Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಲ್ಲರನ್ನು ಪ್ರೀತಿಸುವ ಧರ್ಮವೆ ನಿಜವಾದ ಮಾನವೀಯತೆ : ರೆವೆರೆಂಡ್ ಫಾದರ್ ಸಜ್ಜಿಜಾರ್ಜ್

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಜೀವನದಲ್ಲಿ ಎದುರಾಗುವ ಕಠಿಣ ಸಮಸ್ಯೆಗಳನ್ನು ಮೆಟ್ಟಿ ನಿಲ್ಲಬೇಕಾದರೆ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು ಎಂದು ನರ್ಸಿಂಗ್ ವಿದ್ಯಾರ್ಥಿಗಳಿಗೆ ಡಾನ್‍ಬೋಸ್ಕೋ ಸಂಸ್ಥೆ ನಿರ್ದೇಶಕ ರೆವೆರೆಂಡ್ ಫಾದರ್ ಸಜ್ಜಿಜಾರ್ಜ್ ತಿಳಿಸಿದರು.

ಜಿಲ್ಲಾಡಳಿತ, ಚಿತ್ರ ಡಾನ್‍ಬೋಸ್ಕೋ, ಬ್ರೆಡ್ಸ್ ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ತುರುವನೂರು ರಸ್ತೆಯಲ್ಲಿರುವ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ನಡೆದ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣನ್ನು ಎರಡನೆ ದರ್ಜೆಯನ್ನಾಗಿ ನೋಡಲಾಗುತ್ತಿದೆ. ಸಾಕಷ್ಟು ತಾರತಮ್ಯ ಅಸಮಾನತೆ ಇನ್ನು ಜೀವಂತವಾಗಿರುವುದರಿಂದ ನಾನಾ ರೀತಿಯ ಶೋಷಣೆಗೆ ಹೆಣ್ಣು ಒಳಗಾಗುತ್ತಿದ್ದಾಳೆ. ಸಮುದಾಯದಲ್ಲಿ ಏನಾದರೂ ಪರಿವರ್ತನೆಯಾಗಬೇಕಾದರೆ ಮೊದಲು ಹೆಣ್ಣು ಶಿಕ್ಷಣವಂತಳಾಗಬೇಕು. ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನದಲ್ಲಿ ಎಲ್ಲರಿಗೂ ಸಮಾನತೆ ನೀಡಿದ್ದಾರೆ. ಪರಿಪಾಲನೆಯಾಗಬೇಕಷ್ಟೆ. ಹಲವಾರು ದಿನಾಚರಣೆಗಳನ್ನು ಆಚರಿಸಲಾಗುತ್ತಿದೆ. ಎಲ್ಲರನ್ನು ಪ್ರೀತಿಸುವ ಒಳಗೊಳ್ಳುವ ಧರ್ಮವೆ ನಿಜವಾದ ಮಾನವೀಯತೆ. ವಿದ್ಯೆಯಿಂದ ಅಧಿಕಾರ ಪಡೆಯಬಹುದು. ಸರ್ಕಾರದಲ್ಲಿ ಎಲ್ಲಾ ಸೌಲಭ್ಯಗಳಿವೆ. ಬಳಸಿಕೊಂಡು ನಿಮ್ಮ ಹಕ್ಕುಗಳನ್ನು ಪಡೆಯಿರಿ ಎಂದು ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಎನ್. ಮಾತನಾಡುತ್ತ ಶಿಕ್ಷಣದ ಕಡೆ ಗಮನ ಕೊಟ್ಟು ಚೆನ್ನಾಗಿ ಓದಿ ಸ್ವಾವಲಂಭಿಗಳಾಗಿ ಆತ್ಮವಿಶ್ವಾಸ ಮೂಡಿಸಿಕೊಳ್ಳಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡುತ್ತಿವೆ. ಎಲ್ಲಾ ರೀತಿಯ ಸೌಲಭ್ಯಗಳನ್ನು ಬಳಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಬಾಳಿ. ನಿಮ್ಮ ರಕ್ಷಣೆಗೆ ಹಲವಾರು ಕಾನೂನುಗಳಿವೆ. ಭಯಪಡುವುದು ಬೇಡ. ಕಾನೂನು ಇದ್ದರೆ ಸಾಲದು. ಪರಿಪಾಲನೆಯಾಗಬೇಕು ಎಂದು ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರೇಖಾ ಮಾತನಾಡಿ ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಪೋಷಕರು, ಶಿಕ್ಷಕರುಗಳ ಬಳಿ ನಿಮ್ಮ ತೊಂದರೆಗಳನ್ನು ಹೇಳಿಕೊಂಡರೆ ಪರಿಹಾರ ಸಿಗುತ್ತದೆ. ಪೊಲೀಸ್, ಕಾನೂನು ಇದೆ, ಕೌನ್ಸಿಲಿಂಗ್ ಮೂಲಕ ಎಲ್ಲದಕ್ಕೂ ಪರಿಹಾರವಿದೆ. ನಿಮಗೆ ಯಾರಾದರೂ ಲೈಂಗಿಕ ಕಿರುಕುಳ ನೀಡಿದರೆ ಮಕ್ಕಳ ಸಹಾಯವಾಣಿಗೆ ತಿಳಿಸಿ. ಹೆಣ್ಣಿಗೆ ಹದಿನೆಂಟು ವರ್ಷ, ಗಂಡಿಗೆ 21 ವರ್ಷವಾಗಿದ್ದರೆ ಮಾತ್ರ ಮದುವೆಗೆ ಅರ್ಹರು. ಇಲ್ಲವಾದಲ್ಲಿ ಬಾಲ್ಯವಿವಾಹವಾಗುತ್ತದೆ. ನಿಮ್ಮ ಮನೆಗಳಲ್ಲಿ, ಅಕ್ಕಪಕ್ಕದಲ್ಲಿ ಯಾರಾದರೂ ಬಾಲ್ಯ ವಿವಾಹ ಮಾಡಿದರೆ ಮಕ್ಕಳ ಸಹಾಯವಾಣಿ 1098 ಕ್ಕೆ ಕರೆ ಮಾಡಿ ತಿಳಿಸಿ ಎಂದು ವಿದ್ಯಾರ್ಥಿನಿಯರಿಗೆ ಮಾಹಿತಿ ನೀಡಿದರು.

