Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಖ್ಯಾತ ಸಾಹಿತಿ ಡಾ.ಕಮಲಾ ಹಂಪ ನಿಧನ : ದೇಹದಾನ ಮಾಡಿದ ಕುಟುಂಬಸ್ಥರು

Facebook
Twitter
Telegram
WhatsApp

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ನಾಡೋಜಾ ಕಮಲಾ ಹಂಪಾ ಅವರು ಇಂದಯ ಇಹಲೋಕ ತ್ಯಜಿಸಿದ್ದಾರೆ. ಬೆಳಗ್ಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದು, ಇವರಿಗೆ 89 ವರ್ಷ ವಯಸ್ಸಾಗಿತ್ತು. ಈ ಮಧ್ಯೆ ವಯೋಸಹಜ ಕಾಯಿಕೆಯಿಂದ ಕೂಡ ಬಳಲುತ್ತಿದ್ದರು. ಕಮಲಾ ಹಂಪ ಅವರ ಪತಿಯೂ ಖ್ಯಾತ ಸಾಹಿತಿಗಳಾಗಿದ್ದಾರೆ. ಪತಿ ನಾಗರಾಜಯ್ಯ, ಮೂವರು ಮಕ್ಕಳು ಹಾಗೂ ಅಪಾರವಾದಂತ ಅಭಿಮಾನಿ ಬಳಗವನ್ನು ಕಮಲಾ ಹಂಪ ತೊರೆದಿದ್ದಾರೆ.

ಕಮಲಾ ಹಂಪ ಅವರು ತಮ್ಮ ಮಗಳ ಮನೆಯಲ್ಲಿಯೇ ವಾಸವಾಗಿದ್ದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಮಗಳು ಆರತಿ ಮನೆಯಲ್ಲಿ ಇದ್ದರು. ಶುಕ್ರವಾರ ರಾತ್ರಿ 10 ಗಂಟೆಯ ವೇಳೆಗೆ ಅವರಿಗೆ ಹೃದಯಾಘಾತವಾಗಿದೆ. ಎಲ್ಲರನ್ನು ಬಿಟ್ಟು ಇಹಲೋಕ ತ್ಯಜಿಸಿದ್ದಾರೆ. ಅವರ ಮೃತದೇಹವನ್ನು ರಾಮಯ್ಯ ಕಾಲೇಜಿಗೆ ದಾನ ಮಾಡಿ, ಸಾರ್ಥಕತೆ ಮೆರೆದಿದ್ದಾರೆ.

ಕಮಲಾ ಹಂಪನಾ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ. ರಾಜಾಜಿನಗರದ ಅವರ ನಿವಾಸದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಮಲಾ ಹಂಪ ನಿಧನಕ್ಕೆ ಅನೇಕ ಕ್ಷೇತ್ರದ ಗಣ್ಯರು ಕಂಬನಿ‌ ಮಿಡಿದಿದ್ದಾರೆ.

 

ಬೆಂಗಳೂರಿನ ದೇವನಹಳ್ಳಿಯಲ್ಲಿ 1935ರ ಅಕ್ಟೋಬರ್ 28ರಂದು ಸಿ. ರಂಗಧಾಮನಾಯಕ್ ಮತ್ತು ಲಕ್ಷಮ್ಮ ದಂಪತಿ ಪುತ್ರಿಯಾಗಿ ಕಮಲಾ ಹಂಪನಾ ಜನಿಸಿದರು. ತುಮಕೂರು ಮತ್ತು ಮೈಸೂರಿನಲ್ಲಿ ಶಾಲಾ ಶಿಕ್ಷಣ ಪೂರ್ಣಗೊಳಿಸಿ 1956ರಲ್ಲಿ ಕನ್ನಡ ಅಧ್ಯಾಪಕಿಯಾಗಿ ವೃತ್ತಿ ಜೀವನ ಆರಂಭಿಸಿದ್ದರು. ಕಮಲಾ ಹಂಪನಾ ಅವರು 60 ವರ್ಷಗಳಕಾಲ ಸಾಹಿತ್ಯ ಕ್ಷೇತ್ರದಲ್ಲಿ ಸೇವೆ ಮಾಡಿದ್ದಾರೆ. ನಕ್ಕಿತು ಹಾಲಿನ ಬಟ್ಟಲು, ರೆಕ್ಕೆ ಮುರಿದಿತ್ತು, ಚಂದನಾ, ಬಣವೆ, ಸಂಶೋಧನಾ ಕೃತಿಗಳಾದ ತುರಂಗ ಭಾರತ – ಒಂದು ಅಧ್ಯಯನ, ಶಾಂತಿನಾಥ, ಆದರ್ಶ ಜೈನ ಮಹಿಳೆಯರು, ಅನೇಕಾಂತವಾದ, ನಾಡು ನುಡಿ ನಾವು, ಜೈನ ಸಾಹಿತ್ಯ ಪರಿಸರ, ಬದ್ದವಣ, ರೋಣದ ಬಸದಿ ಸೇರಿ ಹಲವು ಕಥಾ ಕವನ ಸಂಕಲನಗಳು, ಶಿಶು ಸಾಹಿತ್ಯ, ಅನುವಾದಗಳು, ಕಾದಂಬರಿಗಳನ್ನು ಕನ್ನಡ ಸಾಹಿತ್ಯ ಪ್ರಿಯರಿಗಾಗಿ ಕೊಡುಗೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

ಅಜೀಂ ಪ್ರೇಮ್‍ಜಿ ಫೌಂಡೇಶನ್ ಕಾರ್ಯ ಪ್ರಪಂಚಕ್ಕೆ ಮಾದರಿ: ಕೆ.ರಾಜಶೇಖರ ಹಿಟ್ನಾಳ

  ಸುದ್ದಿಒನ್, ಕೊಪ್ಪಳ, ಸೆಪ್ಟೆಂಬರ್. 28 : ಅಜೀಂ ಪ್ರೇಮ್‍ಜಿ ಫೌಂಡೇಶನ ಮಾಡುತ್ತಿರುವ ಸೇವಾ ಕಾರ್ಯವು ಪ್ರಪಂಚಕ್ಕೆ ಮಾದರಿಯಾಗಿದೆ ಎಂದು ಲೋಕಸಭಾ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ ಹೇಳಿದರು. ಅವರು ನಗರದ ಸಿ.ಪಿ.ಎಸ್.ಶಾಲೆಯಲ್ಲಿ ಅಜೀಂ ಪ್ರೇಮ್‍ಜಿ

error: Content is protected !!