Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅರಮನೆಯಲ್ಲಿ ಸಂತಸ-ಸಡಗರ : 2ನೇ ಮಗುವಿಗೆ ಜನ್ಮ ನೀಡಿದ ರಾಣಿ ತ್ರಿಷಿಕಾ

---Advertisement---

 

ಮೈಸೂರು: ಇಂದು ನಾಡಿನೆಲ್ಲೆಡೆ ದಸರಾ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದೆ. ಇದರ ನಡುವೆ ರಾಜ ವಂಶದಲ್ಲಿಯೂ ಖುಷಿ ಹೆಚ್ಚಾಗಿದೆ. ಮೈಸೂರು ರಾಜಮನೆತನಕ್ಕೆ ಮತ್ತೊಬ್ಬ ವಾರಸುದಾರ ಬಂದಾಗಿದೆ. ತ್ರಿಷಿಕಾ ಅವರು ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಇಂದು ಖಾಸಗಿ ಆಸ್ಪತ್ರೆಯಲ್ಲಿ ತ್ರಿಷಿಕಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ತ್ರಿಷಿಕಾ ದೇವಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ. ಕಳೆದ ಒಂದು ವಾರದಿಂದಲೂ ಅರಮನೆಯಲ್ಲಿ ದಸರಾ ಹಬ್ಬದ ಸಡಗರ ಸಂಭ್ರಮ ಜೋರಾಗಿದೆ. ಆ ಸಂಭ್ರಮ ಇಂದು ದುಪ್ಪಟ್ಟಾಗಿದೆ. ಯದುವೀರ್ ಹಾಗೂ ತ್ರಿಷಿಕಾ ದಂಪತಿಗೆ ಗಂಡು ಮಗು ಜನಿಸಿದೆ. ಅರಮನೆಯಲ್ಲಿ ಆಯುಧ ಪೂಜೆ ಹಾಗೂ ಖಾಸಗಿ ದರ್ಬಾರ್ ನಡೆದಿದ್ದು, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕಂಕಣಾಧಾರಿಗಳಾಗಿದ್ದಾರೆ.

ಒಡೆಯರ ಪತ್ನಿ ತ್ರಿಷಿಕಾ ಅವರು ರಾಜಸ್ಥಾನದ ಡುಂಗರಪುರ ರಾಜ ವಂಶಸ್ಥರು. 2016ರ ಜೂನ್ 27 ರಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತ್ರಿಷಿಕಾ ದೇವಿ ಅವರನ್ನು ಮದುವೆಯಾಗಿದ್ದರು. ಇದೀಗ ಎರಡನೇ ಮಗುವಿನ ಆಗಮನವಾಗಿದೆ. ಈ ಬೆಳವಣಿಗೆಯನ್ನು ನೋಡಿದಾಗ ಮೈಸೂರು ಮಹಾರಾಜರಿಗೆ ಇದ್ದಂತ ಶಾಪ ಮುಕ್ತಿಯಾಗಿದೆ ಎಂದೇ ಎನಿಸುತ್ತಿದೆ. ಯಾಕಂದ್ರೆ ಆಲಮೇಲಮ್ಮ ಶಾಪ ನೀಡಿದ್ದರು. ಮಾಲಂಗಿ ಮಡುವಾಗಿ, ತಲಕಾಡು ಮರುಳಾಗಿ,‌ಮೈಸೂರು ಮಹಾರಾಜರಿಗೆ ಮಕ್ಕಳಾಗದಿರಲಿ ಎಂದು ಶಾಪ ನೀಡಿದ್ದರು. ಆ ಶಾಪದಿಂದ ಮೈಸೂರು ಮಹಾರಾಜರಿಗೆ ಮಕ್ಕಳಾಗಿರಲಿಲ್ಲ. ಯದುವೀರ್ ಅವರನ್ನು ದತ್ತು ಪಡೆದುಕೊಂಡಿದ್ದರು. ಇದೀಗ ಯದುವೀರ್ ಅವರಿಗೆ ಎರಡು ಗಂಡು ಮಕ್ಕಳು ಜನಿಸಿದ್ದಾರೆ. ಈ ಮೂಲಕ ಶಾಪ ಮುಕ್ತವಾಗಿದೆ ಎನ್ನಲಾಗುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...