Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭವಾನಿ ರೇವಣ್ಣಗೆ ರಿಲೀಫ್ : ಹೈಕೋರ್ಟ್ ನಿಂದ ಸಿಕ್ತು ನಿರೀಕ್ಷಣಾ ಜಾಮೀನು

Facebook
Twitter
Telegram
WhatsApp

 

ಬೆಂಗಳೂರು: ಮನೆ ಕೆಲಸದಾಕೆಯ ಕಿಡ್ನ್ಯಾಪ್ ಕೇಸಲ್ಲಿ ಭವಾನಿ ರೇವಣ್ಣನಿಗೆ ಬಂಧನದ ಭೀತಿ ಎದುರಾಗಿತ್ತು. ಇದೀಗ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣದಲ್ಲಿ ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ಪ್ರಜ್ವಲ್ ರೇವಣ್ಣ ಕೇಸಿಗೆ ಸಂಬಂಧಿಸಿದಂತೆ ಹೆಚ್.ಡಿ.ರೇವಣ್ಣ ಅವರು ಮನೆ ಕೆಲಸದಾಕೆಯನ್ನು ಕಿಡ್ನ್ಯಾಪ್ ಮಾಡಿದ್ದರು ಎಂಬ ಆರೋಪದ ಮೇಲೆ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಜೈಲಿನಲ್ಲಿ ಕಾಲ ಕಳೆದ ರೇವಣ್ಣ ಕಡೆಗೆ ಜಾಮೀನು ಪಡೆದು ಹೊರ ಬಂದರು. ಇನ್ನು ಇದೇ ಕೇಸಿನಲ್ಲಿ ಭವಾನಿ ರೇವಣ್ಣ ಅವರಿಗೂ ನೋಟೀಸ್ ನೀಡಲಾಗಿತ್ತು. ಆದರೆ ನಾಪತ್ತೆಯಾಗಿದ್ದ ಭವಾನಿ ರೇವಣ್ಣ ಎಲ್ಲಿಯೂ ಸಿಕ್ಕಿರಲಿಲ್ಲ. ಬಳಿಕ ಕೋರ್ಟ್ ನಿಂದ ಮಧ್ಯಂತರ ಜಾಮೀನು ಸಿಕ್ಕ ಮೇಲೆ ಎಸ್ಐಟಿ ಮುಂದೆ ಹಾಜರಾಗಿದ್ದರು. ಪ್ರಶ್ನೆಗಳಿಗೆ ಉತ್ತರ ನೀಡಿದ್ದರು.

ಕೋರ್ಟ್ ನಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ಪಡೆಯಲಾಗಿದೆ. ಭವಾನಿ ಅವರ ಬಗ್ಗೆ ಕೆಲಸದಾಕೆ, ಆಹಾರ ಮತ್ತು ಬಟ್ಟೆ ನೀಡಿರುವ ಬಗ್ಗೆ ತಿಳಿಸಿದ್ದಾರೆ. ಹೀಗಾಗಿ ಭವಾನಿ ಅವರನ್ನು ಬಂಧಿಸುವುದು ಬೇಡವೆಂದು ಕೋರ್ಟ್ ಸೂಚಿಸಿದೆ. ಈ ಹಿನ್ನೆಲೆ ಭವಾನಿ ರೇವಣ್ಣ ಅವರು ನಿಟ್ಟುಸಿರು ಬಿಟ್ಟಿದ್ದಾರೆ. ಬಂಧನದಿಂದ ಮುಕ್ತರಾಗಿದ್ದಾರೆ.

ಇನ್ನು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್ ರೇವಣ್ಣ ಅವರ ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ಈಗಾಗಲೇ ಎರಡು ಬಾರಿ ಕಸ್ಟಡಿಗೆ ತೆಗೆದುಕೊಂಡಿರುವ ಪೊಲೀಸರು ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲು ಯೋಚನೆ ಮಾಡಿದೆ. ಮೂರು ಪ್ರಕರಣಗಳು ದಾಖಲಾಗಿದ್ದು, ಈಗಾಗಲೇ ಎರಡು ಪ್ರಕರಣವನ್ನು ಎಸ್ಐಟಿ ಅಧಿಕಾರಿಗಳು ಮುಗಿಸಿದ್ದಾರೆ. ಇನ್ನೊಂದು ಪ್ರಕರಣವಿದ್ದು, ಅದನ್ನು ಮುಗಿಸುವುದಕ್ಕೆ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಎರಡನೆ ದಿನಕ್ಕೆ ಕಾಲಿಟ್ಟ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಮೊಬೈಲ್ ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಹೆಚ್ಚಿನ ಒತ್ತಡವಾಗುವುದು ಸೇರಿದಂತೆ

ಹಂಪಿ ಉತ್ಸವದಂತೆ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಐತಿಹಾಸಿಕ ಏಳು ಸುತ್ತಿನ ಕೋಟೆಯಿರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಆಚರಿಸುವಂತೆ ಕರುನಾಡ ವಿಜಯಸೇನೆ

ಮೊಳಕಾಲ್ಮುರು ತಾ.ಪಂ ವ್ಯವಸ್ಥಾಪಕ ಅಮಾನತು

ಚಿತ್ರದುರ್ಗ. ಸೆ.27: ಪದೇ ಪದೇ ಕಚೇರಿ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗುವುದು ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರಿದ ಕಾರಣಕ್ಕಾಗಿ ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಅರುಣ್ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ

error: Content is protected !!