Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿಗೆ ದಾಖಲೆಯ ಫಲಿತಾಂಶ

---Advertisement---

ಚಿತ್ರದುರ್ಗ, (ಏ.21) : ನಗರದ  ಎಸ್‌ ಆರ್‌ ಎಸ್‌ ಪಿಯು ಕಾಲೇಜಿಗೆ ಈ ಬಾರಿಯೂ ಉತ್ತಮ ಫಲಿತಾಂಶ ದಾಖಲಾಗಿದೆ.

ಮಾರ್ಚ್‌ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಏಪ್ರಿಲ್‌ 21 ಶುಕ್ರವಾರ ಪ್ರಕಟಗೊಂಡಿದ್ದು, ಈ ಹಿಂದಿನ ಎಲ್ಲಾ ದಾಖಲೆಗಳನ್ನು ಮೀರಿ ಒಟ್ಟು 318 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ (ಶೇ.85ಕ್ಕಿಂತ ಹೆಚ್ಚು) ಪಡೆದರೆ, ವಿವಿಧ ವಿಷಯಗಳಲ್ಲಿ ಮತ್ತೆ ದಾಖಲೆಯ 63 ವಿದ್ಯಾರ್ಥಿಗಳು 100 ಕ್ಕೆ 100 ಅಂಕಗಳನ್ನು ಪಡೆದು ಜಿಲ್ಲೆಗೆ ಕೀರ್ತೀ ತಂದಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಕು. ಹೆಚ್‌ ಎಸ್‌ ಜಯಂತ್‌ ಹಾಗೂ ಕು.ಪೃಥ್ವಿ ಕೆ ಸಿ. ಸಮನಾಗಿ 600 ಕ್ಕೆ 589 ಅಂಕಗಳನ್ನು ಪಡೆದು ಜಿಲ್ಲೆಗೆ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ 589 ಅಂಕಗಳಿಸಿರುವ ಕು. ಹೆಚ್ ಎಸ್ ಜಯಂತ್, ಜೆಇಇ ಮೈನ್ಸ್‌ನಲ್ಲಿ 99.06 ಪರ್ಸಂಟೈಲ್‌ ಗಳಿಸಿ ಜೆಇಇ ಅಡ್ವಾನ್ಡ ಗೆ ಆಯ್ಕೆಯಾಗಿರುತ್ತಾನೆ ಹಾಗೂ OASIS ನಲ್ಲಿ ಆಲ್‌ ಇಂಡಿಯಾ 10ನೇ ರ್ಯಾಂಕ್‌ ಗಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ಹಾಗೆಯೇ ವಾಣಿಜ್ಯ ವಿಭಾಗದ  ಕು.ಪೃಥ್ವಿ ಕೆ ಸಿ.  CA ಆಗುವ ಇಚ್ಛೆ ಹೊಂದಿದ್ದಾಳೆ ಹಾಗೂ  ಕು. ಫಣೀಂದ್ರಕುಮಾರ್‌ 587, ಕು.ಹೇಮಾ ಎ. 586, ಕು.ಮಧುಸೂದನ್‌ ಕೆ ಎಂ. 585, ಕು.ಹನಿ ಎ ಜೈನ್‌ 584, ಕು. ನಿತಿನ್‌ 583, ಕು. ಹರ್ಷಿತ ಎಸ್‌ ಎನ್‌ 583, ಕು.ಮರುಳಸಿದ್ದನ ಗೌಡ, 582, ಕು.ದಿಶಾ ಡಿ ಎಸ್‌ 582, ಕು.ಸುಮಧ್ವಕೃಷ್ಣ ಹೆಚ್‌ ಎಂ. 582, ಕು.ಮಹಾಲಕ್ಷ್ಮಿ ವಿ. 582, ಕು.ಸುಷ್ಮ ಎ 580,   ಅಂಕಗಳನ್ನು ಪಡೆದುದಲ್ಲದೆ ಈ ಎಲ್ಲಾ ವಿದ್ಯಾರ್ಥಿಗಳು ಕನಿಷ್ಠ ಎರಡು ವಿಷಯಗಳಲ್ಲಿ 100 ಕ್ಕೆ 100 ಅಂಕಗಳಿಸಿರುವುದು ವಿಶೇಷ.

ಎಸ್‌ ಆರ್‌ ಎಸ್‌ ಪಿಯು ಕಾಲೇಜು ಈ ವರ್ಷ ಅದ್ಬುತ ಫಲಿತಾಂಶ ದಾಖಲಿಸಿ, ಕನ್ನಡ, ಇಂಗ್ಲೀಷ್‌, ಹಿಂದಿ, ಸಂಸ್ಕೃತ, ಭೌತಶಾಸ್ತ್ರ, ಜೀವಶಾಸ್ತ್ರ, ಅರ್ಥಶಾಸ್ತ್ರ , ಲೆಕ್ಕಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ಗಣಕ ವಿಜ್ಞಾನ ವಿಷಯಗಳಲ್ಲಿ ಶೇ.100 ಫಲಿತಾಂಶ ದಾಖಲಿಸಿ ಹೊಸ ಇತಿಹಾಸ ಬರೆದಿದೆ.

ಕಾಲೇಜಿನ ಫಲಿತಾಂಶ ವೃದ್ಧಿಗೆ ಕೈಗೊಂಡ ಕ್ರಮಗಳು ಭರ್ಜರಿ ಯಶಸ್ಸು ಗಳಿಸಿ ಎಸ್‌ ಆರ್‌ ಎಸ್‌ ಪಿಯು ತರಬೇತಿಯ ಹೊಸ ಆಶಾಕಿರಣವಾಗಿ ಹೊಮ್ಮಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಬಿ ಎ ಲಿಂಗಾರೆಡ್ಡಿ ಯವರು ಅಭಿಪ್ರಾಯ ಪಟ್ಟಿದ್ದಾರೆ.

ಕಾಲೇಜಿಗೆ ಹಾಗೂ ಜಿಲ್ಲೆಗೆ  ಕೀರ್ತೀ ತಂದಿರುವ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ  ಬಿ ಎ ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಶ್ರೀಮತಿ ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷರಾದ ಬಿ ಎಲ್‌ ಅಮೋಘ್‌, ಆಡಳಿತಾಧಿಕಾರಿಗಳಾದ ಡಾ. ರವಿ ಟಿ.ಎಸ್‌., ಪ್ರಾಂಶುಪಾಲರಾದ ಗಂಗಾಧರ್‌ ಈ. ಉಪ ಪ್ರಾಂಶುಪಾಲರಾದ ಅಣ್ಣಪ್ಪ ಹೆಚ್‌ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...