ಬೆಂಗಳೂರು: ಸರ್ಕಾರಿ ಕೆಲಸಕ್ಕೆಂದು ಕಾಯುತ್ತಿರುವವರು BWSSB ನಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ, ಅಪ್ಲೈ ಮಾಡಬಹುದು. ಅರ್ಜಿ ಹಾಕುವುದಕ್ಕೆ ಯಾರೆಲ್ಲಾ ಅರ್ಹರು, ಅಪ್ಲೈ ಮಾಡಲು ಯಾವಾಗ ಕೊನೆ ದಿನ ಈ ಎಲ್ಲಾ ಮಾಹಿತಿ ಇಲ್ಲಿವೆ.
ಕಾನೂನು ಅಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಸೇವಾ ವಿಷಯಗಳಲ್ಲಿ ನುರಿತ ಹಾಗೂ ಹೆಚ್ಚಿನ ಅನುಭವವುಳ್ಳ ನಿವೃತ್ತ ಜಿಲ್ಲಾ ಮತ್ತು ಸೆಷನ್ಸಗ ನ್ಯಾಯಾಧೀಶರು ಅರ್ಜಿ ಸಲ್ಲಿಸಬಹುದಾಗಿದೆ. ಸದರಿ ಸೇವೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವವರು ನ್ಯಾಯಾಂಗ ಇಲಾಖೆಯಲ್ಲಿ ಜಿಲ್ಲಾ ನ್ಯಾಯಾಧೀಶರಾಗಿ ಕನಿಷ್ಠ 5 ವರ್ಷಗಳ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿರಬೇಕು. ಹಿಂದಿನ ಸೇವೆಯಿಂದ ವಜಾಗೊಂಡಿರಬಾರದು. ಕಾನೂನು ಅಧಿಕಾರಿ ಹುದ್ದೆಗೆ ಸಂಭಾವನೆ 1.15 ಲಕ್ಷ ರೂಪಾಯಿ ಹಾಗೂ ವಾಹನ ಭತ್ಯೆ 35 ಸಾವಿರ ರೂಪಾಯಿ ನಿಗದಿಪಡಿಸಲಗಿದೆ. ಸದರಿಯವರ ಸೇವೆಯನ್ನು 2 ವರ್ಷಗಳ ಅವಧಿಗೆ ನೇಮಕ ಮಾಡಲಾಗುತ್ತಿದೆ.
1 ವರ್ಷದ ನಂತರ ಅವರ ಕಾರ್ಯನಿರ್ವಹಣೆಯ ಆಧಾರದ ಮೇಲೆನಂತರದ ಮುಂದಿನ 1 ವರ್ಷದವರೆಗೆ ಮುಂದುವರೆಸಲಾಗುವುದು. ಅರ್ಹರು ತಮ್ಮ ಹೆಸರು, ವಿಳಾಸ, ಜನ್ಮದಿನಾಂಕ, ವಿದ್ಯಾರ್ಹತೆ, ಸೇವಾ ವಿವರಗಳನ್ನೊಳಗೊಂಡ ಸಂಪೂರ್ಣ ಮಾಹಿತಿ ಹಾಗೂ ಅಗತ್ಯ ದಾಖಲೆಗಳನ್ನ ಲಗತ್ತಿಸಿ ಅಧಿಸೂಚನೆ ಹೊರಡಿಸಿದ 15 ದಿನದೊಳಗೆ ಮುಚ್ಚಿದ ಲಕೋಟೆಯಲ್ಲಿ ಅರ್ಜಿ ಸಲ್ಲಿಸಬೇಕು. ಮುಖ್ಯ ಆಡಳಿತಾಧಿಕಾರಿ ಹಾಗೂ ಕಾರ್ಯದರ್ಶಿ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 1ನೇ ಮಹಡಿ, ಕಾವೇರಿ ಭವನ, ಕೆ.ಜಿ.ರಸ್ತೆ,ಬೆಂಗಳೂರು-560009 ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮುಖಾಂತರ ಸಲ್ಲಿಸಬಹುದು. ಅರ್ಹ ಆಸಕ್ತರು ಅರ್ಜಿಯನ್ನು ಸಲ್ಲಿಕೆ ಮಾಡಬಹುದು.





















