Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಬಸವಣ್ಣನವರಿಗೆ ಸಮಾಜ ಸುಧಾರಣೆ ಪ್ರೇರಣೆ ನೀಡಿದವರೇ ರೇಣುಕಾಚಾರ್ಯರು : ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಮಾ.05) : ಬಸವಣ್ಣ ಹಾಗೂ ರೇಣುಕಾಚಾರ್ಯರು ಹೇಳಿದ ವಿಚಾರಗಳಲ್ಲಿ ಸಾಮ್ಯತೆ ಇದೆ ಎಂದು ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಾಮಾನೋತ್ಸವ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಬಸವಣ್ಣ ಮತ್ತು ರೇಣುಕಾಚಾರ್ಯರು ಹೇಳಿದ ವಿಚಾರಗಳಲ್ಲಿ ಸಾಮ್ಯತೆ ಹೆಚ್ಚಾಗಿದೆ. ರೇಣುಕಾಚಾರ್ಯರು ದಶ ಸೂತ್ರಗಳಲ್ಲಿ ದಯೆ, ಶಮೆ, ಸತ್ಯ, ಕಳ್ಳತನ ಮಾಡದೇ ಇರುವುದು, ಶಿವ ಪೂಜೆ, ದಾನ ಇತ್ಯಾದಿ ವಿಚಾರಗಳನ್ನು ಸಂಸ್ಕøತ ಭೂಯಿಷ್ಟವಾಗಿ ಹೇಳಿದ್ದಾರೆ. ಆದರೆ ಬಸವಣ್ಣ ಅವರು ಅದೇ ವಿಚಾರಗಳನ್ನು, ತತ್ವ, ಸಿದ್ದಾಂತ ಹಾಗೂ ಆದರ್ಶಗಳನ್ನು ಜನರಿಗೆ ಸರಳವಾಗಿ, ಅರ್ಥವಾಗುವಂತೆ ತಿಳಿಸಿದ್ದಾರೆ.

ಬಸವಣ್ಣನವರಿಗೆ ಸಮಾಜ ಸುಧಾರಣೆ ಮಾಡುವಂತಹ ಪ್ರೇರಣೆ ನೀಡಿದವರೇ ರೇಣುಕಾಚಾರ್ಯರು ಎಂದು ಅಭಿಪ್ರಾಯಪಟ್ಟರು.

ಸಮಾಜ ಸುಧಾರಕರು, ಸಂತರು, ದಾರ್ಶನಿಕರು, ಪುಣ್ಯಪುರುಷರು  ತೋರಿಸುವಂತಹ ದಾರಿಯಲ್ಲಿ ನಾವು ನೀವು ಹೋದರೆ, ಮಹನೀಯರ ಆದರ್ಶ ಮತ್ತು ತತ್ವಗಳನ್ನು ಪಾಲನೆ ಮಾಡಿದರೆ ಮಾನವನೂ ಮಹದೇವನಾಗುತ್ತಾನೆ ಎಂಬ ಕಲ್ಪನೆಯನ್ನು ರೇಣುಕಾಚಾರ್ಯರು ತಿಳಿಸಿದ್ದಾರೆ ಎಂದರು.

ಮಾಜಿ ಶಾಸಕ ಎಸ್.ಕೆ.ಬಸರಾಜನ್ ಮಾತನಾಡಿ, ಯಾವುದೇ ಒಂದು ಮಹಾತ್ಮರ ಜಯಂತಿ ಆಚರಣೆ ಮಾಡುವ ಉದ್ದೇಶ ಅವರಲ್ಲಿನ ಸಾಮಾಜಿಕ ಕಳಕಳಿ, ಧರ್ಮದ ಬಗ್ಗೆ ನಿಷ್ಠೆ ಅಂತಹ ವಿಚಾರಗಳನ್ನ ನಾವು ಮತ್ತೆ ಮತ್ತೆ ಮೆಲಕು ಹಾಕುವ ಉದ್ದೇಶದಿಂದ ಜಯಂತಿ ಆಚರಣೆ ಮಾಡುತ್ತೇವೆ.

ರಾಜ್ಯ ಸರ್ಕಾರವು ಸುಮಾರು 45 ಮಹನೀಯರ ಜಯಂತಿಗಳನ್ನು ಆಚರಣೆ ಮಾಡುವುದರ ಮೂಲಕ ಮಹನೀಯರ ತತ್ವ, ಸಿದ್ದಾಂತಗಳನ್ನು ಜನರಿಗೆ ತಿಳಿಸುವ ಕೆಲಸವಾಗುತ್ತಿದೆ. ಮೊದಲಬಾರಿಗೆ ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಅದ್ದೂರಿಯಾಗಿ ಭಕ್ತಿಯಿಂದ ಆಚರಿಸೋಣ ಎಂದು ಹೇಳಿದರು.

