ಚಿತ್ರದುರ್ಗ. ಮಾ.18: ಜೀವ ಉಳಿಸುವ ಮಾನವೀಯ ಸೇವೆ ಮತ್ತು ರಕ್ತದಾನ ಅಭಿಯಾನದಲ್ಲಿ ತೋರಿದ ಗಮನಾರ್ಹ ಸಾಧನೆಗಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಚಿತ್ರದುರ್ಗ ಜಿಲ್ಲಾ ಶಾಖೆಗೆ ನ್ಯಾಷನಲ್ ಸೋಷಿಯಲ್ ಇಂಪ್ಯಾಕ್ಟ್ ಪ್ರಶಸ್ತಿ ಹಾಗೂ ಅಂತರ ರಾಷ್ಟ್ರೀಯ ಮಟ್ಟದ ‘ವಲ್ರ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್’ ಪುರಸ್ಕಾರ ದೊರೆತಿದೆ.
ಬೆಂಗಳೂರಿನ ಗಾಂಧಿ ಭವನದಲ್ಲಿ ನ್ಯಾಷನಲ್ ಇಂಟಿಗ್ರೇಟೆಡ್ ಫೋರಮ್ ಆಫ್ ಆರ್ಟಿಸ್ಟ್ಸ್ ಅಂಡ್ ಆಕ್ಟಿವಿಸ್ಟ್ಸ್ (ಎನ್ಐಎಫ್ಎಎ) ವತಿಯಿಂದ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ‘ಸಂವೇದನಾ–2 ರಕ್ತದಾನ ಪ್ರಶಸ್ತಿ ಸಮಾರಂಭ’ದಲ್ಲಿ ಪ್ರಶಂಸಾಪತ್ರ ನೀಡಿ ಗೌರವಿಸಲಾಯಿತು.
ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆಯ ಉಪ ಸಭಾಪತಿ ಅರುಣ್ ಕುಮಾರ್, ಕಾರ್ಯದರ್ಶಿ ಮಜಹರ್ ಉಲ್ಲಾ ಹಾಗೂ ನಿರ್ದೇಶಕ ಎಸ್.ವಿ. ಗುರುಮೂರ್ತಿ ಅವರು ಗಣ್ಯರಿಂದ ಪ್ರಶಸ್ತಿ ಸ್ವೀಕರಿಸಿದರು.
ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕøತ ಡಾ. ಸಿ.ಆರ್. ಚಂದ್ರಶೇಖರ್, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಕುಲಪತಿ ಡಾ. ಗೋವಿಂದಪ್ಪ, ರಾಜ್ಯ ಎನ್ಎಸ್ಎಸ್ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ, ಎನ್ಐಎಂಎ ರಾಜ್ಯಾಧ್ಯಕ್ಷ ಡಾ. ಸಿದ್ಧಪ್ಪ, ಬಿಎಸ್ಎಫ್ನ ಡಾ. ಗುರುಮೂರ್ತಿ, ಬೆಂಗಳೂರು ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಎ.ಬಿ. ಶೆಟ್ಟಿ ಹಾಗೂ ವಲ್ರ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ನ ಪ್ರಧಾನ ಕಾರ್ಯದರ್ಶಿ ಅಂಬಾಸಿಡರ್ ಡಾ. ನೀಲಿಮಾ ಉಪಸ್ಥಿತರಿದ್ದರು. ಎನ್ಐಎಫ್ಎಎ ರಾಷ್ಟ್ರೀಯ ಅಧ್ಯಕ್ಷೆ ಡಾ. ಅಶ್ವಿನಿ ಎಸ್. ಶೆಟ್ಟಿ ಅವರ ಸಮ್ಮುಖದಲ್ಲಿ ಪ್ರಶಸ್ತಿ ವಿತರಿಸಲಾಯಿತು.















