Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚುನಾವಣಾ ಪ್ರಚಾರದಲ್ಲಿ ರೆಡ್ಡಿ ಫುಲ್ ಬ್ಯುಸಿ : ಬಳ್ಳಾರಿಯಲ್ಲಿ ಸಹೋದರನೆದುರೇ ಪತ್ನಿ ಕಣಕ್ಕೆ..!

Facebook
Twitter
Telegram
WhatsApp

ಕೊಪ್ಪಳ: ಈ ಬಾರಿಯ ಚುನಾವಣಾ ಕಣ ರಂಗೇರಿದೆ. ಕರ್ನಾಟಕದ ರಾಜ್ಯದ ನೆಲ ಚುನಾವಣಾ ಬಿಸಿಯಿಂದ ಸುಡುತ್ತಿದೆ. ಮೂರು ಪಕ್ಷಗಳ ಪ್ರಚಾರ ಕಾರ್ಯ ಜೋರಾಗಿದೆ. ಅದರ ಜೊತೆಗೆ ಇದೀಗ ಜನಾರ್ದನ ರೆಡ್ಡಿ ಪಕ್ಷವೂ ಸದ್ದು ಮಾಡುತ್ತಿದೆ.

ಬಿಜೆಪಿಯಿಂದ ಟಿಕೆಟ್ ಬಯಸಿದ್ದಂತ ರೆಡ್ಡಿಗೆ ಟಿಕೆಟ್ ಸಿಗದ ಬೇಸರ ಮತ್ತೊಂದು ಪಕ್ಷವನ್ನೇ ಕಟ್ಟುವಂತೆ ಮಾಡಿದೆ. ಜನಾರ್ದನ ರೆಡ್ಡಿ ಪಕ್ಷಕ್ಕೆ ಬಿಜೆಪಿ ನಾಯಕರು ಬರುತ್ತಿದ್ದಾರೆ. ಇದರ ನಡುವೆ ಪಕ್ಷ ಕಟ್ಟುವುದು ಬೇಡ ಎಂದೇ ಸಹೋದರ ಸೋಮಶೇಕರ್ ರೆಡ್ಡಿ ಹಾಗೂ ಸ್ನೇಹಿತ ಶ್ರೀರಾಮುಲು ತಿಳಿಸಿದ್ದರು. ಆದರೂ ಯಾರ ಮಾತನ್ನು ಕೇಳದೆ ಪಕ್ಷ ಸ್ಥಾಪನೆ ಮಾಡಿದ್ದಾರೆ ಜನಾರ್ದನ ರೆಡ್ಡಿ ಅವರು. ಜೊತೆಗೆ ಚುನಾವಣಾ ಪ್ರಚಾರದಲ್ಲೂ ಫುಲ್ ಬ್ಯುಸಿಯಾಗಿದ್ದಾರೆ.

ಇದೀಗ ಸಹೋದರ ಸೋಮಶೇಖರ್ ರೆಡ್ಡಿ ವಿರುದ್ಧವೇ ತಮ್ಮ ಹೆಂಡತಿಯನ್ನು ಕಣಕ್ಕೆ ಇಳಿಸಿದ್ದಾರೆ. ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಗಂಗಾವತಿ ತಾಲೂಕಿನ ಆನೆಗುಂದಿಯಲ್ಲಿ ರಥಯಾತ್ರೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬಳ್ಳಾರಿ ವಿಧಾನಸಭಾ ಕ್ಷೇತ್ರದಿಂದ ನನ್ನ ಪತ್ನಿ ಅರುಣಾ ಲಕ್ಷ್ಮೀಯನ್ನು ಕಣಕ್ಕೆ ಇಳಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ. ಈ ಮೊದಲು ಸಹೋದರ ಎದುರು ಜನಾರ್ದನ ರೆಡ್ಡಿ ಅವರೇ ಸ್ಪರ್ಧೆಗೆ ಇಳಿಯುತ್ತಾರೆ ಎನ್ನಲಾಗಿತ್ತು. ಆದರೆ ಇದೀಗ ತಮ್ಮ ಹೆಂಡತಿಯನ್ನು ಸ್ಪರ್ಧೆಗೆ ಬಿಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!