Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೋಕಸಭಾ ಚುನಾವಣೆಗೆ ಈಶ್ವರಪ್ಪ ಪ್ರಣಾಳಿಕೆ ಬಿಡುಗಡೆ : ಟ್ವೀಟ್ ಮೂಲಕ ಹೇಳಿದ್ದೇನು..?

Facebook
Twitter
Telegram
WhatsApp

ಶಿವಮೊಗ್ಗ: ಮಗನಿಗೆ ಟಿಕೆಟ್ ಸಿಗದ ಹಿನ್ನೆಲೆ ಕೆ ಎಸ್ ಈಶ್ವರಪ್ಪ ಬಿಜೆಪಿ ವಿರುದ್ಧ ಸಿಡಿದೆದ್ದಿದ್ದಾರೆ. ಶಿವಮೊಗ್ಗದಲ್ಲೆ ಸ್ವತಂತ್ರವಾಗಿ ಸ್ಪರ್ಧೆ ಮಾಡಿದ್ದಾರೆ. ಈಗಾಗಲೇ ನಾಮಪತ್ರ ಕೂಡ ಸಲ್ಲಿಕೆ ಮಾಡಿದ್ದಾರೆ. ಬಿಜೆಪಿ ರಾಜ್ಯ ನಾಯಕರು ಏನೇ ಹೇಳಿದರು ಪ್ರಧಾನಿ ಮೋದಿ ಅವರ ಚಿತ್ರವನ್ನು ಬಿಡದೆ, ಪ್ರಚಾರ ಕಾರ್ಯದಲ್ಲಿ ಅವರ ಬ್ಯಾನರ್, ಅವರ ಫೋಟೋ, ಅವರ ಹೆಸರನ್ನೇ ಬಳಕೆ ಮಾಡಿಕೊಂಡು ವೋಟ್ ಕೇಳುತ್ತಿದ್ದಾರೆ. ಇದರ ನಡುವೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಜನರನ್ನು ಸೆಳೆಯುವುದಕ್ಕೆ ಪಕ್ಷಗಳು ಭರವಸೆಯ ಪ್ರಣಾಳಿಕೆಗಳನ್ನು ಬಿಡುಗಡೆ ಮಾಡಲಾಗುತ್ತದೆ. ಆ ಪ್ರಣಾಳಿಕೆಯಲ್ಲಿ ರೈತರಿಗೆ, ಬಡವರಿಗೆ ಮಹಿಳೆಯರಿಗೆ ಅನುಕೂಲವಾಗುವಂತೆ ಇರುತ್ತದೆ. ಆದರೆ ಈಶ್ವರಪ್ಪ ಅವರು ಬಿಡುಗಡೆ ಮಾಡಿರುವ ಪ್ರಣಾಳಿಕೆ ಯಡಿಯೂರಪ್ಪ ಹಾಗೂ ಕುಟುಂಬಸ್ಥರನ್ನು ಟಾರ್ಗೆಟ್ ಮಾಡಲಾಗಿದೆ.

ಹಿಂದುತ್ವದ ಉಳಿವು, ಪಕ್ಷದ ಶುದ್ಧೀಕರಣ, ಅಪ್ಪ-ಮಕ್ಕಳಿಂದ ರಾಜ್ಯ ಬಿಜೆಪಿಯನ್ನು ಮುಕ್ತಗೊಳಿಸುವುದೇ ನನ್ನ ಚುನಾವಣಾ ಪ್ರಣಾಳಿಕೆ. ರಾಜ್ಯ ಬಿಜೆಪಿಯ ಮಾನ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರೆ, ಅಪಪ್ರಚಾರ ಮಾಡಿ ರಾಷ್ಟ್ರಭಕ್ತರಲ್ಲಿ ಗೊಂದಲ ಮೂಡಿಸುವುದನ್ನು ನಿಲ್ಲಿಸಿ, ನರೇಂದ್ರ ಮೋದಿ, ಅಮಿತ್ ಶಾ ಅಥವಾ ಬೇರೆ ಯಾರೇ ಹೇಳಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

ಕೆ ಎಸ್ ಈಶ್ವರಪ್ಪ ಅವರು ಶಿವಮೊಗ್ಗದಿಂದ ಬಂಡಾಯವೆದ್ದಿದ್ದರು. ಸ್ಪರ್ಧೆಯಿಂದ ಹಿಂದೆ ಸರಿಸುವುದಕ್ಕೆ ಅಮಿತ್ ಶಾ ಅವರು ಈಶ್ವರಪ್ಲ ಅವರಿಗೆ ಕರೆ ನೀಡಿದ್ದರು. ದೆಹಲಿಗೆ ಹೋದಾಗಲೂ ಸಿಕ್ಕಿರಲಿಲ್ಲ. ಹೀಗಾಗಿ ಅಲ್ಲಿಂದಾನೇ ಪಕ್ಷೇತರ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದರು. ಅದರಂತೆ ಈಗ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!