Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ರಿಲೀಫ್ : ಅಸಿಂಧು ಆದೇಶಕ್ಕೆ ಸುಪ್ರೀಂ ತಡೆ..!

---Advertisement---

ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಆಯ್ಕೆಯನ್ನ ಹೈಕೋರ್ಟ್ ಅಸಿಂಧುಗೊಳಿಸಿತ್ತು. ಈ ಸಂಬಂಧ ಸುಪ್ರೀಂ ಕೋರ್ಟ್ ಆ ಆದೇಶವನ್ನು ತಡೆಹಿಡಿದಿದೆ. ಇದರಿಂದ ಸುಬ್ಬಾರೆಡ್ಡಿಗೆ ರಿಲೀಫ್ ಸಿಕ್ಕಂತಾಗಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆಯಾದ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನ ಸುಪ್ರೀಂ ಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಟಿ ಅವರನ್ನೊಳಗೊಂಡ ಪೀಠವು ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ, ಸುಬ್ಬಾರೆಡ್ಡಿ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಪ್ರತಿವಾದಿಯವರಿಗೆ ನೋಟೀಸ್ ಜಾರಿ ಮಾಡಿದ್ದು, ಮಧ್ಯಂತರ ಆದೇಶವನ್ನು ನೀಡಿತ್ತು. ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ದೇವದತ್ತ ಕಾಮತ್ ಅವರ ಪರವಾಗಿ ವಾದ ಮಂಡಿಸಿದರು. ಅರ್ಜಿದಾರ ಎಸ್ ಎಸ್ ಸುಬ್ಬಾರೆಡ್ಡಿ ಅವರನ್ನು ಎಲ್ಲಾ ಪ್ರಾಯೋಗಿಕ ಉದ್ದೇಶಗಳಿಗಾಗಿ ವಿಧಾನಸಭೆಯ ಸದಸ್ಯರೆಂದು ಪರಿಗಣಿಸಬರೆಕೆಂದು ಪೀಠವೂ ನಿರ್ದೇಶಿಸಿತ್ತು.

ಪ್ರತಿವಾದಿಯಾದ ಬಿಜೆಪಿಯ ಪ್ರತಿಸ್ಪರ್ಧಿ ಅಭ್ಯರ್ಥಿ ಸಿ.ಮುನಿರಾಜು ಅವರು ಚುನಾವಣೆಯಲ್ಲಿ ಎಸ್.ಎನ್.ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷದಿಂದ ಕೂಡಿದೆ. ಆಸ್ತಿ ಮಾಹಿತಿ ಮುಚ್ಚಿಟ್ಟು ಅವರು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಹೀಗಾವಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಪರಾಜಿತ್ ಅಭ್ಯರ್ಥಿ ಮುನಿರಾಜು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದ ಸುಬ್ಬಾರೆಡ್ಡಿ, ಚುನಾವಣೆ ತಕರಾರು ಅರ್ಜಿಯಲ್ಲಿ ಯಾವುದೆ ಹುರುಳಿಲ್ಲ. ಹೀಗಾಗಿ ಅದನ್ನು ವಜಾ ಮಾಡಬೇಕೆಂದು ಮನವಿ ಮಾಡಿದ್ದರು. ಪರ ವಿರೋಧ ವಾದ ಆಲಿಸಿದ್ದ ಹೈಕೋರ್ಟ್ ಸುಬ್ಬಾರೆಡ್ಡಿ ಅರ್ಜಿಯನ್ನು ವಜಾ ಮಾಡಿದ್ದಲ್ಲದೆ, ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶಿಸಿತ್ತು. ಹೀಗಿದ್ದರೂ ಎದುರಾಳಿ ಅಭ್ಯರ್ಥಿಯಾಗಿದ್ದ ಸಿ.ಮುನಿರಾಜು ವಿಜಯಿ ಎಂದು ಕೋರ್ಟ್ ಘೋಷಣೆ ಮಾಡಿರಲಿಲ್ಲ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now