Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅರಮನೆಯಲ್ಲಿ ಸಂತಸ-ಸಡಗರ : 2ನೇ ಮಗುವಿಗೆ ಜನ್ಮ ನೀಡಿದ ರಾಣಿ ತ್ರಿಷಿಕಾ

Facebook
Twitter
Telegram
WhatsApp

 

ಮೈಸೂರು: ಇಂದು ನಾಡಿನೆಲ್ಲೆಡೆ ದಸರಾ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ. ಇದರ ನಡುವೆ ರಾಜ ವಂಶದಲ್ಲಿಯೂ ಖುಷಿ ಹೆಚ್ಚಾಗಿದೆ. ಮೈಸೂರು ರಾಜಮನೆತನಕ್ಕೆ ಮತ್ತೊಬ್ಬ ವಾರಸುದಾರ ಬಂದಾಗಿದೆ. ತ್ರಿಷಿಕಾ ಅವರು ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಇಂದು ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ತ್ರಿಷಿಕಾ ದೇವಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಕಳೆದ ಒಂದು ವಾರದಿಂದಲೂ ಅರಮನೆಯಲ್ಲಿ ದಸರಾ ಹಬ್ಬದ ಸಡಗರ ಸಂಭ್ರಮ ಜೋರಾಗಿದೆ. ಆ ಸಂಭ್ರಮ ಇಂದು ದುಪ್ಪಟ್ಟಾಗಿದೆ. ಯದುವೀರ್ ಹಾಗೂ ತ್ರಿಷಿಕಾ ದಂಪತಿಗೆ ಗಂಡು ಮಗು ಜನಿಸಿದೆ. ಅರಮನೆಯಲ್ಲಿ ಆಯುಧ ಪೂಜೆ ಹಾಗೂ ಖಾಸಗಿ ದರ್ಬಾರ್ ನಡೆದಿದ್ದು, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಂಕಣಾಧಾರಿಗಳಾಗಿದ್ದಾರೆ.

ಒಡೆಯರ ಪತ್ನಿ ತ್ರಿಷಿಕಾ ಅವರು ರಾಜಸ್ಥಾನದ ಡುಂಗರಪುರ ರಾಜ ವಂಶಸ್ಥರು. 2016ರ ಜೂನ್ 27 ರಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತ್ರಿಷಿಕಾ ದೇವಿ ಅವರನ್ನು ಮದುವೆಯಾಗಿದ್ದರು. ಇದೀಗ ಎರಡನೇ ಮಗುವಿನ ಆಗಮನವಾಗಿದೆ. ಈ ಬೆಳವಣಿಗೆಯನ್ನು ನೋಡಿದಾಗ ಮೈಸೂರು ಮಹಾರಾಜರಿಗೆ ಇದ್ದಂತ ಶಾಪ ಮುಕ್ತಿಯಾಗಿದೆ ಎಂದೇ ಎನಿಸುತ್ತಿದೆ. ಯಾಕಂದ್ರೆ ಆಲಮೇಲಮ್ಮ ಶಾಪ ನೀಡಿದ್ದರು. ಮಾಲಂಗಿ ಮಡುವಾಗಿ, ತಲಕಾಡು ಮರುಳಾಗಿ,‌ಮೈಸೂರು ಮಹಾರಾಜರಿಗೆ ಮಕ್ಕಳಾಗದಿರಲಿ ಎಂದು ಶಾಪ ನೀಡಿದ್ದರು. ಆ ಶಾಪದಿಂದ ಮೈಸೂರು ಮಹಾರಾಜರಿಗೆ ಮಕ್ಕಳಾಗಿರಲಿಲ್ಲ. ಯದುವೀರ್ ಅವರನ್ನು ದತ್ತು ಪಡೆದುಕೊಂಡಿದ್ದರು. ಇದೀಗ ಯದುವೀರ್ ಅವರಿಗೆ ಎರಡು ಗಂಡು ಮಕ್ಕಳು ಜನಿಸಿದ್ದಾರೆ. ಈ ಮೂಲಕ ಶಾಪ ಮುಕ್ತವಾಗಿದೆ ಎನ್ನಲಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ : ಎರಡನೇ ಪತ್ನಿಗೆ 100 ಕೋಟಿ ಆಸ್ತಿ

ಬೆಂಗಳೂರು :ಮಾಜಿ ಡಾನ್ ಮುತ್ತಪ್ಪ ರೈ ಸಾವನ್ನಪ್ಪಿದ ಬಳಿಕ ಅವರ ಆಸ್ತಿ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಅದರಲ್ಲೂ ಸಾವಿರಾರು ಕೋಟಿ ಆಸ್ತಿಯನ್ನು ಮುತ್ತಪ್ಪ ರೈ ಸಾಯುವುದಕ್ಕೂ ಮುನ್ನ ಮನೆಕೆಲಸದವರಿಗೂ ಸೇರಿ ಬರೆದಿದ್ದರು. 2019ರಲ್ಲಿ

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

error: Content is protected !!