Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚುನಾವಣಾ ಪ್ರಚಾರದಲ್ಲಿ ರೆಡ್ಡಿ ಫುಲ್ ಬ್ಯುಸಿ : ಬಳ್ಳಾರಿಯಲ್ಲಿ ಸಹೋದರನೆದುರೇ ಪತ್ನಿ ಕಣಕ್ಕೆ..!

---Advertisement---

ಕೊಪ್ಪಳ: ಈ ಬಾರಿಯ ಚುನಾವಣಾ ಕಣ ರಂಗೇರಿದೆ. ಕರ್ನಾಟಕದ ರಾಜ್ಯದ ನೆಲ ಚುನಾವಣಾ ಬಿಸಿಯಿಂದ ಸುಡುತ್ತಿದೆ. ಮೂರು ಪಕ್ಷಗಳ ಪ್ರಚಾರ ಕಾರ್ಯ ಜೋರಾಗಿದೆ. ಅದರ ಜೊತೆಗೆ ಇದೀಗ ಜನಾರ್ದನ ರೆಡ್ಡಿ ಪಕ್ಷವೂ ಸದ್ದು ಮಾಡುತ್ತಿದೆ.

ಬಿಜೆಪಿಯಿಂದ ಟಿಕೆಟ್ ಬಯಸಿದ್ದಂತ ರೆಡ್ಡಿಗೆ ಟಿಕೆಟ್ ಸಿಗದ ಬೇಸರ ಮತ್ತೊಂದು ಪಕ್ಷವನ್ನೇ ಕಟ್ಟುವಂತೆ ಮಾಡಿದೆ. ಜನಾರ್ದನ ರೆಡ್ಡಿ ಪಕ್ಷಕ್ಕೆ ಬಿಜೆಪಿ ನಾಯಕರು ಬರುತ್ತಿದ್ದಾರೆ. ಇದರ ನಡುವೆ ಪಕ್ಷ ಕಟ್ಟುವುದು ಬೇಡ ಎಂದೇ ಸಹೋದರ ಸೋಮಶೇಕರ್ ರೆಡ್ಡಿ ಹಾಗೂ ಸ್ನೇಹಿತ ಶ್ರೀರಾಮುಲು ತಿಳಿಸಿದ್ದರು. ಆದರೂ ಯಾರ ಮಾತನ್ನು ಕೇಳದೆ ಪಕ್ಷ ಸ್ಥಾಪನೆ ಮಾಡಿದ್ದಾರೆ ಜನಾರ್ದನ ರೆಡ್ಡಿ ಅವರು. ಜೊತೆಗೆ ಚುನಾವಣಾ ಪ್ರಚಾರದಲ್ಲೂ ಫುಲ್ ಬ್ಯುಸಿಯಾಗಿದ್ದಾರೆ.

ಇದೀಗ ಸಹೋದರ ಸೋಮಶೇಖರ್ ರೆಡ್ಡಿ ವಿರುದ್ಧವೇ ತಮ್ಮ ಹೆಂಡತಿಯನ್ನು ಕಣಕ್ಕೆ ಇಳಿಸಿದ್ದಾರೆ. ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಗಂಗಾವತಿ ತಾಲೂಕಿನ ಆನೆಗುಂದಿಯಲ್ಲಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ನನ್ನ ಪತ್ನಿ ಅರುಣಾ ಲಕ್ಷ್ಮೀಯನ್ನು ಕಣಕ್ಕೆ ಇಳಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಈ ಮೊದಲು ಸಹೋದರ ಎದುರು ಜನಾರ್ದನ ರೆಡ್ಡಿ ಅವರೇ ಸ್ಪರ್ಧೆಗೆ ಇಳಿಯುತ್ತಾರೆ ಎನ್ನಲಾಗಿತ್ತು. ಆದರೆ ಇದೀಗ ತಮ್ಮ ಹೆಂಡತಿಯನ್ನು ಸ್ಪರ್ಧೆಗೆ ಬಿಟ್ಟಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...