Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿವೈ ವಿಜಯೇಂದ್ರ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಲು ರೇಣುಕಾಚಾರ್ಯ ಒತ್ತಾಯ..!

Facebook
Twitter
Telegram
WhatsApp

ದಾವಣಗೆರೆ: ರಾಜ್ಯ ಬಿಜೆಪಿ ರಾಜಕಾರಣದಲ್ಲಿ ರೇಣುಕಾಚಾರ್ಯ ಅವರು ಹೇಳಿದ ಮಾತು ಎಲ್ಲರು ತಿರುಗಿ ನೋಡುವಂತೆ ಮಾಡಿದೆ. ಸದ್ಯ ರಾಜ್ಯಾಧ್ಯಕ್ಷ ಹುದ್ದೆ ಖಾಲಿ ಇದೆ. ಆ ಹುದ್ದೆಗೆ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನೇ ಆಯ್ಕೆ ಮಾಡಿ ಎಂದು ಒತ್ತಾಯಿಸಿದ್ದಾರೆ.

ಶಾಸಕ ಬಿಎಸ್ ವಿಜಯೇಂದ್ರ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ, ಪಕ್ಷಕ್ಕೆ ಲೋಕಸಭಾ ಚುನಾವಣೆಯಲ್ಲಿ ಒಳಿತಾಗಲಿದೆ. ಪ್ರಧಾನಿ ಮೋದಿ ಮಾಸ್ ಲೀಡರ್, ದೇಶಕ್ಕೆ ನಾಯಕ. ಆದರೆ ರಾಜ್ಯದಲ್ಲಿ ಅವರ ಫೋಟೋ ತೋರಿಸಿದರೆ ಸಾಲದು. ಅದು ಮತವಾಗಿ ಪರಿವರ್ತನೆಯಾಗಬೇಕು. ಕರ್ನಾಟಕದಲ್ಲಿ ಬಿಜೆಪಿಗೆ ಮತ ತರುವ ಶಕ್ತಿ ಇರುವುದು ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರಿಗೆ.

ರಾಜ್ಯದಲ್ಲಿ ಬಿಜೆಪಿಗೆ ಮತ ತರುವ ಶಕ್ತಿ ವಿಜಯೇಂದ್ರ ಅವರಿಗೆ ಇದೆ. ಜೆಡಿಎಸ್ ಮತ್ತು ಬಿಜೆಪಿ ಮೈತ್ತಿ ಬಗ್ಗೆ ಬಿಜೆಪಿಯಲ್ಲಿಯೇ ಹಲವರಿಗೆ ಬೇಸರವಿದೆ. ಮೈತ್ರಿ ಅಂತ ಹೇಳಿ ಬಿಜೆಪಿಯನ್ನೇ ಕುಮಾರಸ್ವಾಮಿಗೆ ಅಡ ಇಡಲಾಗಿದೆ. ಪಕ್ಷಕ್ಕೆ ಒಳ್ಳೆಯದಾಗುವುದಿದ್ದರೆ ಮೈತ್ರಿ ಮಾಡಿಕೊಳ್ಳಲಿ. ಪಕ್ಷದಲ್ಲೂ ಸಮರ್ಥ ನಾಯಕರಿದ್ದಾರೆ. ವಿಜಯೇಂದ್ರರಂತಹ ವ್ಯಕ್ತಿಗೆ ನಾಯಕತ್ವ ಕೊಟ್ಟರೆ ಒಳಿತಾಗುತ್ತದೆ ಎಂದಿದ್ದಾರೆ.

ಈಗಾಗಲೇ ಬಿಜೆಪಿಯಲ್ಲೂ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆದಿದೆ. ಲೋಕಸಭೆಯಲ್ಲಿ ಗೆಲ್ಲುವುದಕ್ಕಾಗಿಯೇ ಜೆಡಿಎಸ್ ಜೊತೆಗೆ ಕೈಜೋಡಿಸಿದ್ದಾರೆ. ವಿಧಾನಸಭೆಯಲ್ಲಿ ಸೋಲಾಗುವುದಕ್ಕೆ, ಯಡಿಯೂರಪ್ಪ ಅವರನ್ನೂ ಮೂಲೆಗೆ ಸರಿಸಿರುವುದೇ ಕಾರಣ ಎನ್ನಲಾಗಿತ್ತು. ಇದೀಗ ಲೋಕಸಭೆಯಲ್ಲಿ ಗೆಲ್ಲುವುದಕ್ಕೆ ಯಡಿಯೂರಪ್ಪ ಕುಟುಂಬಕ್ಕೆ ಪ್ರಾಶಸ್ತ್ಯ ನೀಡಿ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!