Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಶೋಧನೆಯಿಂದ ಶಿಶುಗಳ ಸಾವು ತಪ್ಪಿಸಿದ್ದ ಖ್ಯಾತ ಆಹಾರ ತಜ್ಞ ರಘು ಕ್ಯಾನ್ಸರ್ ನಿಂದ ನಿಧನ

---Advertisement---

 

ಬೆಂಗಳೂರು : ಖ್ಯಾತ ಆರೋಗ್ಯ ತಜ್ಞ ಕೆ.ಸಿ.ರಘು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಈ ಸಂಬಂಧ ರಘು ಅವರ ಪತ್ನಿ ಆಶಾ ಅವರು ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟಪಡಿಸಿದ್ದಾರೆ. ಅಂತಿಮ ದರ್ಶನದ ವಿಚಾರಕ್ಕೂ ಮಾಹಿತಿ ನೀಡಿದ್ದಾರೆ. ಕೆ ಸಿ ರಘು ಅವರು ಹಲವು ವರ್ಷಗಳಿಂದ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕೆಯಲ್ಲಿ ಸಂಪಾದಕರಾಗಿ ಕೆಲಸ ಮಾಡಿದ್ದಾರೆ. 60 ವರ್ಷ ಪೂರೈಸಿದ್ದ ರಘು ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ರಘು ಅವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೆ ಸಿ ರಘು ಅವರ ಆಸೆಯಂತೆ ಅವರ ದೇಹವನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾನ ಮಾಡಲಾಗುತ್ತಿದೆ. ಹೀಗಾಗಿ ಅಂತಿಮ ದರ್ಶನಕ್ಕೆ ದಾಸರಹಳ್ಳಿಯ ಅಮೃತನಗರದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಕೆ ಸಿ ರಘು ಅವರ ಆರೋಗ್ಯದ ವಿಚಾರದಲ್ಲಿ ಅಗಾಧ ಜ್ಞಾನ ಹೊಂದಿದ್ದರು. ಆಹಾರದ ವಿಚಾರದಲ್ಲೂ ಸ್ಪಷ್ಟ ಮಾಹಿತಿ ನೀಡುತ್ತಿದ್ದರು. ಆಹಾರಕ್ಕೆ ಸಂಬಂಧಪಟ್ಟಂತೆ ಅನೇಕ ದಿನಪತ್ರಿಕೆಗಳಿಗೂ ರಘು ಅವರು ಅಂಕಣಗಳನ್ನು ಬರೆಯುತ್ತಿದ್ದರು. ಅಷ್ಟೇ ಅಲ್ಲ ಸಾಮಾನ್ಯ ವಿಜ್ಞಾನ ಹಾಗೂ ಆರ್ಥಿಕತೆಯ ವಿಷಯಗಳ ಸಂಬಂಧ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

ನವಜಾತ ಶಿಶುಗಳಲ್ಲಿ ಕಂಡು ಬರುವ ಕಾಯಿಲೆಗಳ ಪೌಷ್ಠಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ  ಕಂಡು ಹಿಡಿದು, ದೇಶ ಮತ್ತು ವಿದೇಶಕ್ಕೂ ಸರಬರಾಜು ಮಾಡಿದ್ದರು. ಈ ಮೂಲಕ ಐದು ಸಾವಿರ ನವಜಾತ ಶಿಶುಗಳ ಸಾವನ್ನು ತಪ್ಪಿಸಿದ್ದರು. ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆ ಎಂದರ ರಘು ಅವರೆ ಸ್ಥಾಪಿಸಿದ್ದ ಪ್ರಿಸ್ಟಿನ್ ಆರ್ಗ್ಯಾನಿಕ್ ಸಂಸ್ಥೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment