Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿಗೆ ದಾಖಲೆಯ ಫಲಿತಾಂಶ

Facebook
Twitter
Telegram
WhatsApp

ಚಿತ್ರದುರ್ಗ, (ಏ.21) : ನಗರದ  ಎಸ್‌ ಆರ್‌ ಎಸ್‌ ಪಿಯು ಕಾಲೇಜಿಗೆ ಈ ಬಾರಿಯೂ ಉತ್ತಮ ಫಲಿತಾಂಶ ದಾಖಲಾಗಿದೆ.

ಮಾರ್ಚ್‌ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್‌ 21 ಶುಕ್ರವಾರ ಪ್ರಕಟಗೊಂಡಿದ್ದು, ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮೀರಿ ಒಟ್ಟು 318 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ (ಶೇ.85ಕ್ಕಿಂತ ಹೆಚ್ಚು) ಪಡೆದರೆ, ವಿವಿಧ ವಿಷಯಗಳಲ್ಲಿ ಮತ್ತೆ ದಾಖಲೆಯ 63 ವಿದ್ಯಾರ್ಥಿಗಳು 100 ಕ್ಕೆ 100 ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತೀ ತಂದಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಕು. ಹೆಚ್‌ ಎಸ್‌ ಜಯಂತ್‌ ಹಾಗೂ ಕು.ಪೃಥ್ವಿ ಕೆ ಸಿ. ಸಮನಾಗಿ 600 ಕ್ಕೆ 589 ಅಂಕಗಳನ್ನು ಪಡೆದು ಜಿಲ್ಲೆಗೆ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ 589 ಅಂಕಗಳಿಸಿರುವ ಕು. ಹೆಚ್ ಎಸ್ ಜಯಂತ್, ಜೆಇಇ ಮೈನ್ಸ್‌ನಲ್ಲಿ 99.06 ಪರ್ಸಂಟೈಲ್‌ ಗಳಿಸಿ ಜೆಇಇ ಅಡ್ವಾನ್ಡ ಗೆ ಆಯ್ಕೆಯಾಗಿರುತ್ತಾನೆ ಹಾಗೂ OASIS ನಲ್ಲಿ ಆಲ್‌ ಇಂಡಿಯಾ 10ನೇ ರ್ಯಾಂಕ್‌ ಗಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಹಾಗೆಯೇ ವಾಣಿಜ್ಯ ವಿಭಾಗದ  ಕು.ಪೃಥ್ವಿ ಕೆ ಸಿ.  CA ಆಗುವ ಇಚ್ಛೆ ಹೊಂದಿದ್ದಾಳೆ ಹಾಗೂ  ಕು. ಫಣೀಂದ್ರಕುಮಾರ್‌ 587, ಕು.ಹೇಮಾ ಎ. 586, ಕು.ಮಧುಸೂದನ್‌ ಕೆ ಎಂ. 585, ಕು.ಹನಿ ಎ ಜೈನ್‌ 584, ಕು. ನಿತಿನ್‌ 583, ಕು. ಹರ್ಷಿತ ಎಸ್‌ ಎನ್‌ 583, ಕು.ಮರುಳಸಿದ್ದನ ಗೌಡ, 582, ಕು.ದಿಶಾ ಡಿ ಎಸ್‌ 582, ಕು.ಸುಮಧ್ವಕೃಷ್ಣ ಹೆಚ್‌ ಎಂ. 582, ಕು.ಮಹಾಲಕ್ಷ್ಮಿ ವಿ. 582, ಕು.ಸುಷ್ಮ ಎ 580,   ಅಂಕಗಳನ್ನು ಪಡೆದುದಲ್ಲದೆ ಈ ಎಲ್ಲಾ ವಿದ್ಯಾರ್ಥಿಗಳು ಕನಿಷ್ಠ ಎರಡು ವಿಷಯಗಳಲ್ಲಿ 100 ಕ್ಕೆ 100 ಅಂಕಗಳಿಸಿರುವುದು ವಿಶೇಷ.

ಎಸ್‌ ಆರ್‌ ಎಸ್‌ ಪಿಯು ಕಾಲೇಜು ಈ ವರ್ಷ ಅದ್ಬುತ ಫಲಿತಾಂಶ ದಾಖಲಿಸಿ, ಕನ್ನಡ, ಇಂಗ್ಲೀಷ್‌, ಹಿಂದಿ, ಸಂಸ್ಕೃತ, ಭೌತಶಾಸ್ತ್ರ, ಜೀವಶಾಸ್ತ್ರ, ಅರ್ಥಶಾಸ್ತ್ರ , ಲೆಕ್ಕಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ಗಣಕ ವಿಜ್ಞಾನ ವಿಷಯಗಳಲ್ಲಿ ಶೇ.100 ಫಲಿತಾಂಶ ದಾಖಲಿಸಿ ಹೊಸ ಇತಿಹಾಸ ಬರೆದಿದೆ.

ಕಾಲೇಜಿನ ಫಲಿತಾಂಶ ವೃದ್ಧಿಗೆ ಕೈಗೊಂಡ ಕ್ರಮಗಳು ಭರ್ಜರಿ ಯಶಸ್ಸು ಗಳಿಸಿ ಎಸ್‌ ಆರ್‌ ಎಸ್‌ ಪಿಯು ತರಬೇತಿಯ ಹೊಸ ಆಶಾಕಿರಣವಾಗಿ ಹೊಮ್ಮಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿ ಯವರು ಅಭಿಪ್ರಾಯ ಪಟ್ಟಿದ್ದಾರೆ.

ಕಾಲೇಜಿಗೆ ಹಾಗೂ ಜಿಲ್ಲೆಗೆ  ಕೀರ್ತೀ ತಂದಿರುವ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ  ಬಿ ಎ ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷರಾದ ಬಿ ಎಲ್‌ ಅಮೋಘ್‌, ಆಡಳಿತಾಧಿಕಾರಿಗಳಾದ ಡಾ. ರವಿ ಟಿ.ಎಸ್‌., ಪ್ರಾಂಶುಪಾಲರಾದ ಗಂಗಾಧರ್‌ ಈ. ಉಪ ಪ್ರಾಂಶುಪಾಲರಾದ ಅಣ್ಣಪ್ಪ ಹೆಚ್‌ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೂವಿನ ಹಡಗಲಿ | ಬೂದನೂರಿನಲ್ಲಿ ವಿಜೃಂಭಣೆಯಿಂದ ಜರುಗಿದ ಶ್ರೀ ವೀ­ರಭದ್ರೇಶ್ವರ ಜಾತ್ರೆ

ಸುದ್ದಿಒನ್, ವಿಜಯನಗರ, ಹೂವಿನ ಹಡಗಲಿ, ಮೇ. 09  : ತಾಲ್ಲೂಕಿನ ಬೂದನೂರು ಗ್ರಾಮದಲ್ಲಿ ಗುರುವಾರ ಸಂಜೆ 5 ಗಂಟೆಗೆ ವೀ­ರಭದ್ರೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ಅನೇಕ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

error: Content is protected !!