Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂಶೋಧನೆಯಿಂದ ಶಿಶುಗಳ ಸಾವು ತಪ್ಪಿಸಿದ್ದ ಖ್ಯಾತ ಆಹಾರ ತಜ್ಞ ರಘು ಕ್ಯಾನ್ಸರ್ ನಿಂದ ನಿಧನ

Facebook
Twitter
Telegram
WhatsApp

 

ಬೆಂಗಳೂರು : ಖ್ಯಾತ ಆರೋಗ್ಯ ತಜ್ಞ ಕೆ.ಸಿ.ರಘು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಈ ಸಂಬಂಧ ರಘು ಅವರ ಪತ್ನಿ ಆಶಾ ಅವರು ತಮ್ಮ ಸೋಷಿಯಲ್ ಮೀಡಿಯಾ ಮೂಲಕ ಸ್ಪಷ್ಟಪಡಿಸಿದ್ದಾರೆ. ಅಂತಿಮ ದರ್ಶನದ ವಿಚಾರಕ್ಕೂ ಮಾಹಿತಿ ನೀಡಿದ್ದಾರೆ. ಕೆ ಸಿ ರಘು ಅವರು ಹಲವು ವರ್ಷಗಳಿಂದ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕೆಯಲ್ಲಿ ಸಂಪಾದಕರಾಗಿ ಕೆಲಸ ಮಾಡಿದ್ದಾರೆ. 60 ವರ್ಷ ಪೂರೈಸಿದ್ದ ರಘು ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

ರಘು ಅವರು ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೆ ಸಿ ರಘು ಅವರ ಆಸೆಯಂತೆ ಅವರ ದೇಹವನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾನ ಮಾಡಲಾಗುತ್ತಿದೆ. ಹೀಗಾಗಿ ಅಂತಿಮ ದರ್ಶನಕ್ಕೆ ದಾಸರಹಳ್ಳಿಯ ಅಮೃತನಗರದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಕೆ ಸಿ ರಘು ಅವರ ಆರೋಗ್ಯದ ವಿಚಾರದಲ್ಲಿ ಅಗಾಧ ಜ್ಞಾನ ಹೊಂದಿದ್ದರು. ಆಹಾರದ ವಿಚಾರದಲ್ಲೂ ಸ್ಪಷ್ಟ ಮಾಹಿತಿ ನೀಡುತ್ತಿದ್ದರು. ಆಹಾರಕ್ಕೆ ಸಂಬಂಧಪಟ್ಟಂತೆ ಅನೇಕ ದಿನಪತ್ರಿಕೆಗಳಿಗೂ ರಘು ಅವರು ಅಂಕಣಗಳನ್ನು ಬರೆಯುತ್ತಿದ್ದರು. ಅಷ್ಟೇ ಅಲ್ಲ ಸಾಮಾನ್ಯ ವಿಜ್ಞಾನ ಹಾಗೂ ಆರ್ಥಿಕತೆಯ ವಿಷಯಗಳ ಸಂಬಂಧ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

ನವಜಾತ ಶಿಶುಗಳಲ್ಲಿ ಕಂಡು ಬರುವ ಕಾಯಿಲೆಗಳ ಪೌಷ್ಠಿಕಾಂಶದ ಪರಿಹಾರವನ್ನು ಸಂಶೋಧನೆಯಿಂದ  ಕಂಡು ಹಿಡಿದು, ದೇಶ ಮತ್ತು ವಿದೇಶಕ್ಕೂ ಸರಬರಾಜು ಮಾಡಿದ್ದರು. ಈ ಮೂಲಕ ಐದು ಸಾವಿರ ನವಜಾತ ಶಿಶುಗಳ ಸಾವನ್ನು ತಪ್ಪಿಸಿದ್ದರು. ಭಾರತದಲ್ಲಿ ಈ ರೀತಿಯ ಪರಿಹಾರ ಒದಗಿಸುವ ಏಕೈಕ ಸಂಸ್ಥೆ ಎಂದರ ರಘು ಅವರೆ ಸ್ಥಾಪಿಸಿದ್ದ ಪ್ರಿಸ್ಟಿನ್ ಆರ್ಗ್ಯಾನಿಕ್ ಸಂಸ್ಥೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಮಹೋತ್ಸವ ನಂತರ ಸಾವು ತಂದ ಸೌಭಾಗ್ಯ ನಾಟಕ ಪ್ರದರ್ಶನ : ಸಿ.ಟಿ.ಕೃಷ್ಣಮೂರ್ತಿ ಮಾಹಿತಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 06  : ಐತಿಹಾಸಿಕ ಚಿತ್ರದುರ್ಗ ನಗರದ ದೊಡ್ಡಪೇಟೆಯ ರಾಜಬೀದಿಯಲ್ಲಿ ಇನ್ನೂರು ವರ್ಷಗಳಿಂದಲೂ ಗ್ರಾಮ ದೇವತೆಗಳಾದ ಬರಗೇರಮ್ಮ-ತಿಪ್ಪಿನಘಟ್ಟಮ್ಮ

ಯಶೋಧಮ್ಮ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಶ್ರೀಮತಿ ಯಶೋಧಮ್ಮ(77) ಬುರುಜನಹಟ್ಟಿಯಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಬೆಳಗಿನ ಜಾವ ನಿಧನರಾದರು. ಮೃತರು ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್. ಮಲ್ಲಿಕಾರ್ಜುನ್ ಸೇರಿದಂತೆ ಇಬ್ಬರು ಪುತ್ರರು ಇಬ್ಬರು ಪುತ್ರಿಯರು

ಬೆಳೆ ಸಮೀಕ್ಷೆ ವ್ಯತ್ಯಾಸ: ಮರು ಪರಿಶೀಲಿಸಿ ಬೆಳೆವಿಮೆ ಪರಿಹಾರ ವಿತರಣೆಗೆ ಕ್ರಮ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭರವಸೆ

ಚಿತ್ರದುರ್ಗ. ಮೇ.07:  ಬೆಳೆ ಸಮೀಕ್ಷೆಯಲ್ಲಿ ಉಂಟಾದ ವ್ಯತ್ಯಾಸದಿಂದ ಚಳ್ಳಕೆರೆ ತಾಲ್ಲೂಕಿನ ಸೋಮಗುದ್ದು, ಎನ್.ದೇವರಹಳ್ಳಿ ಗ್ರಾಮ ಪಂಚಾಯಿತಿ ಸೇರಿದಂತೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಬೆಳೆ ವಿಮೆ ಪರಿಹಾರ ಜಮೆ ಆಗದಿರುವುದು ಗಮನಕ್ಕೆ

error: Content is protected !!