ಬೃಹನ್ಮಠ ಪದವಿ ಪೂರ್ವ ಕಾಲೇಜು  ಪ್ರಾಚಾರ್ಯ ಎಸ್. ಷಡಾಕ್ಷರಯ್ಯ ಉಪನ್ಯಾಸ ನೀಡಿ, ಸಂತರು, ಮಹನೀಯರು ಸಮಾಜಕ್ಕೆ ನೀಡಿದರುವ ಆದರ್ಶಪ್ರಾಯವಾದ ಚಿಂತನೆ, ತತ್ವ, ಸಿದ್ದಾಂತಗಳನ್ನು ನಾವು ಸಮಾಜಕ್ಕೆ ಅಳವಡಿಸಬೇಕಾಗಿದೆ. ಮನುಷ್ಯ ಯಾವಾಗಲೂ ಒಳ್ಳೆಯ ಗುಣಗಳಿಂದ ನಡೆಯಬೇಕು ಹಾಗೂ ನುಡಿಯಬೇಕು ಎಂಬ ದಾರಿಯನ್ನು ಸಂತರು ನಮಗೆ ತೋರಿಸಿದ್ದಾರೆ ಎಂದರು.

ಸಮಾಜದಲ್ಲಿ ಅಶಾಂತಿ, ನೆಮ್ಮದಿ ಇಲ್ಲ. ಹಾಗಾಗಿ ನಮ್ಮ ಸಮಾಜಕ್ಕೆ ಆಧ್ಯಾತ್ಮಿಕ ಶಾಂತಿಯ ಅವಶ್ಯಕತೆ ಬೇಕಾಗಿದೆ. ಅಂತಹ ಆಧ್ಯಾತ್ಮಿಕ ಶಾಂತಿಯನ್ನು ಜಗದ್ಗುರು ರೇಣುಕಾಚಾರ್ಯರು ನಮಗೆ ನೀಡಿದ್ದಾರೆ. ರೇಣುಕಾಚಾರ್ಯರು ಸಿದ್ದಾಂತ ಶಿಖಾಮಣಿಯಲ್ಲಿ ವೈಜ್ಞಾನಿಕ ವಿಚಾರಗಳನ್ನು ನೀಡಿದ್ದಾರೆ. ಮಾನವ ಪ್ರತಿಯೊಂದು ವಿಚಾರದಲ್ಲಿಯೂ ಯಾವ ರೀತಿಯಾಗಿ ನಡೆದುಕೊಳ್ಳಬೇಕು, ಸತ್ಕಾರ್ಯಗಳನ್ನು ಕೈಗೊಳ್ಳಬೇಕು ಎಂಬ ವಿಚಾರಗಳನ್ನೂ ವೈಜ್ಞಾನಿಕವಾಗಿ ತಿಳಿಸಿಕೊಟ್ಟಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಸ್ಥಾಯಿಸಮಿತಿ ಅಧ್ಯಕ್ಷ ಕೆ.ಬಿ.ಸುರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಕೆ ಮಲ್ಲಿಕಾರ್ಜುನ, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ವೀರೇಶ್, ಅಖಿಲ ಭಾರತ ವೀರಶೈವ ಸಮಾಜದ ಮಹಡಿ ಶಿವಮೂರ್ತಿ, ಕಾರ್ಯದರ್ಶಿ ಮಹೇಶ್, ಹಿರಿಯ ವಕೀಲ ಕೆ.ಎನ್.ವಿಶ್ವನಾಥಯ್ಯ, ನಿವೃತ್ತ ಪ್ರಾಧ್ಯಾಪಕ ಡಾ.ಪ್ರಭುದೇವ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಚಂದ್ರಶೇಖರ್ ಕಾಂಬ್ಳಿಮಠ್, ಸಾಹಿತಿ ನಿರಂಜನ ದೇವರಮನೆ ಸೇರಿದಂತೆ ವೀರಶೈವ ಲಿಂಗಾಯತ ಸಮಾಜಗಳ ಒಳಪಂಡಗಳ ಮುಖಂಡರಾದ ನಿರ್ಮಲ ಬಸವರಾಜು, ರುದ್ರೇಶ ಎಂ.ಕೆ.ಹಟ್ಟಿ, ಚಿನ್ಮಯಿ, ಬಿ.ಎಂ ಅರುಣ್ ಕುಮಾರ್, ಎಂ. ಶಶಿಧರ್ ಬಾಬು, ಬಿ.ಎಂ ಶರಣಯ್ಯ, ಕೆ.ಸಿ ರುದ್ರೇಶ್, ಲೀಲಾವತಿ ಕುಮಾರಸ್ವಾಮಿ, ಜಿ.ಎಂ ಸುರೇಶ್, ಐ.ಎಂ.ಬಸವರಾಜಯ್ಯ, ಜಯದೇವ್ ಮೂರ್ತಿ, ಕಾರ್ತಿಕ್, ಜೆ.ಆನಂದ್, ಕಿರಣ್ ಕುಮಾರ್, ಬಿ.ಎಂ.ಕರಿಬಸಯ್ಯ, ಎಂ.ವಿ.ಸಿದ್ಧೇಶ್ ಸೇರಿದಂತೆ ಮತ್ತಿತರರು ಇದ್ದರು. ಕೆಪಿಎಂ ಗಣೇಶಯ್ಯ ಮತ್ತು ತಂಡದವರು ಗೀತಗಾಯನ ನಡೆಸಿಕೊಟ್ಟರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...