ಬಾಲ್ಯ ವಿವಾಹವಾದರೆ ಎರಡು ವರ್ಷ ಜೈಲು, ಒಂದು ಲಕ್ಷ ರೂ.ದಂಡವಿದೆ. ಪೋಕ್ಸೋ ಕಾಯಿದೆಯಡಿ ತಂದೆ-ತಾಯಿಗಳ ಮೇಲೆ ಕೇಸು ದಾಖಲಾಗುತ್ತದೆ. ಮೊದಲು ಶಿಕ್ಷಣವಂತರಾಗಿ ನಿಮ್ಮ ಹಕ್ಕುಗಳ ಬಗ್ಗೆ ಅರಿವು ಮೂಡಿಸಿಕೊಳ್ಳಿ ಎಂದು ತಿಳಿಸಿದರು.

ಹಾಸ್ಟೆಲ್ ವಾರ್ಡ್‍ನ್‍ಗಳಾದ ಹನುಮಂತಪ್ಪ ಪೂಜಾರ್, ದೇವರಾಜ್, ಚಿತ್ರಡಾನ್ ಬೋಸ್ಕೋ ಸಂಸ್ಥೆಯ ಮಂಜುನಾಥ್ ಇವರುಗಳು ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತ್ಯವನ್ನು ಓದುವುದು, ಹಾಡುವುದು ಉತ್ತಮ ಹವ್ಯಾಸ : ಬಿ.ಎ.ಸೀತಾರಾಂ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರತಜ್ಞ ಬಿ.ಎ.ಸೀತಾರಾಂ ಹೇಳಿದ್ದಾರೆ. ಅವರು ಭಾನುವಾರ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಿದ್ದ

ಚನ್ನಪಟ್ಟಣ ಗೆಲುವಿನ ಶುಭ ಸೂಚನೆ ನೀಡಿದಳಾ ಹಾಸನಾಂಬೆ ತಾಯಿ : ಕುಮಾರಸ್ವಾಮಿ ದೇವರ ಮುಂದೆ ನಿಂತಾಗ ಆಗಿದ್ದೇನು..?

ಹಾಸನ: ಈಗಾಗಲೇ ಹಾಸನಾಂಬೆಯ ದರ್ಶನ ಆರಂಭವಾಗಿದೆ. ಹತ್ತು ದಿನಗಳು ಮಾತ್ರ ತಾಯಿ ದರ್ಶನ ಭಾಗ್ಯಾ ಕೊಡುತ್ತಾಳೆ. ಈ ಹತ್ತು ದಿನಗಳ ಕಾಲ ರಾಜಕಾರಣಿಗಳು, ಸಾರ್ವಜನಿಕರು ಎಲ್ಲರೂ ದರ್ಶನ ಪಡೆಯಲು ಕ್ಯೂ ನಿಂತಿರುತ್ತಾರೆ. ಇಂದು ಕೇಂದ್ರ

ಊಟದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗ..!

ಹಿರಿಯೂರು : ಕ್ಷುಲ್ಲಕ ಕಾರಣಕ್ಕೆ ನಡುವೆ ಜಗಳವಾಗಿದ್ದು, ಈ ಜಗಳದಿಂದ ತಂದೆಯ ಕೊಲೆಯಾಗಿರುವ ಘಟನೆ ಕುಂದಲಗುರ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರಂಗಸ್ವಾಮಿ ಮೃತ ದುರ್ದೈವಿಯಾಗಿದ್ದಾರೆ. ಕೇವಲ ಊಟದ ವಿಚಾರಕ್ಕೆ ತಂದೆ ಮಗನ ನಡುವೆ

error: Content is protected !!