Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿ ಅಕ್ಟೋಬರ್ 21ರಂದು ಶಿಕ್ಷಕರ ಸ್ಥಳ ನಿಯುಕ್ತಿ ಕೌನ್ಸಿಲಿಂಗ್

Facebook
Twitter
Telegram
WhatsApp

 

ಚಿತ್ರದುರ್ಗ.ಅಕ್ಟೋಬರ್.19: ಪದವೀಧರ ಪ್ರಾಥಮಿಕ ಶಿಕ್ಷಕರ (6-8ನೇ ತರಗತಿ) ನೇಮಕಾತಿ ಸ್ಥಳ ನಿಯುಕ್ತಿ ಕೌನ್ಸಿಲಿಂಗ್ ಇದೇ ಅಕ್ಟೋಬರ್ 21ರಂದು ಚಿತ್ರದುರ್ಗ ನಗರದ ಜಿಲ್ಲಾ ಉಪನಿರ್ದೇಶಕರ ಕಚೇರಿ ಆವರಣದ ಎಸ್.ಎಸ್.ಎ ಸಭಾಂಗಣದಲ್ಲಿ ನಡೆಯಲಿದೆ.

ಪದವೀಧರ ಪ್ರಾಥಮಿಕ ಶಿಕ್ಷಕರ (06 ರಿಂದ 08ನೇ ತರಗತಿ) ನೇಮಕಾತಿ 2022ರ ನೇಮಕಾತಿಗೆ ಸಂಬಂಧಿಸಿದಂತೆ 2023ರ ಮಾರ್ಚ್ 8ರಂದು ಪ್ರಕಟಿಸಲಾಗಿರುವ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಿಲಿಂಗ್‍ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಅಕ್ಟೋಬರ್ 19ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.giv.in  ನಲ್ಲಿ ಪ್ರಕಟಿಸಲಾಗುತ್ತದೆ.

ಈ ಪಟ್ಟಿಯಲ್ಲಿನ ಅಭ್ಯರ್ಥಿಗಳ ಕ್ರಮವಾಗಿ ಗಣಿತ & ವಿಜ್ಞಾನ, ಸಮಾಜ ವಿಜ್ಞಾನ, ಜೀವವಿಜ್ಞಾನ ಮತ್ತು ಆಂಗ್ಲಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಿಲಿಂಗ್‍ನ್ನು ಇದೇ ಅಕ್ಟೋಬರ್ 21ರಂದು ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಜಿಲ್ಲೆ ಇಲ್ಲಿನ ಕಛೇರಿ ಆವರಣದ ಎಸ್.ಎಸ್.ಎ ಸಭಾಂಗಣದಲ್ಲಿ ಬೆಳಿಗ್ಗೆ 10.30 ರಿಂದ ಕೌನ್ಸಿಲಿಂಗ್ ಮುಗಿಯುವವರೆಗೆ ಇಲಾಖೆ ವೆಬ್ ಸೈಟ್‍ನಲ್ಲಿರುವಂತೆ 1:1 ಆಯ್ಕೆ ಪಟ್ಟಿಯಲ್ಲಿರುವ ಎಲ್ಲಾ ಅಭ್ಯರ್ಥಿಗಳಿಗೆ ನಡೆಸಲಾಗುವುದು.

ಅಭ್ಯರ್ಥಿಗಳು ಭಾವಚಿತ್ರವಿರುವ ಗುರುತಿನ ಚೀಟಿ ಮತ್ತು ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.

ಹೆಚ್ಚಿನ ವಿವರಗಳಿಗೆ .ಕೆ.ರವಿಶಂಕರರೆಡ್ಡಿ, ಉಪನಿರ್ದೇಶಕರು (ಆಡಳಿತ) ಇವರ ದೂರವಾಣಿ ಸಂಖ್ಯೆ 9448999336, ನೋಡಲ್ ಅಧಿಕಾರಿ ಸಿದ್ದಪ್ಪ ದೂರವಾಣಿ ಸಂಖ್ಯೆ 7483662424, ಅಧೀಕ್ಷಕ ಮಲ್ಲಿಕಾರ್ಜುನ ದೂರವಾಣಿ ಸಂಖ್ಯೆ  9591516171,  ವಿಷಯ ನಿರ್ವಾಹಕ ಬಿ.ಶಿವಶಂಕರ ದೂರವಾಣಿ ಸಂಖ್ಯೆ 9845564258 ಕ್ಕೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರರೆಡ್ಡಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!