ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಶ್ರೀರಾಮುಲು ವಿಚಾರಕ್ಕೆ ರೇಣುಕಾಚಾರ್ಯ ಹೇಳಿದ್ದೇನು..?

suddionenews
1 Min Read

 

ಬೆಂಗಳೂರು: ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂಬ ಸಚಿವ ಶ್ರೀರಾಮುಲು ಹೇಳಿಕೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಬಗ್ಗೆ ನನಗೂ ವೈಯಕ್ತಿಕ ಗೌರವವಿದೆ ಎಂದು ವಿಧಾನಸೌಧದಲ್ಲಿ ಮಾತನಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯಹಿಂದುಳಿದ ವರ್ಗಗಳ ನಾಯಕರಾಗಿದ್ದಾರೆ. ಆದರೆ ಬಿಜೆಪಿಯಲ್ಲಿ ಹೊಂದಾಣಿಕೆ ರಾಜಕೀಯ ಎಂಬುದಿಲ್ಲ. ಬಿಜೆಪಿ ನಾಯಕರು ಹಾದಿ ಬೀದಿಯಲ್ಲಿ ಮಾತನಾಡಬಾರದು ಎಂದು ಶ್ರೀರಾಮುಲು ವಿರುದ್ಧ ಹರಿಹಾಯ್ದಿದ್ದಾರೆ.

ನಿನ್ನೆ ಸಚಿವ ಶ್ರೀರಾಮುಲು ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದರು. ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿ ಆದರೆ ನನಗೂ ಸಂತಸ. ಅವರ ನನ್ನ ಸ್ನೇಹ, ಸಂಬಂಧ ಬೇರೆ ರೀತಿಯಲ್ಲಿಯೇ ಇದೆ. ನನ್ನ ಅವರ ಒಳ ಒಪ್ಪಂದವಾಗಿದೆ. ನಾನು ಸಿಎಂ ಆದರೂ ಅವರಿಗೂ ಅಭ್ಯಂತರವಿಲ್ಲ ಎಂದು ಹೇಳಿಕೆ ನೀಡಿದ್ದರು. ಆ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ರೇಣುಕಾಚಾರ್ಯ, ಶ್ರೀರಾಮುಲು ಅವರಿಗೆ ಬುದ್ದಿ ಮಾತು ಹೇಳಿದಂತಿದೆ.

Share This Article
Leave a Comment

Leave a Reply

Your email address will not be published. Required fields are marked *