರೆ ಬಳಗದ ಮುಖಂಡ ಭಾಸ್ಕರ್‍ಪ್ರಸಾದ್, ಕುಂಚಿಗನಹಾಳ್ ಮಹಾಲಿಂಗಪ್ಪ, ಎಸ್.ಡಿ.ಪಿ.ಐ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಾಕೀರ್‍ಹುಸೇನ್, ಉಪಾಧ್ಯಕ್ಷ ಕಮ್ರಾನ್‍ಆಲಿ ಸೇರಿದಂತೆ ಪದಾಧಿಕಾರಿಗಳು ಜಾಥದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...